Homeಕರ್ನಾಟಕರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ನೀಡಿದ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರ್ನಾಟಕದ ರೈತರು ಅಭೂತಪೂರ್ವವಾಗಿ ಬೆಂಬಲಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಆರಂಭಗೊಂಡ ಹೆದ್ದಾರಿ ಬಂದ್ ಹೋರಾಟ ಬಹುತೇಕ ಯಶಸ್ವಿಯಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

ಸಿಂಧನೂರಿನ ಶ್ರೀಪುರಂ ಜಂಕ್ಷನ್ ನಲ್ಲಿ ಹೆದ್ದಾರಿ ಬಂದ್ ಯಶಸ್ವಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ಹೊಸದಿಲ್ಲಿಯಲ್ಲಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ದಿಟ್ಟ ಹೋರಾಟವನ್ನು ಬೆಂಬಲಿಸಿ ದಿನಾಂಕ: 6.02.2021 ಶನಿವಾರ ಶ್ರೀಪುರಂಜಂಕ್ಷನಲ್ಲಿ ರೈತ ವಿರೋಧಿ ಕೃಷಿ ಕಾನೂನು ರದ್ದಿತಿ ಹೋರಾಟ ಸಮಿತಿ ಸಿಂಧನೂರು ವತಿಯಿಂದ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡಸಿದ ಪ್ರತಿಭಟನೆಕಾರರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಟಗಾರರಾದ ಡಿ ಎಚ್ ಕಂಬಳಿ ಮಾತನಾಡಿ, “ಕಾರ್ಪೊರೇಟ್ ಕಂಪನಿಗಳಿಗೆ ದೇಶ ಒತ್ತೆ ಇಡುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಈ ರೀತಿ ಕರಾಳ ಕಾನೂನುಗಳನ್ನು ತರುವುದರ ಮುಖಾಂತರ ಕೋಟ್ಯಂತರ ರೈತರ ಹೊಟ್ಟಗೆ ಚೂರಿ ಹಾಕಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಸ ನೀಡುವುದಿಲ್ಲ” ಎಂದರು.

ರಸ್ತೆ ತಡೆಯ ಕಾರಣಕ್ಕಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋಮಿಟರ್‌ಗಟ್ಟಲೆ ವಾಹನ ನಿಲುಗಡೆಯಾಗಿದ್ದವು ಹೋರಾಟದಲ್ಲಿ ಒಕ್ಕೂಟದ ಸಂಚಾಲಕ ರಾದ ಚೆಂದ್ರಶೇಖರ್ ಗೊರೆಬಾಳ, ಸಮುದಾಯದ ಎಸ್ ದೇವೇಂದ್ರಗೌಡ, ರೈತ ಸಂಘಟನೆಯ ಶರಣಪ್ಪ ಮಳ್ಳಿ, ಅಮೀನ್ ಪಾಷ, ದಿದ್ದಿಗಿ ಶಿವರಾಜ್, ಬಸವಕೇಂದ್ರದ ವೀರಭದ್ರ ಗೌಡ ಅಮರಾಪುರ, ಜಿಲಾ ನಿಪಾಷ ಜಾಹಗೀರದಾರ್, ಮನುಜಮತ ಬಳಗದ ಖಾದರ ಸುಬಾನಿ, ಬಸವರಾಜ ಬಾದರ್ಲಿ, ಸಮದ್ ಚೌದ್ರಿ, ಮಂಜುನಾಥ ಗಾಂಧಿನಗರ, ಬಿ.ಎನ್ ಯರದಿಹಾಳ, ಬಸರಾಜ ಎಕ್ಕಿ, ರಮೇಶ ಪಾಟೀಲ್ ದೇಶಪ್ರೇಮಿ ಯುವಾಂದೋಲನದ ಚಾಂದ್ ಪಾಷ್, ಯಂಕಪ್ಪ ಕೆಂಗಲ್ ಸೇರಿದಂತೆ ಇತರರಿದ್ದರು.

ಕೋಲಾರ ವರದಿ

ದೆಹಲಿಯ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗಡಿಗಳಲ್ಲಿ ಇಂಟರ್ನೆಟ್ ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಂಗಾರಪೇಟೆ – ಕೋಲಾರ ರಸ್ತೆ ತಡೆ ಮಾಡಲಾಯಿತು. ಈ ವೇಳೆ ಹತ್ತಾರು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಪ್ರತಿಭಟನೆ

ರಾಜ್ಯದ್ಯಾಂತ ನಡೆದ ಹೆದ್ದಾರಿ ತಡೆಯ ಚಿತ್ರಗಳು ಕೆಳಗಿನಂತಿವೆ.

ದಾವಣಗೆರೆಯಲ್ಲಿ ಬೃಹತ್ ಹೆದ್ದಾರಿ ತಡೆ ಹೋರಾಟ
ವಿಜಯಪುರದಲ್ಲಿ ರಸ್ತೆ ತಡೆ
ಬಳ್ಳಾರಿಯಲ್ಲಿ ಹೋರಾಟ
ಭದ್ರಾವತಿಯಲ್ಲಿ ಹೋರಾಟ
ಯಲಹಂಕದಲ್ಲಿ ಚಕ್ಕಾ ಜಾಮ್
ಚಿಕ್ಕಬಳ್ಳಾಪುರದಲ್ಲಿ ಹೋರಾಟ
ರಾಯಚೂರಿನಲ್ಲಿ ರಸ್ತೆ ತಡೆ
ಹರಪನಹಳ್ಳಿಯಲ್ಲಿ ರಸ್ತೆ ತಡೆ
ರಾಯಚೂರಿನಲ್ಲಿ ಹೆದ್ದಾರಿ ತಡೆ
ನಾಗಮಂಗಲದಲ್ಲಿ ಹೋರಾಟ
ಬೆಳಗಾವಿಯಲ್ಲಿ ಹೋರಾಟ
ನಂಜನಗೂಡಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ರಸ್ತೆ ತಡೆ, ಬಂಧನ
ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಕಲಬುರಗಿಯಲ್ಲಿ ರಾಸ್ತ ರೋಕ್
ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ
ಹಾಸನದಲ್ಲಿ ರಸ್ತೆ ತಡೆ
ಕುರುಗೋಡಿನಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...