Homeಮುಖಪುಟಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

- Advertisement -
- Advertisement -

ಈಗಾಗಲೆ ಪಂಚರಾಜ್ಯ ವಿಧಾನಸಭಾ ಚುನಾವಣೆಗಳು ಪ್ರಾರಂಭವಾಗಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಎರಡನೆ ಹಂತದ ಚುನಾವಣೆ ನಡೆಯುತ್ತಿದೆ. ದೇಶವೆ ಕೂತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದ ಅತ್ಯಂತ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ‘ನಂದಿಗ್ರಾಮ’ದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ವೇಳೆ ಅಲ್ಲಿ ಆಡಳಿತರೂಢ ಟಿಎಂಸಿ, ಹೊಸದಾಗಿ ಎದ್ದು ನಿಲ್ಲಲು ಪ್ರಯತ್ನಿಸುತ್ತಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟಗಳ ನಡುವೆ ಸ್ಪರ್ಧೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟದ ಜೊತೆ ಸೇರದೆ ಎಡಪಕ್ಷವಾದ ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ-ಕಮ್ಯುನಿಷ್ಟ್ ‌(SUCI-C) ಪಕ್ಷವು ಏಕಾಂಗಿ ಹೋರಾಟ ನಡೆಸುತ್ತಿದೆ. ಪಕ್ಷವು ಪ್ರಸ್ತುತ ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ ಒಟ್ಟು 258 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದು ದೇಶದ ಪ್ರಮುಖ ಎಡಪಕ್ಷಗಳಾಗಿರುವ ಸಿಪಿಐಎಂ ಮತ್ತು ಸಿಪಿಐಗಿಂತಲೂ ಹೆಚ್ಚಾಗಿದೆ. ಸಿಪಿಐಎಂ 227 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐ 50 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

SUCI-C ಪಕ್ಷವು ಪಶ್ಚಿಮ ಬಂಗಾಳದಲ್ಲಿ ಒಟ್ಟು 193 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ 27 ಮತ್ತು ಅಸ್ಸಾಂನಲ್ಲಿ 29 ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸುತ್ತಿದೆ. ಈ ಎಲ್ಲಾ ಕ್ಷೇತ್ರದಲ್ಲಿ ಇತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ಏಪ್ರಿಲ್ 1: ರಾಷ್ಟ್ರೀಯ ಜುಮ್ಲಾ ದಿನವನ್ನಾಗಿ ಆಚರಿಸಿದ ನೆಟ್ಟಿಗರು – #NationalJumlaDay ಟ್ರೆಂಡಿಂಗ್‌!

ಪಕ್ಷವು 2019 ರ ಸಂಸತ್ ಚುನಾವಣೆಯಲ್ಲಿ ಕೂಡಾ ಏಕಾಂಗಿಯಾಗಿ ಹೋರಾಟ ನಡೆಸಿತ್ತು. ಒಟ್ಟು 23 ರಾಜ್ಯಗಳಲ್ಲಿ 119 ಸ್ಥಾನಗಳಲ್ಲಿ ಹೋರಾಟ ಮಾಡಿತ್ತು. ಪಶ್ಚಿಮ ಬಂಗಾಳ ರಾಜ್ಯವೊಂದರಲ್ಲೇ ಪಕ್ಷದ 42 ಅಭ್ಯರ್ಥಿಗಳು ಇದ್ದರು. ಕೇರಳದಲ್ಲಿ 9, ಬಿಹಾರ, ಒರಿಸ್ಸಾ ಮತ್ತು ಕರ್ನಾಟಕದಲ್ಲಿ ತಲಾ 8, ಅಂಡಮಾನ್ ಮತ್ತು ಪಾಂಡಿಚೆರಿಯಲ್ಲಿ ತಲಾ ಒಬ್ಬೊಬ್ಬರು ಅಭ್ಯರ್ಥಿಗಳನ್ನು ಪಕ್ಷವು ಸ್ಪರ್ಧೆಗೆ ಇಳಿಸಿತ್ತು.

SUCI-C ದೇಶದಾದ್ಯಂತ 27 ರಾಜ್ಯಗಳಲ್ಲಿ ಘಟಕಗಳನ್ನು ಹೊಂದಿದೆಯಾದರೂ ಪಶ್ಚಿಮ ಬಂಗಾಳ, ಅಸ್ಸಾಂ, ಒರಿಸ್ಸಾ, ಜಾರ್ಖಂಡ್, ಹರಿಯಾಣ ಮತ್ತು ಕರ್ನಾಟಕದಲ್ಲಿ ಗಟ್ಟಿಯಾದ ಅಸ್ತಿತ್ವವನ್ನು ಹೊಂದಿದೆ. 2009 ರಲ್ಲಿ ಪಶ್ಚಿಮ ಬಂಗಾಳದಲ್ಲಿ SUCI-C ಒಬ್ಬ ಸಂಸದನನ್ನು ಹೊಂದಿತ್ತು.

ಪಕ್ಷದ ಪ್ರಧಾನ ಕಚೇರಿ ಕೋಲ್ಕತಾದಲ್ಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರೋವಾಶ್ ಘೋಷ್ ಕಾರ್ಯನಿರ್ವಹಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ನಂದಿಗ್ರಾಮ ಚಳುವಳಿಯಲ್ಲಿ ಅಂದಿನ ಎಡಪಕ್ಷ ಸರ್ಕಾರದ ವಿರುದ್ದ ಪ್ರಬಲ ಹೋರಾಟವನ್ನು SUCI-C ಕಟ್ಟಿತ್ತು. ಆ ಹೊತ್ತಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಜೊತೆ ಸೇರಿಕೊಂಡಿತ್ತು. ಆದರೆ ನಂತರ ಮಮತಾ ಬ್ಯಾನರ್ಜಿ ಅವರ ನೀತಿಗಳಿಂದ ಬೇಸೆತ್ತು ಅವರ ಸಖ್ಯದಿಂದ ದೂರ ಸರಿದು ತಮ್ಮದೆ ಆದ ಹೋರಾಟವನ್ನು ಕಟ್ಟುತ್ತಾ ಬರುತ್ತಿದೆ.

ಇದನ್ನೂ ಓದಿ: ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ SUCI-C ಪಕ್ಷ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಉಮಾ ಅವರು, “ಪ್ರಸ್ತುತ ಎಲ್ಲಾ ಪಕ್ಷಗಳು ಬಂಡವಾಳಶಾಹಿಗಳ ಪರವಾಗಿ ಮಾತ್ರವೆ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಇದಕ್ಕೆ ದಾರಿ ಮಾಡಿಕೊಟ್ಟರೂ ಬಿಜೆಪಿ ಅವುಗಳನ್ನೂ ಮೀರಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಸಿಂಗೂರು, ನಂದಿಗ್ರಾಮ ಹೋರಾಟದ ಸಮಯದಲ್ಲಿ ಬಂಡವಾಳಶಾಹಿಗಳಿಗೆ ಕೆಂಪುಹಾಸು ಹಾಸಿದ್ದೇ ಸಿಪಿಐಎಂ ನೇತೃತ್ವದ ಎಡಪಂಥೀಯ ಸರ್ಕಾರವಾಗಿದೆ. ನಮ್ಮ ವಿರೋಧದ ನಡುವೆಯ ಪೊಲೀಸರನ್ನು ಕಳುಹಿಸಿ ಸರ್ಕಾರದ ಕುಮ್ಮಕ್ಕಿನಿಂದ ರೈತರ ಮೇಲೆ ಹಲ್ಲೆ ನಡೆದಿದೆ” ಎಂದು ಆರೋಪಿಸಿದ್ದಾರೆ.

“ಈ ಹೊತ್ತಲ್ಲಿ ನಾವು ಜನರ ನಡುವೆ ನಿಂತು ಹೋರಾಟ ಕಟ್ಟಿದ್ದೇವೆ. ಈ ಹೋರಾಟದ ಕ್ರೆಡಿಟನ್ನು ಪ್ರಸ್ತುತ ಯಾರು ಯಾರೋ ಪಡೆದುಕೊಳ್ಳುತ್ತಿದ್ದಾರೆ. ಆ ಹೊತ್ತಲ್ಲಿ ತೃಣಮೂಲ ಪಕ್ಷವು ನಮ್ಮ ಜೊತೆ ಸೇರಿ ಸೀಟು ಹೊಂದಾಣಿಕೆ ಮಾಡಿಕೊಂಡಿತ್ತು. ಆಮೇಲೆ ಟಿಎಂಸಿ ಯಾವುದೇ ಜನಪರ ಕೆಲಸ ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡ ಪರಿಣಾಮ ಎಲ್ಲರಿಂದಲೂ ದೂರವಿದ್ದು ಹೋರಾಟ ನಿರತರಾಗಿದ್ದೇವೆ” ಎಂದು ಕೆ. ಉಮಾ ತಿಳಿಸಿದ್ದಾರೆ.

“ಅಧಿಕಾರ ಬಲ ಮತ್ತು ಹಣ ಬಲದಿಂದ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ನಮ್ಮ ಮೌಲ್ಯಾಧಾರಿತ ರಾಜಕೀಯವು ಅದಕ್ಕೆ ಸಮನಾಗಿ ಸ್ಪರ್ಧಿಸಲು ಆಗುತ್ತಿಲ್ಲ ಎಂಬುವುದು ನಿಜವಾಗಿದೆ. ಆದರೆ ಈ ಭಾರಿ ಎಲ್ಲಾ ಕಡೆಯಿಂದಲೂ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಹಾಗಾಗಿ ಹೆಚ್ಚಿನ ಕಡೆಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ” ಎಂದು ಅವರು ಹೇಳಿದ್ದಾರೆ

ಇದನ್ನೂ ಓದಿ: 66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...