Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...