Homeಮುಖಪುಟಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

- Advertisement -
- Advertisement -

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ದೇಶದಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್‌ ನಗರ, ದಕ್ಷಿಣ ಡಾರ್ಫರ್‌, ನ್ಯಾಲಾ, ರಾಜಧಾನಿ ಖಾರ್ಟೂಮ್‌ ಸೇರಿ ವಿವಿಧ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ಶಸ್ತ್ರಸಜ್ಜಿತ ವಾಹನಗಳು, ಮಷೀನ್‌ಗನ್‌ ಜೋಡಿಸಲಾದ ಟ್ರಕ್‌ಗಳು ಜಮಾವಣೆಗೊಂಡಿವೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಈ ಸಂಘರ್ಷದಿಂದ ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ 50 ಲಕ್ಷಕ್ಕಿಂತಲೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಯುದ್ಧಭೀತಿಯಿಂದ ಯಾರೂ ಮನೆಯಿಂದ ಹೊರ ಬರಲಾರದೆ ಪರಿಸ್ಥಿತಿ ಎದುರಾಗಿದೆ. ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್‌ ಕೂಡ ಆಗಿರುವುದರಿಂದ ಇಲ್ಲಿನ ಜನರು ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

 ಇನ್ನು ಕರ್ನಾಟಕದ 31 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಮಂದಿ ಶಿವಮೊಗ್ಗ ಮತ್ತು 19 ಮಂದಿ ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಜನ, ಶಿವಮೊಗ್ಗ ಮತ್ತು 19 ಜನರು, ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

”ಮೂರು ದಿನಗಳಿಂದ ನಾವು ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಡಿಗೆ ಮನೆಯೊಳಗೆ ಸಿಕ್ಕಿಬಿದ್ದಿದ್ದೇವೆ. ಹೊರಗಿನಿಂದ ಪದೇ ಪದೇ ಗುಂಡಿನ ಸದ್ದು ಮತ್ತು ಶೆಲ್‌ಗಳ ಸದ್ದು ಕೇಳಿಸುತ್ತದೆ. ನಮ್ಮ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಮತ್ತು ನಾವು ಭಾರತಕ್ಕೆ ಹೇಗೆ ಹಿಂತಿರುಗುತ್ತೇವೆ ಎಂದು ನಮಗೆ ಖಚಿತವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸುಡಾನ್‌ನಲ್ಲಿ ನೂರಾರು ಭಾರತೀಯರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೂಡಾನ್‌ನಲ್ಲಿ ಕರ್ನಾಟಕದ ಜನರು ಆತಂಕದಲ್ಲಿರುವ ವಿಷಯ ತಿಳಿದು ಅವರ ರಕ್ಷಣೆಗೆ ಮನವಿ ಮಾಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಕಳೆದ ಕೆಲವು ಸಮಯದಿಂದ ಆಹಾರವಿಲ್ಲದೆ ಸುಡಾನ್‌ನ ಅಂತರ್ಯುದ್ಧದಲ್ಲಿ ಸಿಲುಕಿ ತತ್ತರಿಸಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...