Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...