Homeಮುಖಪುಟಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

- Advertisement -
- Advertisement -

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ದೇಶದಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್‌ ನಗರ, ದಕ್ಷಿಣ ಡಾರ್ಫರ್‌, ನ್ಯಾಲಾ, ರಾಜಧಾನಿ ಖಾರ್ಟೂಮ್‌ ಸೇರಿ ವಿವಿಧ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ಶಸ್ತ್ರಸಜ್ಜಿತ ವಾಹನಗಳು, ಮಷೀನ್‌ಗನ್‌ ಜೋಡಿಸಲಾದ ಟ್ರಕ್‌ಗಳು ಜಮಾವಣೆಗೊಂಡಿವೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಈ ಸಂಘರ್ಷದಿಂದ ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ 50 ಲಕ್ಷಕ್ಕಿಂತಲೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಯುದ್ಧಭೀತಿಯಿಂದ ಯಾರೂ ಮನೆಯಿಂದ ಹೊರ ಬರಲಾರದೆ ಪರಿಸ್ಥಿತಿ ಎದುರಾಗಿದೆ. ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್‌ ಕೂಡ ಆಗಿರುವುದರಿಂದ ಇಲ್ಲಿನ ಜನರು ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

 ಇನ್ನು ಕರ್ನಾಟಕದ 31 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಮಂದಿ ಶಿವಮೊಗ್ಗ ಮತ್ತು 19 ಮಂದಿ ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಜನ, ಶಿವಮೊಗ್ಗ ಮತ್ತು 19 ಜನರು, ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

”ಮೂರು ದಿನಗಳಿಂದ ನಾವು ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಡಿಗೆ ಮನೆಯೊಳಗೆ ಸಿಕ್ಕಿಬಿದ್ದಿದ್ದೇವೆ. ಹೊರಗಿನಿಂದ ಪದೇ ಪದೇ ಗುಂಡಿನ ಸದ್ದು ಮತ್ತು ಶೆಲ್‌ಗಳ ಸದ್ದು ಕೇಳಿಸುತ್ತದೆ. ನಮ್ಮ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಮತ್ತು ನಾವು ಭಾರತಕ್ಕೆ ಹೇಗೆ ಹಿಂತಿರುಗುತ್ತೇವೆ ಎಂದು ನಮಗೆ ಖಚಿತವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸುಡಾನ್‌ನಲ್ಲಿ ನೂರಾರು ಭಾರತೀಯರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೂಡಾನ್‌ನಲ್ಲಿ ಕರ್ನಾಟಕದ ಜನರು ಆತಂಕದಲ್ಲಿರುವ ವಿಷಯ ತಿಳಿದು ಅವರ ರಕ್ಷಣೆಗೆ ಮನವಿ ಮಾಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಕಳೆದ ಕೆಲವು ಸಮಯದಿಂದ ಆಹಾರವಿಲ್ಲದೆ ಸುಡಾನ್‌ನ ಅಂತರ್ಯುದ್ಧದಲ್ಲಿ ಸಿಲುಕಿ ತತ್ತರಿಸಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...