Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...