Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...