Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...