Homeಕರ್ನಾಟಕಸುಡಾನ್‌ ಸಂಘರ್ಷ: ಸುರಕ್ಷಿತ ಸ್ಥಳದಲ್ಲಿ ಭಾರತೀಯರು; 200 ಕನ್ನಡಿಗರು ಭಾರತದತ್ತ ಪ್ರಯಾಣ

ಸುಡಾನ್‌ ಸಂಘರ್ಷ: ಸುರಕ್ಷಿತ ಸ್ಥಳದಲ್ಲಿ ಭಾರತೀಯರು; 200 ಕನ್ನಡಿಗರು ಭಾರತದತ್ತ ಪ್ರಯಾಣ

- Advertisement -
- Advertisement -

ಸುಡಾನ್‌ನಲ್ಲಿ ಸೇನಾಪಡೆ ಹಾಗೂ ಅರೆ ಸೇನಾಪಡೆ ನಡುವಿನ ಸಂಘರ್ಷ ನಡೆಯುತ್ತಿದ್ದು, ಇದರಲ್ಲಿ ಭಾರತೀಯರು ಸಿಲುಕಿದ್ದರು. ಅವರನ್ನು ಸುರಕ್ಷಿತ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಕಾರ್ಯಾಚರಣೆ ನಡೆಸುತ್ತಿದೆ.

ಕರ್ನಾಟಕದ ಹಕ್ಕಿಪಿಕ್ಕಿ ಸಮುದಾಯದವರನ್ನು ಸೇರಿದಂತೆ ಭಾರತೀಯರೆಲ್ಲರನ್ನೂ ಸುರಕ್ಷಿತವಾಗಿ ಕರೆತರಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರು ಸರ್ಕಾರದ ಮೇಲೆ ಮುಗಿಬಿದ್ದಿದ್ದರು. ಇದೀಗ ಕೇಂದ್ರ ಸರ್ಕಾರ ಮಂಗಳವಾರ ಕರ್ನಾಟಕದವರನ್ನೂ ಸೇರಿದಂತೆ ಭಾರತದ ಹಲವು ಜನರನ್ನು ಕರೆತರುತ್ತಿದ್ದಾರೆ.

ಎಂಟು ದಿನಗಳಿಂದ ಸಂಕಷ್ಟ ಅನುಭವಿಸಿದ್ದ ಕನ್ನಡಿಗರು ಈ ಬೆಳವಣಿಗೆಯಿಂದಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಊಟವಿಲ್ಲದೇ ಪರಿತಪಿಸಿದ್ದವರು ಇದೀಗ ತಾಯ್ನಾಡಿ ತಲುಪಿದ್ದಾರೆ.

ಮಂಗಳವಾರ ಬೆಳಿಗ್ಗೆ ವ್ಯವಸ್ಥೆ ಮಾಡಿದ್ದ ಬಸ್‌ನಲ್ಲಿ ಪ್ರಯಾಣ ಆರಂಭಿಸಿದ ಸಂದರ್ಭದಲ್ಲಿ ಭಾರತೀಯರು ಹರ್ಷ ವ್ಯಕ್ತಪಡಿಸಿದರು. ”ಸದ್ಯ ನಮ್ಮ ಪ್ರಮಾಣ ಆರಂಭವಾಗಿದೆ. ಸುರಕ್ಷಿತವಾಗಿ ನಮ್ಮನ್ನು ಕರೆದೊಯ್ಯಲಾಗುತ್ತಿದೆ. ಭಾರತಕ್ಕೆ ಯಾವಾಗ ತಲುಪಲಿದ್ದೇವೆ ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

ಮೂರನೇ ಬ್ಯಾಚ್‌ನಲ್ಲಿ 135 ಜನರು ಭಾರತದ ಕಡೆ ಬರುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ತಿಳಿಸಿದ್ದಾರೆ.

‘ಪೋರ್ಟ್ ಸುಡಾನ್‌ನಿಂದ 135 ಭಾರತೀಯರನ್ನು ಒಳಗೊಂಡ ಮೂರನೇ ಬ್ಯಾಚ್ IAF C-130J ವಿಮಾನದ ಮೂಲಕ ಜಿದ್ದಾಕ್ಕೆ ಆಗಮಿಸಿದೆ. ಅಲ್ಲಿಂದ ಎಲ್ಲರನ್ನೂ ಭಾರತಕ್ಕೆ ಕರೆತರಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಮೊದಲ ಬ್ಯಾಚ್‌ನಲ್ಲಿ 278 ಮತ್ತು ಎರಡನೇ ಬ್ಯಾಚ್‌ನಲ್ಲಿ 121 ಜನರನ್ನು ಭಾರತಕ್ಕೆ ಕರೆತರಲಾಗಿದೆ.

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಆಪರೇಷನ್‌ ಕಾವೇರಿ’ ಕಾರ್ಯಾಚರಣೆಗೆ ಸೋಮವಾರ ಚಾಲನೆ ನೀಡಿತ್ತು. ಮೂರು ಸಾವಿರಕ್ಕೂ ಅಧಿಕ ಭಾರತೀಯರು ಅಲ್ಲಿ ಸಿಲುಕಿದ್ದಾರೆ. ಅದರಲ್ಲಿ ಕನ್ನಡಿಗರ ಸಂಖ್ಯೆಯೂ ಹೆಚ್ಚಿದೆ.

ಸಧ್ಯ ಸುಡಾನ್‌ನಲ್ಲಿ ಕದನವಿರಾಮ ಘೋಷಣೆಯಾಗಿದ್ದರೂ ಯುದ್ಧ ನಿಂತಿಲ್ಲ. ಮಂಗಳವಾರವೂ ಕೆಲವೆಡೆ ಸಂಘರ್ಷ ಮುಂದುವರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...