Homeಮುಖಪುಟ'ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್...

‘ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್ ಪ್ರತಿಕ್ರಿಯೆ

- Advertisement -
- Advertisement -

ಗುರುವಾರ ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ನಿಂದನೀಯ ಹೇಳಿಕೆಯನ್ನು ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಖಂಡಿಸಿದ್ದಾರೆ.

ಈ ರೀತಿಯ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾರ್ವಜನಿಕವಾಗಿ ಖಂಡಿಸಬೇಕು. ”ಇಂತಹ ವರ್ತನೆ” ಪ್ರದರ್ಶಿಸಲು ಬಿಜೆಪಿ ಮತ್ತು ಆರೆಸ್ಸೆಸ್ ಮುಕ್ತ ಅವಕಾಶ ನೀಡಿದೆ ಎಂದು ತರೂರ್ ಆರೋಪಿಸಿದ್ದಾರೆ.

”ಡ್ಯಾನಿಶ್ ಅಲಿ ಅವರ ಬಗ್ಗೆ ರಮೇಶ್ ಬಿಧುರಿ ಅವರ ಭೀಕರ ವರ್ತನೆಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ ಮತ್ತು ಅಂತಹ ನಡವಳಿಕೆ ಮರುಕಳಿಸದಂತೆ ನೋಡಿಕೊಳ್ಳಲು ಅವರಿಗೆ ಶಿಕ್ಷೆ ನೀಡಬೇಕು” ಎಂದು ಹೇಳಿದರು.

”ದ್ವೇಷ ಮತ್ತು ತಿರಸ್ಕಾದಂತಹ ಧೋರಣೆಗಳಿಗೆ ಬಿಜೆಪಿ, ಆರ್‌ಎಸ್‌ಎಸ್ ಮುಕ್ತ ಅವಕಾಶಗಳನ್ನು ನೀಡಿದೆ. ಇಂತಹ ವಿಷವು ಹಲವು ಸ್ಥಳಗಳಲ್ಲಿ ಮತ್ತು ಈಗ ಸಂಸತ್ತಿನಲ್ಲಿಯೂ ಸಹ ಆಗಾಗ್ಗೆ ಮುಕ್ತ ಅಭಿವ್ಯಕ್ತಿಯಯಾಗಿ ಹೊರಹೊಮ್ಮುತ್ತಿದೆ ಎಂದು ತರೂರ್ ಹೇಳಿದರು.

”ಮೋದಿ ಮತ್ತು ಭಾಗವತ್ ಅಂತಹ ವಿಚಾರಗಳನ್ನು ಸಾರ್ವಜನಿಕವಾಗಿ ಖಂಡಿಸಬೇಕು. ಅವರು ಭಾರತವನ್ನು ಒಗ್ಗೂಡಿಸಲು ಬಯಸುತ್ತಾರೆ ಎಂದು ಪ್ರತಿಜ್ಞೆ ಮಾಡಬೇಕು, ಅದನ್ನು ವಿಭಜಿಸಲು ಅಲ್ಲ. ಇಲ್ಲದಿದ್ದರೆ ಈ ದ್ವೇಷದ ವಿಷವು ನಮ್ಮ ಸಮಾಜ ಮತ್ತು ರಾಷ್ಟ್ರವನ್ನು ಬಲಿಪಡೆಯುತ್ತದೆ” ಎಂದು ಅವರು ಹೇಳಿದರು.

ರಮೇಶ್ ಬಿಧುರಿ ಹೇಳಿದ್ದೇನು?

ಸಂಸತ್ತಿನ ಕೆಳಮನೆಯಲ್ಲಿ ಚಂದ್ರಯಾನ-3ರ ಯಶಸ್ಸಿನ ಚರ್ಚೆಯ ವೇಳೆ ಬಿಜೆಪಿ ನಾಯಕರ ಈ ದ್ವೇಷಪೂರಿತ ಹೇಳಿಕೆ ಹೊರಬಿದ್ದಿದೆ. ”ಯೇ ಉಗ್ರವಾದಿ (ಉಗ್ರವಾದಿ), ಯೇ ಆಟಂಕ್ವಾಡಿ ಹೈ, ಉಗ್ರವಾದಿ ಹೈ, ಯೇ ಆಂತಂಕ್ವಾದಿ (ಭಯೋತ್ಪಾದಕ) ಹೈ,” ಎಂದು ಬಿಧುರಿ ಹೇಳುವುದನ್ನು ಕೇಳಬಹುದು.

 ಬಿಜೆಪಿ ಸಂಸದ ರಮೇಶ್ ಬಿಧುರಿ ಅಮಾನತು ಮಾಡುವಂತೆ ಪ್ರತಿಪಕ್ಷಗಳ ಆಗ್ರಹ

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಧುರಿಯವರು ನೀಡಿದ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಮತ್ತು ರಾಜಕಾರಣಿಗಳಲ್ಲಿ ವ್ಯಾಪಕ ಆಕ್ರೋಶವನ್ನು ಉಂಟುಮಾಡಿತು. ಲೋಕಸಭೆಯಲ್ಲಿ ಚಂದ್ರಯಾನ-3 ಮಿಷನ್ ಕುರಿತ ಚರ್ಚೆಯ ವೇಳೆ ಅವರು ಮಾಡಿದ ಟೀಕೆಗಳನ್ನು ಕಲಾಪದಿಂದ ಹೊರಹಾಕಲಾಯಿತು. ಸ್ಪೀಕರ್ ಓಂ ಬಿರ್ಲಾ ಅವರಿಗೆ ಎಚ್ಚರಿಕೆ ನೀಡಿದರು, ಆದಾಗ್ಯೂ, ಹಲವಾರು ಸಂಸದರು ಅವರ ಕಾಮೆಂಟ್‌ಗಳನ್ನು “ದ್ವೇಷ ಭಾಷಣ” ಎಂದು ಲೇಬಲ್ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಕರೆ ನೀಡಿದರು.

ಈ ಮಧ್ಯೆ ಡ್ಯಾನಿಶ್ ಅಲಿ ಘಟನೆಯನ್ನು “ಹೃದಯವಿದ್ರಾವಕ” ಎಂದು ಕರೆದರು ಮತ್ತು ಲೋಕಸಭೆಯಲ್ಲಿ ಅವಹೇಳನಕಾರಿ ಹೇಳಿಕೆಗಳಿಗಾಗಿ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಸದನದ ಸದಸ್ಯತ್ವವನ್ನು ತ್ಯಜಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದರು. ”ಇದು ದ್ವೇಷದ ಭಾಷಣಕ್ಕಿಂತ ಕಡಿಮೆ ಏನಲ್ಲ. ಇದು ಸದನದಲ್ಲಿ ನಿಂತು ಮಾಡಿದ ದ್ವೇಷದ ಭಾಷಣವಾಗಿದೆ” ಎಂದು ಅಲಿ ಹೇಳಿದರು.

ಘಟನೆಯ ನಂತರ ಬಿಧುರಿ ಅವರಿಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ನಾಯಕರು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ: ಮುಸ್ಲಿಂ ವಿರೋಧಿ ನಿಂದನೆಗೆ ಡ್ಯಾನಿಶ್ ಅಲಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...