Homeಮುಖಪುಟಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

- Advertisement -
- Advertisement -

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ದೇಶದಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್‌ ನಗರ, ದಕ್ಷಿಣ ಡಾರ್ಫರ್‌, ನ್ಯಾಲಾ, ರಾಜಧಾನಿ ಖಾರ್ಟೂಮ್‌ ಸೇರಿ ವಿವಿಧ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ಶಸ್ತ್ರಸಜ್ಜಿತ ವಾಹನಗಳು, ಮಷೀನ್‌ಗನ್‌ ಜೋಡಿಸಲಾದ ಟ್ರಕ್‌ಗಳು ಜಮಾವಣೆಗೊಂಡಿವೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಈ ಸಂಘರ್ಷದಿಂದ ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ 50 ಲಕ್ಷಕ್ಕಿಂತಲೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಯುದ್ಧಭೀತಿಯಿಂದ ಯಾರೂ ಮನೆಯಿಂದ ಹೊರ ಬರಲಾರದೆ ಪರಿಸ್ಥಿತಿ ಎದುರಾಗಿದೆ. ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್‌ ಕೂಡ ಆಗಿರುವುದರಿಂದ ಇಲ್ಲಿನ ಜನರು ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

 ಇನ್ನು ಕರ್ನಾಟಕದ 31 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಮಂದಿ ಶಿವಮೊಗ್ಗ ಮತ್ತು 19 ಮಂದಿ ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಜನ, ಶಿವಮೊಗ್ಗ ಮತ್ತು 19 ಜನರು, ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

”ಮೂರು ದಿನಗಳಿಂದ ನಾವು ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಡಿಗೆ ಮನೆಯೊಳಗೆ ಸಿಕ್ಕಿಬಿದ್ದಿದ್ದೇವೆ. ಹೊರಗಿನಿಂದ ಪದೇ ಪದೇ ಗುಂಡಿನ ಸದ್ದು ಮತ್ತು ಶೆಲ್‌ಗಳ ಸದ್ದು ಕೇಳಿಸುತ್ತದೆ. ನಮ್ಮ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಮತ್ತು ನಾವು ಭಾರತಕ್ಕೆ ಹೇಗೆ ಹಿಂತಿರುಗುತ್ತೇವೆ ಎಂದು ನಮಗೆ ಖಚಿತವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸುಡಾನ್‌ನಲ್ಲಿ ನೂರಾರು ಭಾರತೀಯರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೂಡಾನ್‌ನಲ್ಲಿ ಕರ್ನಾಟಕದ ಜನರು ಆತಂಕದಲ್ಲಿರುವ ವಿಷಯ ತಿಳಿದು ಅವರ ರಕ್ಷಣೆಗೆ ಮನವಿ ಮಾಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಕಳೆದ ಕೆಲವು ಸಮಯದಿಂದ ಆಹಾರವಿಲ್ಲದೆ ಸುಡಾನ್‌ನ ಅಂತರ್ಯುದ್ಧದಲ್ಲಿ ಸಿಲುಕಿ ತತ್ತರಿಸಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....