Homeಮುಖಪುಟಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

- Advertisement -
- Advertisement -

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ದೇಶದಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್‌ ನಗರ, ದಕ್ಷಿಣ ಡಾರ್ಫರ್‌, ನ್ಯಾಲಾ, ರಾಜಧಾನಿ ಖಾರ್ಟೂಮ್‌ ಸೇರಿ ವಿವಿಧ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ಶಸ್ತ್ರಸಜ್ಜಿತ ವಾಹನಗಳು, ಮಷೀನ್‌ಗನ್‌ ಜೋಡಿಸಲಾದ ಟ್ರಕ್‌ಗಳು ಜಮಾವಣೆಗೊಂಡಿವೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಈ ಸಂಘರ್ಷದಿಂದ ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ 50 ಲಕ್ಷಕ್ಕಿಂತಲೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಯುದ್ಧಭೀತಿಯಿಂದ ಯಾರೂ ಮನೆಯಿಂದ ಹೊರ ಬರಲಾರದೆ ಪರಿಸ್ಥಿತಿ ಎದುರಾಗಿದೆ. ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್‌ ಕೂಡ ಆಗಿರುವುದರಿಂದ ಇಲ್ಲಿನ ಜನರು ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

 ಇನ್ನು ಕರ್ನಾಟಕದ 31 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಮಂದಿ ಶಿವಮೊಗ್ಗ ಮತ್ತು 19 ಮಂದಿ ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಜನ, ಶಿವಮೊಗ್ಗ ಮತ್ತು 19 ಜನರು, ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

”ಮೂರು ದಿನಗಳಿಂದ ನಾವು ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಡಿಗೆ ಮನೆಯೊಳಗೆ ಸಿಕ್ಕಿಬಿದ್ದಿದ್ದೇವೆ. ಹೊರಗಿನಿಂದ ಪದೇ ಪದೇ ಗುಂಡಿನ ಸದ್ದು ಮತ್ತು ಶೆಲ್‌ಗಳ ಸದ್ದು ಕೇಳಿಸುತ್ತದೆ. ನಮ್ಮ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಮತ್ತು ನಾವು ಭಾರತಕ್ಕೆ ಹೇಗೆ ಹಿಂತಿರುಗುತ್ತೇವೆ ಎಂದು ನಮಗೆ ಖಚಿತವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸುಡಾನ್‌ನಲ್ಲಿ ನೂರಾರು ಭಾರತೀಯರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೂಡಾನ್‌ನಲ್ಲಿ ಕರ್ನಾಟಕದ ಜನರು ಆತಂಕದಲ್ಲಿರುವ ವಿಷಯ ತಿಳಿದು ಅವರ ರಕ್ಷಣೆಗೆ ಮನವಿ ಮಾಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಕಳೆದ ಕೆಲವು ಸಮಯದಿಂದ ಆಹಾರವಿಲ್ಲದೆ ಸುಡಾನ್‌ನ ಅಂತರ್ಯುದ್ಧದಲ್ಲಿ ಸಿಲುಕಿ ತತ್ತರಿಸಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...