Homeಕರ್ನಾಟಕರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ನೀಡಿದ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರ್ನಾಟಕದ ರೈತರು ಅಭೂತಪೂರ್ವವಾಗಿ ಬೆಂಬಲಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಆರಂಭಗೊಂಡ ಹೆದ್ದಾರಿ ಬಂದ್ ಹೋರಾಟ ಬಹುತೇಕ ಯಶಸ್ವಿಯಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

ಸಿಂಧನೂರಿನ ಶ್ರೀಪುರಂ ಜಂಕ್ಷನ್ ನಲ್ಲಿ ಹೆದ್ದಾರಿ ಬಂದ್ ಯಶಸ್ವಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ಹೊಸದಿಲ್ಲಿಯಲ್ಲಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ದಿಟ್ಟ ಹೋರಾಟವನ್ನು ಬೆಂಬಲಿಸಿ ದಿನಾಂಕ: 6.02.2021 ಶನಿವಾರ ಶ್ರೀಪುರಂಜಂಕ್ಷನಲ್ಲಿ ರೈತ ವಿರೋಧಿ ಕೃಷಿ ಕಾನೂನು ರದ್ದಿತಿ ಹೋರಾಟ ಸಮಿತಿ ಸಿಂಧನೂರು ವತಿಯಿಂದ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡಸಿದ ಪ್ರತಿಭಟನೆಕಾರರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಟಗಾರರಾದ ಡಿ ಎಚ್ ಕಂಬಳಿ ಮಾತನಾಡಿ, “ಕಾರ್ಪೊರೇಟ್ ಕಂಪನಿಗಳಿಗೆ ದೇಶ ಒತ್ತೆ ಇಡುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಈ ರೀತಿ ಕರಾಳ ಕಾನೂನುಗಳನ್ನು ತರುವುದರ ಮುಖಾಂತರ ಕೋಟ್ಯಂತರ ರೈತರ ಹೊಟ್ಟಗೆ ಚೂರಿ ಹಾಕಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಸ ನೀಡುವುದಿಲ್ಲ” ಎಂದರು.

ರಸ್ತೆ ತಡೆಯ ಕಾರಣಕ್ಕಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋಮಿಟರ್‌ಗಟ್ಟಲೆ ವಾಹನ ನಿಲುಗಡೆಯಾಗಿದ್ದವು ಹೋರಾಟದಲ್ಲಿ ಒಕ್ಕೂಟದ ಸಂಚಾಲಕ ರಾದ ಚೆಂದ್ರಶೇಖರ್ ಗೊರೆಬಾಳ, ಸಮುದಾಯದ ಎಸ್ ದೇವೇಂದ್ರಗೌಡ, ರೈತ ಸಂಘಟನೆಯ ಶರಣಪ್ಪ ಮಳ್ಳಿ, ಅಮೀನ್ ಪಾಷ, ದಿದ್ದಿಗಿ ಶಿವರಾಜ್, ಬಸವಕೇಂದ್ರದ ವೀರಭದ್ರ ಗೌಡ ಅಮರಾಪುರ, ಜಿಲಾ ನಿಪಾಷ ಜಾಹಗೀರದಾರ್, ಮನುಜಮತ ಬಳಗದ ಖಾದರ ಸುಬಾನಿ, ಬಸವರಾಜ ಬಾದರ್ಲಿ, ಸಮದ್ ಚೌದ್ರಿ, ಮಂಜುನಾಥ ಗಾಂಧಿನಗರ, ಬಿ.ಎನ್ ಯರದಿಹಾಳ, ಬಸರಾಜ ಎಕ್ಕಿ, ರಮೇಶ ಪಾಟೀಲ್ ದೇಶಪ್ರೇಮಿ ಯುವಾಂದೋಲನದ ಚಾಂದ್ ಪಾಷ್, ಯಂಕಪ್ಪ ಕೆಂಗಲ್ ಸೇರಿದಂತೆ ಇತರರಿದ್ದರು.

ಕೋಲಾರ ವರದಿ

ದೆಹಲಿಯ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗಡಿಗಳಲ್ಲಿ ಇಂಟರ್ನೆಟ್ ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಂಗಾರಪೇಟೆ – ಕೋಲಾರ ರಸ್ತೆ ತಡೆ ಮಾಡಲಾಯಿತು. ಈ ವೇಳೆ ಹತ್ತಾರು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಪ್ರತಿಭಟನೆ

ರಾಜ್ಯದ್ಯಾಂತ ನಡೆದ ಹೆದ್ದಾರಿ ತಡೆಯ ಚಿತ್ರಗಳು ಕೆಳಗಿನಂತಿವೆ.

ದಾವಣಗೆರೆಯಲ್ಲಿ ಬೃಹತ್ ಹೆದ್ದಾರಿ ತಡೆ ಹೋರಾಟ
ವಿಜಯಪುರದಲ್ಲಿ ರಸ್ತೆ ತಡೆ
ಬಳ್ಳಾರಿಯಲ್ಲಿ ಹೋರಾಟ
ಭದ್ರಾವತಿಯಲ್ಲಿ ಹೋರಾಟ
ಯಲಹಂಕದಲ್ಲಿ ಚಕ್ಕಾ ಜಾಮ್
ಚಿಕ್ಕಬಳ್ಳಾಪುರದಲ್ಲಿ ಹೋರಾಟ
ರಾಯಚೂರಿನಲ್ಲಿ ರಸ್ತೆ ತಡೆ
ಹರಪನಹಳ್ಳಿಯಲ್ಲಿ ರಸ್ತೆ ತಡೆ
ರಾಯಚೂರಿನಲ್ಲಿ ಹೆದ್ದಾರಿ ತಡೆ
ನಾಗಮಂಗಲದಲ್ಲಿ ಹೋರಾಟ
ಬೆಳಗಾವಿಯಲ್ಲಿ ಹೋರಾಟ
ನಂಜನಗೂಡಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ರಸ್ತೆ ತಡೆ, ಬಂಧನ
ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಕಲಬುರಗಿಯಲ್ಲಿ ರಾಸ್ತ ರೋಕ್
ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ
ಹಾಸನದಲ್ಲಿ ರಸ್ತೆ ತಡೆ
ಕುರುಗೋಡಿನಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...