Homeಆ ವಾರದ ಕಣ್ಣೋಟಸ್ವಾತಂತ್ರ್ಯವೀರ ಟಿಪ್ಪುಗೆ ಇದೆಂಥಾ ಅನ್ಯಾಯ!

ಸ್ವಾತಂತ್ರ್ಯವೀರ ಟಿಪ್ಪುಗೆ ಇದೆಂಥಾ ಅನ್ಯಾಯ!

- Advertisement -
- Advertisement -

ಕರ್ನಾಟಕದ ವೀರಾಧಿವೀರ, ಧೀರಾಧಿದೀರ ಟಿಪ್ಪು ಸುಲ್ತಾನನನ್ನು ಸಂಘ ಪರಿವಾರದವರು ಟೀಕಿಸಿದಷ್ಟೂ ಆತ ಜನರಿಗೆ ಹತ್ತಿರವಾಗುತ್ತಾನೆ, ವರ್ಚಸ್ಸನ್ನು ಹೆಚ್ಚಿಸಿಕೊಳ್ಳುತ್ತಾನೆ. ಯಾಕೆಂದರೆ ಆತನನ್ನು ವಿರೋಧಿಸಲು ಸಂಘಿಗಳು ಪ್ರಯೋಗಿಸುತ್ತಿರುವ ತರ್ಕಗಳೇ ಅಷ್ಟು ಹಾಸ್ಯಾಸ್ಪದವಾಗಿವೆ!

ಉದಾಹರಣೆಗೆ ಗೋ ಮಧುಸೂದನ ಮಂಡಿಸಿರುವ ತರ್ಕವನ್ನೇ ತೆಗೆದುಕೊಳ್ಳಿ. `ಟಿಪ್ಪು ಭಾರತಕ್ಕೆ ಅಫಘಾನಿಸ್ತಾನದ ರಾಜ ಅಹಮದ್ ಷಾ ಅಬ್ದಾಲಿಯನ್ನು ಆಹ್ವಾನಿಸಿದ್ದ ಎಂಬುದನ್ನು ಮರೆಯಬಾರದು. ಇದರಿಂದಲೇ ಆತ ದೇಶದ್ರೋಹಿ ಆಗಿದ್ದ ಎಂಬುದು ಸಾಬೀತಾಗುತ್ತದೆ’’ ಎಂದು ಅಬ್ಬರಿಸಿದ್ದಾನೆ. ಹಲವು ಇತಿಹಾಸ ತಜ್ಞರು ಸ್ಪಷ್ಟಪಡಿಸಿರುವಂತೆ ಅಫಘಾನಿಸ್ತಾನದ ರಾಜ ಅಹಮದ್ ಷಾ ಅಬ್ದಾಲಿ ಭಾರತದ ಮೇಲೆ ಮೊದಲು ದಾಳಿ ಇಟ್ಟದ್ದು 1748ರಲ್ಲಿ. ಆಗಿನ್ನೂ ಟಿಪ್ಪು ಹುಟ್ಟೇ ಇರಲಿಲ್ಲ! ಅಷ್ಟೇ ಅಲ್ಲ, ಅಹಮದ್ ಷಾ ಅಬ್ದಾಲಿ 1761ರಲ್ಲಿ ಮರಾಠರನ್ನು ಪಾಣಿಪಟ್ ಯುದ್ಧದಲ್ಲಿ ಸೋಲಿಸಿದಾಗ ಟಿಪ್ಪು ಹತ್ತು ವರ್ಷದ ಬಾಲಕ!!

ಇದನ್ನು ಓದಿ: ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಅಪರಾಧ: ಮಾಜಿ ಸಿಎಂ ಸಿದ್ದರಾಮಯ್ಯ

ಟಿಪ್ಪು ಭಾರತಕ್ಕೆ ಆಹ್ವಾನಿಸಿದ್ದು ಅಹಮದ್ ಷಾ ಅಬ್ದಾಲಿಯ ಮೊಮ್ಮಗ ಜಮನ್ ಷಾ ದುರ್ರಾನಿಯನ್ನು. ಅಷ್ಟೇ ಅಲ್ಲ, ಟಿಪ್ಪು ಫ್ರಾನ್ಸಿನ ನೆಪೋಲಿಯನ್ ಬೋನಾಪಾರ್ಟೆಯನ್ನೂ, ಟರ್ಕಿಯ ಒಟ್ಟಮಾನ್ ಸಾಮ್ರಾಜ್ಯದ ದೊರೆಯನ್ನೂ ಭಾರತಕ್ಕೆ ಆಹ್ವಾನಿಸಿದ್ದ ಎಂಬುದೂ ಐತಿಹಾಸಿಕ ವಾಸ್ತವ. ಅದನ್ನು ಯಾರೂ ನಿರಾಕರಿಸಲಾಗುವುದಿಲ್ಲ. ಆದರೆ ಅವರೆಲ್ಲರನ್ನು ಟಿಪ್ಪು ಯಾತಕ್ಕೆ ಆಹ್ವಾನಿಸಿದ್ದ ಎಂಬುದು ಮುಖ್ಯ. ಆತ ಅವರೆಲ್ಲರೊಂದಿಗೆ ಜೊತೆಗೂಡಿ `ಮಹಾಮೈತ್ರಿಕೂಟ’ವನ್ನು ನಿರ್ಮಿಸಲು ಹೊರಟಿದ್ದು ಭಾರತದಿಂದ ಬ್ರಿಟಿಷರನ್ನು ಒದ್ದೋಡಿಸುವ ಉದ್ದೇಶದಿಂದಾಗಿ ಎಂಬುದು ವಾಸ್ತವ.

ಇಲ್ಲಿ ಸಂಘಿಗಳ ತರ್ಕದಲ್ಲಿ ಎರಡು ದೋಷಗಳು ಎದ್ದುಕಾಣುತ್ತವೆ.

ಒಂದು: ಬ್ರಿಟಿಷರ ವಿರುದ್ಧ ಯುದ್ಧ ಮಾಡಲು ಅಫಘಾನಿಸ್ತಾನ, ಫ್ರಾನ್ಸ್ ಮತ್ತು ಟರ್ಕಿಯ ಸೈನ್ಯಗಳನ್ನು ಭಾರತಕ್ಕೆ ಟಿಪ್ಪು ಆಹ್ವಾನಿಸಿದ್ದು `ದೇಶದ್ರೋಹ’ ಕೆಲಸವಾದರೆ ಸಂಘಿ ಮತ್ತು ಗೋ-ಮ ಪ್ರಕಾರ ಬ್ರಿಟಿಷರು ನ್ಯಾಯಸಮ್ಮತವಾಗಿ ಭಾರತದ ದೊರೆಗಳಾಗಿದ್ದರು! ಆ ಕಾರಣಕ್ಕೇ ಆತ ಮಾಡಿದ್ದು ದೇಶದ್ರೋಹದ ಕೆಲಸ!! ಇದಕ್ಕಿಂತ ಹುಚ್ಚುತನ ಮತ್ತೊಂದಿರಲು ಸಾಧ್ಯವೇ?

ಇದನ್ನು ಓದಿ: ಇತಿಹಾಸ ಮರೆತ ‘ಟಿಪ್ಪುವಿನ ಹಿಂದೂ ವೀರಸಂಗಾತಿಗಳು’ 

ಎರಡನೆಯದು: ಯುದ್ಧದಲ್ಲಿ ವೈರಿಯ ವೈರಿ ತನ್ನ ಮಿತ್ರ ಎಂಬ ತರ್ಕವನ್ನು ಹಲವರು ಈ ಹಿಂದೆ ಅಳವಡಿಸಿಕೊಂಡಿದ್ದಿದೆ. ಆ ನಿಟ್ಟಿನಲ್ಲೇ ಟಿಪ್ಪು ಸುಲ್ತಾನ ಕೂಡ ಬ್ರಿಟಿಷರ ವಿರುದ್ಧ ಹೋರಾಡಲು ಬೇರೆ ದೇಶಗಳ ಸೈನ್ಯದೊಂದಿಗೆ ಕೈ ಜೋಡಿಸಲು ಯತ್ನಿಸಿದ್ದು. ಟಿಪ್ಪುವಿನ ಈ ಯತ್ನವೂ ದೇಶದ್ರೋಹಕ್ಕೆ ಸಮಾನವಾದರೆ, ಸುಭಾಷ್ ಚಂದ್ರ ಬೋಸ್ ಅವರೂ ಬ್ರಿಟಿಷರನ್ನು ಭಾರತದಿಂದ ಒದ್ದೋಡಿಸಲು ಜರ್ಮನಿ, ಇಟಲಿ ಮತ್ತು ಜಪಾನ್ ಜೊತೆ ಕೈಜೋಡಿಸಿದ್ದೂ ದೇಶಕ್ಕೆ ಬಗೆದ ದ್ರೋಹವಾಗತ್ತದೆ ತಾನೆ? ಟಿಪ್ಪುಗೆ ಮಾತ್ರ ಯಾಕೆ ಅವಮಾನ ಮತ್ತು ಬೋಸ್ ಅವರಿಗೆ ಮಾತ್ರ ಯಾಕೆ ಸ್ಥಾನಮಾನ?

ಇನ್ನು ಸಿ.ಟಿ.ರವಿ `ಇವತ್ತು ಟಿಪ್ಪುವಿನ ಜನ್ಮೋತ್ಸವವನ್ನು ಆಚರಿಸಿದಂತೆ ನೂರು ವರ್ಷಗಳ ನಂತರ ಒಸಾಮಾ ಬಿನ್ ಲಾಡನ್ ಮತ್ತು ದಾವೂದ್ ಇಬ್ರಾಹಿಂ ಅವರ ಜನ್ಮೋತ್ಸವವನ್ನೂ ಆಚರಿಸಬೇಕು ಎನ್ನುತ್ತೀರಾ’’ ಎಂದು ಹಲುಬಿದ್ದಾನೆ. ಈ ಸಿ.ಟಿ. ರವಿಗೆ ಸ್ವಾತಂತ್ರ ಹೋರಾಟದಲ್ಲಿ ಮಡಿದವರಿಗೂ, ಭಯೋತ್ಪಾದಕರಿಗೂ ವ್ಯತ್ಯಾಸವೇ ಗೊತ್ತಿಲ್ಲ. ಅದಕ್ಕೆ ಕಾರಣಗಳೂ ಹಲವಾರು ಇವೆ. ಮೊದಲನೆಯದಾಗಿ, ಈ ರವಿ ಮತ್ತಾತನ ಬಳಗ ಮೆಚ್ಚಿಕೊಂಡಾಡುವ ಮತ್ತು ಹಿಂಬಾಲಿಸುವ ಆರೆಸ್ಸೆಸ್‍ನ ಯಾವ ನಾಯಕನೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿಯುವುದಿರಲಿ, ತಮ್ಮನ್ನು ತೊಡಗಿಸಿಕೊಳ್ಳುವುದಿರಲಿ, ಕನಿಷ್ಠ ಕೈಯೆತ್ತಿ ಧಿಕ್ಕಾರ ಕೂಗುವಷ್ಟು ಧೈರ್ಯವನ್ನಾಗಲಿ, ದಿಟ್ಟತನವನ್ನಾಗಲಿ ಪ್ರದರ್ಶಿಸಿದವರಲ್ಲ. ಅಷ್ಟೇ ಅಲ್ಲ, ಇವರ ಮುಖ್ಯ ನೇತಾರ ವಿ.ಡಿ.ಸಾವರ್ಕರ್ ಬ್ರಿಟಿಷರಿಗೆ ಶರಣಾಗಿ, ಅವರೇ ತನ್ನ ದೊರೆಗಳೆಂದು ಒಪ್ಪಿಕೊಂಡು, ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲವೆಂದು ಮುಚ್ಚಳಿಕೆ ಬರೆದುಕೊಟ್ಟು ಜೈಲಿನಿಂದ ಬಿಡುಗಡೆಯನ್ನು ಗಿಟ್ಟಿಸಿಕೊಂಡ `ಪುಣ್ಯಾತ್ಮ.’

ಎರಡನೆಯದಾಗಿ, ರವಿಯ ಅಚ್ಚುಮೆಚ್ಚಿನ ವಿಶ್ವಹಿಂದೂ ಮಹಾಸಭಾ ಗಾಂಧಿಯವರ `ಭಾರತ ಬಿಟ್ಟು ತೊಲಗಿ’ ಸಂಗ್ರಾಮವನ್ನು ವಿರೋಧಿಸಿತ್ತಲ್ಲದೆ `ಯಾವ ಹಿಂದೂ ಕೂಡ ತಮ್ಮ ಕೆಲಸಗಳನ್ನು ಬಿಟ್ಟು ಬ್ರಿಟಿಷರ ವಿರುದ್ಧದ ಸಂಗ್ರಾಮದಲ್ಲಿ ಭಾಗವಹಿಸಕೂಡದು’’ ಎಂದು ಠರಾವು ಹೊರಡಿಸಿದ್ದ `ಧೀರ’ರ ಸಂಘಟನೆ!!

ಇದನ್ನು ಓದಿ: ಆಧುನಿಕ ಶಿಕ್ಷಣದ ಪ್ರವಾದಿ, ವೈಚಾರಿಕ ಚಿಂತಕ : ಸೈಯದ್ ಅಹ್ಮದ್ ಖಾನ್  

ಹಿಂದೂತ್ವವಾದಿಗಳ ತರ್ಕರಹಿತ ವಾದದಲ್ಲಿ ಮತ್ತೊಂದು ಯಾವುದೆಂದರೆ ಟಿಪ್ಪು 800 ರಿಂದ 8000 ದೇವಸ್ಥಾನಗಳನ್ನು ಧ್ವಂಸ ಮಾಡಿದ್ದರಿಂದ ಆತನನ್ನು ಮೆಚ್ಚಲಾಗದು ಎಂಬುದು. ಟಿಪ್ಪು ಹಲವಾರು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದು ನಿಜವಾದರೂ ನಿಖರವಾಗಿ ಆತ ಎಷ್ಟು ದೇವಸ್ಥಾನಗಳನ್ನು ನಾಶಮಾಡಿದ ಎಂಬುದನ್ನು ಲೆಕ್ಕ ಇಟ್ಟವರಿಲ್ಲ. ಇರಲಿ, ದೇವಸ್ಥಾನಗಳನ್ನು ನಾಶ ಮಾಡಿದವರನ್ನು ಮೆಚ್ಚಲಾಗುವುದಿಲ್ಲ ಎನ್ನುವ ಹಿಂದೂತ್ವವಾದಿಗಳ ನಿಲುವು ಸರಿಯಾದದ್ದೇ ಆದರೆ ಅವರು ಮರಾಠರನ್ನು ಅದು ಹೇಗೆ ಮೆಚ್ಚುತ್ತಾರೆ?
ಈ ಪ್ರಶ್ನೆ ಯಾಕೆ ಮುಖ್ಯ ಎಂದರೆ ಇದೇ ಮರಾಠರು ಕರ್ನಾಟಕದಲ್ಲಿರುವ ಒಂದು ದೇವಸ್ಥಾನವನ್ನು ನಾಶ ಮಾಡಿದ್ದರು. ಅದೂ ಯಾವ ದೇವಸ್ಥಾನವನ್ನು ಎನ್ನುತ್ತೀರಿ? ದೇಶದಾದ್ಯಂತ ಬೌದ್ಧ ಧರ್ಮವನ್ನು ದಮನ ಮಾಡಿ ಪುರೋಹಿತಶಾಹಿಗಳ ಹಿತಾಸಕ್ತಿ ಕಾಪಾಡುವ ಹಿಂದೂ ಧರ್ಮಕ್ಕೆ ಮರುಜೀವ ಕೊಟ್ಟ ಶಂಕರಾಚಾರ್ಯರೇ ಶೃಂಗೇರಿಯಲ್ಲಿ ಸ್ಥಾಪಿಸಿದ್ದ ಪೀಠದಲ್ಲಿರುವ ಶಾರದಾ ದೇವಿ ಪೂಜಾಮಂದಿರವನ್ನು!

1791ರಲ್ಲಿ ರಘುನಾಥರಾವ್ ಪಟ್ಟವರ್ಧನ್ ನೇತೃತ್ವದಲ್ಲಿ ಶೃಂಗೇರಿಯ ಮೇಲೆ ದಾಳಿ ಮಾಡಿದ ಮರಾಠರು ಹಲವಾರು ಬ್ರಾಹ್ಮಣರನ್ನು ಕೊಂದು, ಮಠದಲ್ಲಿದ್ದ ಹಣ ಮತ್ತು ಆಭರಣಗಳನ್ನು ಲೂಟಿ ಮಾಡಿದ್ದರಲ್ಲದೆ ಪವಿತ್ರ ಶಾರದಾ ದೇವಿಯ ಮೂರ್ತಿಯನ್ನೂ ಕಿತ್ತು ಬಿಸಾಡುವಷ್ಟು ಉದ್ಧಟತನವನ್ನು ಮೆರೆದಿದ್ದರು. ಅಷ್ಟೇ ಅಲ್ಲ, ದಿಲೀಪ್ ಮೆನನ್ ಎಂಬ ಇತಿಹಾಸ ತಜ್ಞ ಹೇಳುವ ಪ್ರಕಾರ “ಟಿಪ್ಪು ಇದ್ದ 18ನೇ ಶತಮಾನದಲ್ಲಿ ವಿವಿಧ ಸೈನ್ಯಗಳು ದೇವಸ್ಥಾನಗಳ ಮೇಲೆ ದಾಳಿ ಮಾಡುವುದು ಸಹಜವಾಗಿತ್ತು. ಯಾಕೆಂದರೆ ಆಗ ದೇವಸ್ಥಾನಗಳ ಗರ್ಭಗುಡಿಯಲ್ಲಿ ಚಿನ್ನಾಭರಣಗಳನ್ನು ಬಚ್ಚಿಡುತ್ತಿದ್ದರು. ಹಾಗೆ ನೋಡಿದರೆ, ಆ ಶತಮಾನದಲ್ಲಿ ಮರಾಠರು ಪೂರ್ವ ಮತ್ತು ದಕ್ಷಿಣ ಭಾರತದಲ್ಲಿದ್ದ ದೇವಸ್ಥಾನಗಳನ್ನು ನಿರಂತರವಾಗಿ ಕೊಳ್ಳೆಹೊಡೆಯುತ್ತಿದ್ದರು. ಅವರು ಗರ್ಭಗುಡಿಯಲ್ಲೇ ಸೈನ್ಯಗಳ ತುಕಡಿಗಳನಿಟ್ಟು ದೇವಸ್ಥಾನದಲ್ಲಿ ಸಿಗುವ ಲೋಹಗಳನ್ನೆಲ್ಲ ಕರಗಿಸಿ ಯುದ್ಧಕ್ಕೆ ಬೇಕಾದ ಅಸ್ತ್ರಗಳನ್ನು ತಯಾರಿಸುತ್ತಿದ್ದರು.”

ಈ ಕಾರಣಕ್ಕೆ ಟಿಪ್ಪುವನ್ನು ಹಿಂದೂತ್ವವಾದಿಗಳು ವಿರೋಧಿಸುವುದಾದರೆ ಶೃಂಗೇರಿ ದೇವಸ್ಥಾನದ ಮೇಲೆ ದಾಳಿ ಮಾಡಿದ ಮರಾಠರನ್ನೇ ಮೊದಲು ವಿರೋಧಿಸಬೇಕಲ್ಲವೇ? ಯಾಕೆ ಮರಾಠರಿಗೆ ಒಂದು ನ್ಯಾಯ, ಟಿಪ್ಪುಗೆ ಇನ್ನೊಂದು ನ್ಯಾಯ?

25 ನವೆಂಬರ್, 2015 (ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...