Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...