Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...