Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...