Homeಕರ್ನಾಟಕರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ನೀಡಿದ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರ್ನಾಟಕದ ರೈತರು ಅಭೂತಪೂರ್ವವಾಗಿ ಬೆಂಬಲಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಆರಂಭಗೊಂಡ ಹೆದ್ದಾರಿ ಬಂದ್ ಹೋರಾಟ ಬಹುತೇಕ ಯಶಸ್ವಿಯಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

ಸಿಂಧನೂರಿನ ಶ್ರೀಪುರಂ ಜಂಕ್ಷನ್ ನಲ್ಲಿ ಹೆದ್ದಾರಿ ಬಂದ್ ಯಶಸ್ವಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ಹೊಸದಿಲ್ಲಿಯಲ್ಲಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ದಿಟ್ಟ ಹೋರಾಟವನ್ನು ಬೆಂಬಲಿಸಿ ದಿನಾಂಕ: 6.02.2021 ಶನಿವಾರ ಶ್ರೀಪುರಂಜಂಕ್ಷನಲ್ಲಿ ರೈತ ವಿರೋಧಿ ಕೃಷಿ ಕಾನೂನು ರದ್ದಿತಿ ಹೋರಾಟ ಸಮಿತಿ ಸಿಂಧನೂರು ವತಿಯಿಂದ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡಸಿದ ಪ್ರತಿಭಟನೆಕಾರರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಟಗಾರರಾದ ಡಿ ಎಚ್ ಕಂಬಳಿ ಮಾತನಾಡಿ, “ಕಾರ್ಪೊರೇಟ್ ಕಂಪನಿಗಳಿಗೆ ದೇಶ ಒತ್ತೆ ಇಡುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಈ ರೀತಿ ಕರಾಳ ಕಾನೂನುಗಳನ್ನು ತರುವುದರ ಮುಖಾಂತರ ಕೋಟ್ಯಂತರ ರೈತರ ಹೊಟ್ಟಗೆ ಚೂರಿ ಹಾಕಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಸ ನೀಡುವುದಿಲ್ಲ” ಎಂದರು.

ರಸ್ತೆ ತಡೆಯ ಕಾರಣಕ್ಕಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋಮಿಟರ್‌ಗಟ್ಟಲೆ ವಾಹನ ನಿಲುಗಡೆಯಾಗಿದ್ದವು ಹೋರಾಟದಲ್ಲಿ ಒಕ್ಕೂಟದ ಸಂಚಾಲಕ ರಾದ ಚೆಂದ್ರಶೇಖರ್ ಗೊರೆಬಾಳ, ಸಮುದಾಯದ ಎಸ್ ದೇವೇಂದ್ರಗೌಡ, ರೈತ ಸಂಘಟನೆಯ ಶರಣಪ್ಪ ಮಳ್ಳಿ, ಅಮೀನ್ ಪಾಷ, ದಿದ್ದಿಗಿ ಶಿವರಾಜ್, ಬಸವಕೇಂದ್ರದ ವೀರಭದ್ರ ಗೌಡ ಅಮರಾಪುರ, ಜಿಲಾ ನಿಪಾಷ ಜಾಹಗೀರದಾರ್, ಮನುಜಮತ ಬಳಗದ ಖಾದರ ಸುಬಾನಿ, ಬಸವರಾಜ ಬಾದರ್ಲಿ, ಸಮದ್ ಚೌದ್ರಿ, ಮಂಜುನಾಥ ಗಾಂಧಿನಗರ, ಬಿ.ಎನ್ ಯರದಿಹಾಳ, ಬಸರಾಜ ಎಕ್ಕಿ, ರಮೇಶ ಪಾಟೀಲ್ ದೇಶಪ್ರೇಮಿ ಯುವಾಂದೋಲನದ ಚಾಂದ್ ಪಾಷ್, ಯಂಕಪ್ಪ ಕೆಂಗಲ್ ಸೇರಿದಂತೆ ಇತರರಿದ್ದರು.

ಕೋಲಾರ ವರದಿ

ದೆಹಲಿಯ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗಡಿಗಳಲ್ಲಿ ಇಂಟರ್ನೆಟ್ ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಂಗಾರಪೇಟೆ – ಕೋಲಾರ ರಸ್ತೆ ತಡೆ ಮಾಡಲಾಯಿತು. ಈ ವೇಳೆ ಹತ್ತಾರು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಪ್ರತಿಭಟನೆ

ರಾಜ್ಯದ್ಯಾಂತ ನಡೆದ ಹೆದ್ದಾರಿ ತಡೆಯ ಚಿತ್ರಗಳು ಕೆಳಗಿನಂತಿವೆ.

ದಾವಣಗೆರೆಯಲ್ಲಿ ಬೃಹತ್ ಹೆದ್ದಾರಿ ತಡೆ ಹೋರಾಟ
ವಿಜಯಪುರದಲ್ಲಿ ರಸ್ತೆ ತಡೆ
ಬಳ್ಳಾರಿಯಲ್ಲಿ ಹೋರಾಟ
ಭದ್ರಾವತಿಯಲ್ಲಿ ಹೋರಾಟ
ಯಲಹಂಕದಲ್ಲಿ ಚಕ್ಕಾ ಜಾಮ್
ಚಿಕ್ಕಬಳ್ಳಾಪುರದಲ್ಲಿ ಹೋರಾಟ
ರಾಯಚೂರಿನಲ್ಲಿ ರಸ್ತೆ ತಡೆ
ಹರಪನಹಳ್ಳಿಯಲ್ಲಿ ರಸ್ತೆ ತಡೆ
ರಾಯಚೂರಿನಲ್ಲಿ ಹೆದ್ದಾರಿ ತಡೆ
ನಾಗಮಂಗಲದಲ್ಲಿ ಹೋರಾಟ
ಬೆಳಗಾವಿಯಲ್ಲಿ ಹೋರಾಟ
ನಂಜನಗೂಡಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ರಸ್ತೆ ತಡೆ, ಬಂಧನ
ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಕಲಬುರಗಿಯಲ್ಲಿ ರಾಸ್ತ ರೋಕ್
ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ
ಹಾಸನದಲ್ಲಿ ರಸ್ತೆ ತಡೆ
ಕುರುಗೋಡಿನಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....