Homeಕರ್ನಾಟಕಯುವಜನರ ಹಠಾತ್ ಸಾವು - ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಯುವಜನರ ಹಠಾತ್ ಸಾವು – ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವ ಹಿನ್ನಲೆ, ಕೊರೊನಾ ಅಥವಾ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸೂಚಿಸಿದ್ದಾರೆ. ಯುವಜನರ ಹಠಾತ್ ಸಾವು

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಮನವಿಯ ಮೇರೆಗೆ ಮುಖ್ಯಮಂತ್ರಿ ಈ ಕ್ರಮಕೈಗೊಂಡಿದ್ದಾರೆ. ಯುವ ಜನರ ಹಠಾತ್ ಸಾವಿನ ಬಗ್ಗೆ ರಾಜಾರಾಂ ತಲ್ಲೂರು ಅವರು ನಿರಂತರವಾಗಿ ಧ್ವನಿ ಎತ್ತುತ್ತಲೆ ಬಂದಿದ್ದರು. ಜೊತೆಗೆ ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಪತ್ರ ಬರೆದಿದ್ದರು. ಯುವಜನರ ಹಠಾತ್ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜಾರಾಂ ಅವರ ಪತ್ರವನ್ನು ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಠಾತ್ ಸಾವಿನ ಬಗ್ಗೆ ಸಂಶೋಧನೆ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ತನ್ನ ಟಿಪ್ಪಣಿಯಲ್ಲಿ, “ಶ್ರೀ ರಾಜಾರಾಂ ತಲ್ಲೂರು, ಹಿರಿಯ ಪತ್ರಕರ್ತರು ಇವರು ತಮ್ಮ ಇ-ಮೇಲ್ ಮೂಲಕ, ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ.

ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುತ್ತಾರೆ.

ಆದ್ದರಿಂದ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ.” ಎಂದು ತಿಳಿಸಿದ್ದಾರೆ.

ತಮ್ಮ ಪತ್ರಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗೆ ಕೃತಜ್ಞತೆ ತಿಳಿಸಿರುವ ರಾಜಾರಾಂ ತಲ್ಲೂರು ಅವರು, “ಜನವರಿ 28ರಂದು ನಾನು ಕಳುಹಿಸಿದ್ದ ಇಮೇಲ್‌ ಆಧರಿಸಿ, ಕರ್ನಾಟಕದ ಮುಖ್ಯಮಂತ್ರಿಯವರು ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡು, ಈ ಹಠಾತ್ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ನಿನ್ನೆ (ಫೆ. 06) ಸೂಚಿಸಿದ್ದಾರೆ” ಎಂದು ಪತ್ರವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

“ರಾಜ್ಯಸರ್ಕಾರ ವಿಳಂಬವಾಗಿಯಾದರೂ ಇಂತಹದೊಂದು ಅಗತ್ಯ ತೀರ್ಮಾನವನ್ನು ಕೈಗೊಳ್ಳುವುದಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಅದಕ್ಕಾಗಿ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿಗಳಿಗೆ ಋಣಿ. ಶಾಸಕಾಂಗ ತೆಗೆದುಕೊಳ್ಳಬಹುದಾದ ತೀರ್ಮಾನ ತೆಗೆದುಕೊಂಡಿದೆ. ಇನ್ನು, ಈ ನಿಟ್ಟಿನಲ್ಲಿ ಕ್ಷಿಪ್ರವಾಗಿ ಕಾರ್ಯಾಚರಿಸುವುದು, ಕಾರ್ಯಾಂಗದ ಮುಖ್ಯಸ್ಥರಾಗಿ, ರಾಜ್ಯದ ಮುಖ್ಯಕಾರ್ಯದರ್ಶಿಗಳ ಜವಾಬ್ದಾರಿ” ಎಂದು ಅವರು ಹೇಳಿದ್ದಾರೆ.

“ಸ್ವತಃ ತಾಯಿ ಮನಸ್ಸಿನ ಮುಖ್ಯಕಾರ್ಯದರ್ಶಿಯವರು (ಆ ದಂಪತಿ ಈ ಹಿಂದೆ ದ.ಕ.ದಲ್ಲಿ ಜಿಲ್ಲಾಧಿಕಾರಿ-ಜಿಪಂ ಮುಖ್ಯಾಧಿಕಾರಿ ಆಗಿ ಕೆಲಸ ಮಾಡಿದ್ದನ್ನು ಗಮನಿಸಿದ್ದೇನೆ; ನನ್ನ ಗೆಳೆಯರಿಂದ ಕೇಳಿ ತಿಳಿದಿದ್ದೇನೆ) ಈ ನಿಟ್ಟಿನಲ್ಲಿ ವಿಳಂಬ ಮಾಡುವುದಿಲ್ಲ ಎಂದುಕೊಂಡಿದ್ದೇನೆ” ಎಂದು ಹೇಳಿರುವ ಅವರು, ಮಂಗಳೂರಿನ ಖ್ಯಾತ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರಂತಹ ಸಾಂಕ್ರಾಮಿಕ ರೋಗಗಳ ನಿರ್ವಹಣೆಯಲ್ಲಿ ಸಾಕಷ್ಟು ತಳಮಟ್ಟದ ಅನುಭವ ಹಾಗೂ ದೂರದೃಷ್ಟಿ ಇರುವ ವೈದ್ಯರ ಸೇವೆಯನ್ನು ಈ ನಿಟ್ಟಿನಲ್ಲಿ ಸರ್ಕಾರ ಪಡೆಯುವಂತಾಗಲಿ ಎಂದು ಆಶಿಸಿದ್ದಾರೆ.

ಇದನ್ನೂಓದಿ:  ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...