Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...