Homeಮುಖಪುಟಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

- Advertisement -
- Advertisement -

ಈಗಾಗಲೆ ಪಂಚರಾಜ್ಯ ವಿಧಾನಸಭಾ ಚುನಾವಣೆಗಳು ಪ್ರಾರಂಭವಾಗಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಎರಡನೆ ಹಂತದ ಚುನಾವಣೆ ನಡೆಯುತ್ತಿದೆ. ದೇಶವೆ ಕೂತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದ ಅತ್ಯಂತ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ‘ನಂದಿಗ್ರಾಮ’ದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ವೇಳೆ ಅಲ್ಲಿ ಆಡಳಿತರೂಢ ಟಿಎಂಸಿ, ಹೊಸದಾಗಿ ಎದ್ದು ನಿಲ್ಲಲು ಪ್ರಯತ್ನಿಸುತ್ತಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟಗಳ ನಡುವೆ ಸ್ಪರ್ಧೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟದ ಜೊತೆ ಸೇರದೆ ಎಡಪಕ್ಷವಾದ ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ-ಕಮ್ಯುನಿಷ್ಟ್ ‌(SUCI-C) ಪಕ್ಷವು ಏಕಾಂಗಿ ಹೋರಾಟ ನಡೆಸುತ್ತಿದೆ. ಪಕ್ಷವು ಪ್ರಸ್ತುತ ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ ಒಟ್ಟು 258 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದು ದೇಶದ ಪ್ರಮುಖ ಎಡಪಕ್ಷಗಳಾಗಿರುವ ಸಿಪಿಐಎಂ ಮತ್ತು ಸಿಪಿಐಗಿಂತಲೂ ಹೆಚ್ಚಾಗಿದೆ. ಸಿಪಿಐಎಂ 227 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐ 50 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

SUCI-C ಪಕ್ಷವು ಪಶ್ಚಿಮ ಬಂಗಾಳದಲ್ಲಿ ಒಟ್ಟು 193 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ 27 ಮತ್ತು ಅಸ್ಸಾಂನಲ್ಲಿ 29 ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸುತ್ತಿದೆ. ಈ ಎಲ್ಲಾ ಕ್ಷೇತ್ರದಲ್ಲಿ ಇತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ಏಪ್ರಿಲ್ 1: ರಾಷ್ಟ್ರೀಯ ಜುಮ್ಲಾ ದಿನವನ್ನಾಗಿ ಆಚರಿಸಿದ ನೆಟ್ಟಿಗರು – #NationalJumlaDay ಟ್ರೆಂಡಿಂಗ್‌!

ಪಕ್ಷವು 2019 ರ ಸಂಸತ್ ಚುನಾವಣೆಯಲ್ಲಿ ಕೂಡಾ ಏಕಾಂಗಿಯಾಗಿ ಹೋರಾಟ ನಡೆಸಿತ್ತು. ಒಟ್ಟು 23 ರಾಜ್ಯಗಳಲ್ಲಿ 119 ಸ್ಥಾನಗಳಲ್ಲಿ ಹೋರಾಟ ಮಾಡಿತ್ತು. ಪಶ್ಚಿಮ ಬಂಗಾಳ ರಾಜ್ಯವೊಂದರಲ್ಲೇ ಪಕ್ಷದ 42 ಅಭ್ಯರ್ಥಿಗಳು ಇದ್ದರು. ಕೇರಳದಲ್ಲಿ 9, ಬಿಹಾರ, ಒರಿಸ್ಸಾ ಮತ್ತು ಕರ್ನಾಟಕದಲ್ಲಿ ತಲಾ 8, ಅಂಡಮಾನ್ ಮತ್ತು ಪಾಂಡಿಚೆರಿಯಲ್ಲಿ ತಲಾ ಒಬ್ಬೊಬ್ಬರು ಅಭ್ಯರ್ಥಿಗಳನ್ನು ಪಕ್ಷವು ಸ್ಪರ್ಧೆಗೆ ಇಳಿಸಿತ್ತು.

SUCI-C ದೇಶದಾದ್ಯಂತ 27 ರಾಜ್ಯಗಳಲ್ಲಿ ಘಟಕಗಳನ್ನು ಹೊಂದಿದೆಯಾದರೂ ಪಶ್ಚಿಮ ಬಂಗಾಳ, ಅಸ್ಸಾಂ, ಒರಿಸ್ಸಾ, ಜಾರ್ಖಂಡ್, ಹರಿಯಾಣ ಮತ್ತು ಕರ್ನಾಟಕದಲ್ಲಿ ಗಟ್ಟಿಯಾದ ಅಸ್ತಿತ್ವವನ್ನು ಹೊಂದಿದೆ. 2009 ರಲ್ಲಿ ಪಶ್ಚಿಮ ಬಂಗಾಳದಲ್ಲಿ SUCI-C ಒಬ್ಬ ಸಂಸದನನ್ನು ಹೊಂದಿತ್ತು.

ಪಕ್ಷದ ಪ್ರಧಾನ ಕಚೇರಿ ಕೋಲ್ಕತಾದಲ್ಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರೋವಾಶ್ ಘೋಷ್ ಕಾರ್ಯನಿರ್ವಹಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ನಂದಿಗ್ರಾಮ ಚಳುವಳಿಯಲ್ಲಿ ಅಂದಿನ ಎಡಪಕ್ಷ ಸರ್ಕಾರದ ವಿರುದ್ದ ಪ್ರಬಲ ಹೋರಾಟವನ್ನು SUCI-C ಕಟ್ಟಿತ್ತು. ಆ ಹೊತ್ತಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಜೊತೆ ಸೇರಿಕೊಂಡಿತ್ತು. ಆದರೆ ನಂತರ ಮಮತಾ ಬ್ಯಾನರ್ಜಿ ಅವರ ನೀತಿಗಳಿಂದ ಬೇಸೆತ್ತು ಅವರ ಸಖ್ಯದಿಂದ ದೂರ ಸರಿದು ತಮ್ಮದೆ ಆದ ಹೋರಾಟವನ್ನು ಕಟ್ಟುತ್ತಾ ಬರುತ್ತಿದೆ.

ಇದನ್ನೂ ಓದಿ: ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ SUCI-C ಪಕ್ಷ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಉಮಾ ಅವರು, “ಪ್ರಸ್ತುತ ಎಲ್ಲಾ ಪಕ್ಷಗಳು ಬಂಡವಾಳಶಾಹಿಗಳ ಪರವಾಗಿ ಮಾತ್ರವೆ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಇದಕ್ಕೆ ದಾರಿ ಮಾಡಿಕೊಟ್ಟರೂ ಬಿಜೆಪಿ ಅವುಗಳನ್ನೂ ಮೀರಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಸಿಂಗೂರು, ನಂದಿಗ್ರಾಮ ಹೋರಾಟದ ಸಮಯದಲ್ಲಿ ಬಂಡವಾಳಶಾಹಿಗಳಿಗೆ ಕೆಂಪುಹಾಸು ಹಾಸಿದ್ದೇ ಸಿಪಿಐಎಂ ನೇತೃತ್ವದ ಎಡಪಂಥೀಯ ಸರ್ಕಾರವಾಗಿದೆ. ನಮ್ಮ ವಿರೋಧದ ನಡುವೆಯ ಪೊಲೀಸರನ್ನು ಕಳುಹಿಸಿ ಸರ್ಕಾರದ ಕುಮ್ಮಕ್ಕಿನಿಂದ ರೈತರ ಮೇಲೆ ಹಲ್ಲೆ ನಡೆದಿದೆ” ಎಂದು ಆರೋಪಿಸಿದ್ದಾರೆ.

“ಈ ಹೊತ್ತಲ್ಲಿ ನಾವು ಜನರ ನಡುವೆ ನಿಂತು ಹೋರಾಟ ಕಟ್ಟಿದ್ದೇವೆ. ಈ ಹೋರಾಟದ ಕ್ರೆಡಿಟನ್ನು ಪ್ರಸ್ತುತ ಯಾರು ಯಾರೋ ಪಡೆದುಕೊಳ್ಳುತ್ತಿದ್ದಾರೆ. ಆ ಹೊತ್ತಲ್ಲಿ ತೃಣಮೂಲ ಪಕ್ಷವು ನಮ್ಮ ಜೊತೆ ಸೇರಿ ಸೀಟು ಹೊಂದಾಣಿಕೆ ಮಾಡಿಕೊಂಡಿತ್ತು. ಆಮೇಲೆ ಟಿಎಂಸಿ ಯಾವುದೇ ಜನಪರ ಕೆಲಸ ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡ ಪರಿಣಾಮ ಎಲ್ಲರಿಂದಲೂ ದೂರವಿದ್ದು ಹೋರಾಟ ನಿರತರಾಗಿದ್ದೇವೆ” ಎಂದು ಕೆ. ಉಮಾ ತಿಳಿಸಿದ್ದಾರೆ.

“ಅಧಿಕಾರ ಬಲ ಮತ್ತು ಹಣ ಬಲದಿಂದ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ನಮ್ಮ ಮೌಲ್ಯಾಧಾರಿತ ರಾಜಕೀಯವು ಅದಕ್ಕೆ ಸಮನಾಗಿ ಸ್ಪರ್ಧಿಸಲು ಆಗುತ್ತಿಲ್ಲ ಎಂಬುವುದು ನಿಜವಾಗಿದೆ. ಆದರೆ ಈ ಭಾರಿ ಎಲ್ಲಾ ಕಡೆಯಿಂದಲೂ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಹಾಗಾಗಿ ಹೆಚ್ಚಿನ ಕಡೆಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ” ಎಂದು ಅವರು ಹೇಳಿದ್ದಾರೆ

ಇದನ್ನೂ ಓದಿ: 66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...