Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...