Homeಕರ್ನಾಟಕಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

ಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಈಗಾಗಲೇ ಸಾಕಷ್ಟು ಸಾವು-ನೋವು ಸಂಭವಿಸಿದ್ದು, ಅಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ ಜನರನ್ನು ರಕ್ಷಣೆ ಮಾಡಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು. ಇದಕ್ಕೆ ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗಿದ್ದ ವಿದೇಶಾಂಗ ಸಚಿವರು ರಾಜಕೀಯ ಮಾಡಬೇಡಿ ಎಂದರು. ಇದು ಈಗ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ 31 ಕನ್ನಡಿಗರು ಸುಡಾನ್‌ನಲ್ಲಿ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದ್ದಾರೆ. ಕನ್ನಡ ವಿರೋಧಿ ಮೋದಿ ಸರ್ಕಾರವು ಅವರನ್ನು ಸ್ಥಳಾಂತರಿಸುವ ಮತ್ತು ಸುರಕ್ಷಿತವಾಗಿ ವಾಪಸ್ ಕರೆತರುವ ಬದಲಿಗೆ, ಅವರ ಭವಿಷ್ಯದ ಜೊತೆ ಆಟವಾಡುತ್ತಿದೆ. ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ಎಂಪಿಗಳು ಎಲ್ಲಿದ್ದಾರೆ? ನಾಚಿಕೆ ಆಗುತ್ತಿದೆ ಬೊಮ್ಮಾಯಿ!” ಎಂದು ಕಿಡಿಕಾರಿದ್ದಾರೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಇದರ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಶಶಿ ತರೂರ್‌ ಅವರು ಟ್ವೀಟ್ ಮಾಡಿದ್ದು, ಈ ವಿಷಯದ ಬಗ್ಗೆ ಜೈಶಂಕರ್ ಅವರ ಪ್ರತಿಕ್ರಿಯೆ ನನಗೆ ಆಶ್ಚರ್ಯವನ್ನುಂಟು ಮಾಡುತ್ತದೆ. ಸಂಕಷ್ಟದಲ್ಲಿರುವ ಭಾಗದಿಂದ ಸಾರ್ವಜನಿಕ ಪ್ರತಿನಿಧಿಗಳು ಆಗಾಗ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾರೆ ಎಂಬುದು ಅವರಿಗೆ ತಿಳಿದಿದೆ. ಕೋವಿಡ್ ಸಮಯದಲ್ಲಿ ಅವರು ನನಗೆ/ಹಲವಾರು ಸಹಾಯ ಮಾಡಿದ್ದಾರೆ. ಏಕೆ ಆಗಿತ್ತು ಸಿದ್ದರಾಮಯ್ಯ ಅವರ ವಿನಂತಿಯು ”ಭಯಾನಕ”?” ಎಂದು ಜೈ ಶಂಕರ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ಗೌಡ ಮಾತನಾಡಿ, ”ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕರ್ನಾಟಕದ 31 ಜನರು ಅಂತರ್ಯುದ್ಧದಿಂದ ತತ್ತರಿಸಿರುವ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆಹಾರ, ನೀರು ಇಲ್ಲದೆ ಪರದಾಡುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನಿಸಿದರೆ, ವಿದೇಶಾಂಗ ಸಚಿವರ ಗಮನ ಸೆಳೆಯುವುದು ಯಾವುದೇ ನಾಯಕನ ಕರ್ತವ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ವಿಷಯವನ್ನು ಪರಿಶೀಲಿಸುವಂತೆ ಭಾರತದ ವಿದೇಶಾಂಗ ಸಚಿವರನ್ನು ಕೇಳಿದರು. ಆದರೆ ಅವರ ಉತ್ತರವು ಕರ್ನಾಟಕದ ಜನರ ಮೇಲಿನ ಅಹಂಕಾರ, ಕ್ರೋಧ ಮತ್ತು ಹಗೆತನದಿಂದ ತುಂಬಿತ್ತು” ಎಂದು ಹೇಳಿದ್ದಾರೆ.

”ಸುಡಾನ್‌ನಲ್ಲಿ ನಮ್ಮ ಜನರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕನಿಷ್ಠ ಮಾಹಿತಿ ಇದೆಯಾ? ವಿದೇಶಾಂಗ ಸಚಿವರು ಟ್ವಿಟರ್‌ನಲ್ಲಿ ಆಟವಾಡುವ ಬದಲು, ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಉತ್ತಮ. ಅವರು ಸೌಜನ್ಯತೆ ಕಲಿತು, ರಾಜ್ಯದ ಮಾಜಿ ಮುಖ್ಯಮಂತ್ರಿಗಳಿಗೆ ಅಪಮಾನ ಮಾಡುವುದನ್ನು ನಿಲ್ಲಿಸಲಿ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರ ಗೌರವ್ ವಲ್ಲಭ್ ಅವರು, ”ಯುದ್ಧಗಳನ್ನು ನಿಲ್ಲಿಸುವ ಪ್ರಧಾನಮಂತ್ರಿಯ ಸಾಮರ್ಥ್ಯಗಳ ಕುರಿತು ಶ್ರೀ ನಡ್ಡಾ ಅವರ ಹೇಳಿಕೆಯನ್ನು ಗಮನಿಸಿದರೆ (ಅವರ ಪ್ರಕಾರ ಮೋದಿ ಅವರು ಉಕ್ರೇನ್ ಯುದ್ಧವನ್ನು ನಿಲ್ಲಿಸಿದ್ದರು), ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಯುದ್ಧವನ್ನು ನಿಲ್ಲಿಸಿ ಸುಡಾನ್‌ನಿಂದ ಕರ್ನಾಟಕದ 31 ಹಕ್ಕಿಪಿಕ್ಕಿ ಜನರನ್ನು ಯಾವಾಗ ಕರೆತರುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...