Homeಕರ್ನಾಟಕಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ: ವಾಣಿವಿಲಾಸ ಆಸ್ಪತ್ರೆ ವೈದ್ಯ/ದಾದಿಯರಿಗೆ ಮೆಚ್ಚುಗೆಯ ಮಹಾಪೂರ

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ದೊಡ್ಡ ಮಟ್ಟದ ಭೀತಿ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳದೇ, ಬೆಡ್ ಸಿಗದೇ, ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನಪ್ಪುತ್ತಿರುವ ಹಲವಾರು ವರದಿಗಳು ಕಂಡುಬರುತ್ತಿವೆ. ಈ ಮಧ್ಯೆಯೆ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಮತ್ತು ದಾದಿಗಳು ಕೊರೊನಾ ಸೋಂಕಿತ 100 ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮೂಲಕ ಭರವಸೆ ತುಂಬಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಹೆಚ್ಚು. ಸದಾ ಕಾಲ ಅವರ ಸಹಾಯಕ್ಕೊಬ್ಬರೂ ಇರಲೇಬೇಕು. ಅವರಿಗೂ ಸೋಂಕು ಹರಡುವ ಆತಂಕವಿರುತ್ತದೆ. ಮಗುಗೂ ಹರಡಬಹುದೆಂಬ ಭೀತಿ. ಇನ್ನು ವೈದ್ಯರು ಮತ್ತು ಸ್ಟಾಪ್‌ ನರ್ಸ್ ಹೆಚ್ಚು ಕಾಲ ರೋಗಿಯ ಸಮಯ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಈ ಎಲ್ಲಾ ಅಡೆತಡೆಗಳನ್ನು ನಮ್ಮ ವೈದ್ಯರು ಮೆಟ್ಟಿನಿಂತಿದ್ದಾರೆ. ಗುರುವಾರ ರಾತ್ರಿ 100ನೇ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

ಗುರುವಾರ ರಾತ್ರಿಯೇ ನಾಲ್ಕು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆಯಾಗಿದೆ. ಆ ಸಂಭ್ರಮಕ್ಕೆ ವೈದ್ಯರು “ವಾಣಿವಿಲಾಸ ಟಿಸಿಸಿ ಟೀಮ್ 100” ಎಂಬ ಪೋಸ್ಟರ್ ಹಿಡಿದು ಮಗುವಿನೊಂದಿಗೆ ಚಿತ್ರ ತೆಗೆಸಿಕೊಂಡಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಎಲ್ಲಾ ನವಜಾತ ಶಿಶುಗಳು ಸಹ ಕೋವಿಡ್ ನೆಗಟಿವ್ ಬಂದಿವೆ.

ಗರ್ಭಿಣಿ ಕೊರೊನಾ ಸೋಂಕಿತರನ್ನು ಹಾರೈಕೆ ಮಾಡುವುದು ಸವಾಲಿನ ಕೆಲಸ. ದಿನವಿಡಿ ಪಿಪಿಇ ಕಿಟ್‌ಗಳನ್ನು ಧರಿಸಿರುವ ವೈದ್ಯರು ಶೌಚಾಲಯ ಬಳಸುವುದು ಕಷ್ಟಕರವಾಗುತ್ತದೆ. ಕೆಲವೊಮ್ಮೆ ವಯಸ್ಕ ಡೈಪರ್ ಧರಿಸಿ ಕೆಲಸ ಮಾಡಬೇಕಾದ ಪರಿಸ್ಥಿತಿಗಳು ಬಂದಿವೆ. ಒಂದು ವಾರ ಸತತ ಕೆಲಸ ಮಾಡುವ ಅವರು 5 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಕೊನೆ ದಿನ ಕೋವಿಡ್ ಟೆಸ್ಟ್ ಮಾಡಿಸಿ ನೆಗಟಿವ್ ಬಂದರೆ ಮಾತ್ರ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ಇಷ್ಟೆಲ್ಲಾ ವಿಷಮ ಪರಿಸ್ಥಿತಿಯಲ್ಲಿಯೂ ಯಶಸ್ವಿ ಹೆರಿಗೆ ಮಾಡಿಸುವಲ್ಲಿ ಸಫಲವಾಗಿರುವ ವೈದ್ಯರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ವಿಕ್ಟೋರಿಯಾ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸರಾಸರಿ 3000 ಹೆರಿಗೆ ಮಾಡಿಸಲಾಗುತ್ತದೆ. ಈಗ ವೈದ್ಯರಿಗೆ ಕೋವಿಡ್ ಮತ್ತು ಕೋವಿಡ್ ಅಲ್ಲದ ಗರ್ಭಿಣಿಯನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ. ಒಂದೇ ವಾರದಲ್ಲಿ 66 ಹೆರಿಗೆಗಳಾಗಿದ್ದು 140 ಕೊರೊನಾ ಸೋಂಕಿತ ಗರ್ಭಿಣಿಯರು ದಾಖಲಾಗಿದ್ದಾರೆ. ಕೊರೊನಾ ಸೋಂಕಿತ ಗರ್ಭಿಣಿಯರಿಗೆಂದೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸದ್ಯ ಅಲ್ಲಿ 350 ಕೊರೊನಾ ಸೋಂಕಿತ ಗರ್ಭಿಣಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 150 ಜನರು ತುರ್ತು ಆರೈಕೆ ಕೇಂದ್ರದಲ್ಲಿದ್ದಾರೆ.

ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಮೇ 09ರಂದು ಯಶಸ್ವಿ ಹೆರಿಗೆ ಮಾಡಿಸಿದ್ದವು. ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ, ನಮ್ಮ ಕಾರ್ಯ ಮುಂದುವರೆಯುತ್ತಲೇ ಇದೆ. ಈ ಹಿಂದೆ ಗರ್ಭಿಣಿಯರ ವಾರ್ಡ್ ಅಂದರೆ ಅವರ ಎಲ್ಲಾ ಸಂಬಂಧಿಗಳು ಸೇರಿ ತುಂಬಿ ತುಳುಕುತ್ತಿತ್ತು. ಎಲ್ಲರ ಮುಖದಲ್ಲಿ ತಮ್ಮ ಮನಗೆ ಹೊಸ ಪ್ರತಿನಿಧಿ ಬಂದ ಖುಷಿ ಕಾಣುತ್ತಿತ್ತು. ಆದರೆ ಈಗ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸೋಂಕಿನ ಭಯಕ್ಕೆ ರೋಗಿಯೊಂದಿಗೆ ಹೆಚ್ಚು ಮಾತನಾಡಲು ಸಹ ಆಗುತ್ತಿಲ್ಲ. ನೆಮ್ಮದಿಯೆಂದರೆ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಯಾವೊಬ್ಬ ವೈದ್ಯರು ಸಹ ಸೋಂಕಿಗೆ ತುತ್ತಾಗಿಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಜಿ.ಎಸ್ ತಿಳಿಸಿದ್ದಾರೆ.

ಇದುವರೆಗೂ ಜನಿಸಿರುವ 100 ಮಕ್ಕಳಲ್ಲಿ 76 ಪ್ರಕರಣಗಳಲ್ಲಿ ಸಿಸೇರಿಯನ್ ಅಗತ್ಯವಾಗಿದೆ. ನಾಲ್ಕು ಜೊತೆಗೆ ಅವಳಿ ಮಕ್ಕಳು ಸಹ ಜನಿಸಿವೆ. ಎಲ್ಲಾ ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಲದಲ್ಲಿ ತಮ್ಮ ಕರ್ತವ್ಯನಿಷ್ಠೆ ಮೆರೆಯುತ್ತಿರುವ ಈ ವೈದ್ಯರಿಗೆ ಮತ್ತು ಸ್ಟಾಪ್‌ ನರ್ಸ್‌ಗಳಿಗೆ ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿದ್ದರೂ ತಮ್ಮ ಕಂದಮ್ಮನನ್ನು ಯಶಸ್ವಿಯಾಗಿ ರಕ್ಷಿಸಿದ ಆರೋಗ್ಯ ಸಿಬ್ಬಂದಿಗಳ ಕುರಿತು ಬಾಣಂತಿಯರು ಅಕ್ಕರೆಯ ಭಾವ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿ “ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು” ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...