Homeಕರೋನಾ ತಲ್ಲಣಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ...

ಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ದಿಢೀರ್ ಇಳಿಕೆ!

ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ.

- Advertisement -
- Advertisement -

ಭಾರತದಲ್ಲಿ ಜೂನ್ 21 ರ ಸೋಮವಾರದಿಂದ ಲಸಿಕೆ ಅಭಿಯಾನಕ್ಕೆ ತೀವ್ರ ವೇಗವನ್ನು ನೀಡಲಾಗಿತ್ತು. ವ್ಯಾಪಕ ವ್ಯಾಕ್ಸಿನೇಶನ್ ಪ್ರಕ್ರಿಯೆಯ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗೇ ಜೂನ್‌ 21 ರ ಸೋಮವಾರ ದೇಶಾದ್ಯಂತ 88 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನದಲ್ಲಿ ಅತಿಹೆಚ್ಚು ವ್ಯಾಕ್ಸಿನೇಶನ್‌ ನೀಡಿದ ದಾಖಲೆಯೂ ನಿರ್ಮಾಣವಾಗಿತ್ತು. ಜೂನ್ 21 ರಂದು ಗರಿಷ್ಠ ಮಟ್ಟ ತಲುಪಿದ್ದ ವ್ಯಾಕ್ಸಿನೇಶನ್ ಪ್ರಕ್ರಿಯೆ ಮಂಗಳವಾರದ ಹೊತ್ತಿಗೆ ಮತ್ತೆ ಕುಸಿತಗೊಂಡಿದೆ. ಮಂಗಳವಾರ ದೇಶದಲ್ಲಿ 54.22 ಲಕ್ಷ ಡೋಸ್‌ಗಳಷ್ಟು ಮಾತ್ರ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿನ ದಿಢೀರ್ ಕುಸಿತ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ದೊಡ್ಡ ಮಟ್ಟದ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ದೀರ್ಘಾವಧಿಯವರೆಗೆ ಕಾಯ್ದುಕೊಂಡು ಹೋಗುವುದು ಸಾಧ್ಯವೇ ಎಂಬ ಅನುಮಾನ ಹುಟ್ಟತೊಡಗಿದೆ. ನಮ್ಮ ಲಸಿಕೆ ಅಭಿಯಾನ ಅರಂಭಿಕ ಶೂರತ್ವ ಮಾತ್ರವೇ ಅಥವಾ ನಿಯಮಿತವಾಗಿ ದೊಡ್ಡ ಮಟ್ಟದಲ್ಲಿ ವ್ಯಾಕ್ಸೀನ್‌ಗಳನ್ನು ನಿಡುವಷ್ಟು ಉತ್ಪಾದನೆ ದೇಶದಲ್ಲಿ ಇದೆಯೆ ಎಂಬ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಜೊತೆಗೆ ಜೂನ್ 21 ರ ಸೋಮವಾರದ ಅತಿ ಹೆಚ್ಚು ಮ್ಯಾಜಿಕ್ ನಂಬರ್‌ಗಳನ್ನು ತಲುಪಲು ರಾಜ್ಯ ಸರ್ಕಾರಗಳು ಈ ಹಿಂದಿನ ಅನೇಕ ದಿನಗಳ ಕಾಲ ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ದಾಸ್ತಾನು ಮಾಡಿದ್ದವು ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಸೋಮವಾರ ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಲಾದ ಮೊದಲ 10 ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಇವೆ. ಜೂನ್ 21 ರಂದು ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರದ ಹೊತ್ತಿಗೆ ಲಸಿಕೆ ಅಭಿಯಾನ ಸೋಮವಾರದ ಅರ್ಧದಷ್ಟಕ್ಕೆ ಬಂದಿದೆ.

2021ರ ಅಂತ್ಯಕ್ಕೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಕೆಂದ್ರ ಸರ್ಕಾರ ಇಟ್ಟುಕೊಂಡಿದೆ. ಮತ್ತು ಅದೇ ಗುರಿಯನ್ನು ಸಾಧಿಸಲಿಕ್ಕೆ ರಾಜ್ಯಗಳ ಮೇಲೆಯೂ ಒತ್ತಡ ಹಾಕುತ್ತಿದೆ. ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ಗುರಿಯನ್ನು ತಲುಪಲು ದಿನ ನಿತ್ಯ ನಿಯಮಿತವಾಗಿ 97 ಲಕ್ಷ ಡೋಸ್ ವ್ಯಾಕ್ಸೀನ್‌ಗಳನ್ನು ನೀಡಬೇಕು. ಸಧ್ಯ ದೇಶದಲ್ಲಿ ಲಭ್ಯವಿರುವ ವ್ಯಾಕ್ಸಿನ್‌ ಪೂರೈಕೆಯನ್ನು ಗಮನಿಸಿದರೆ ವರ್ಷಾಂತ್ಯದ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ಕೇಂದ್ರ ಸರ್ಕಾರದ ಗುರಿ ಸಾಧಿಸುವುದು ಅನುಮಾನವಾಗಿ ಕಾಣುತ್ತಿದೆ.

ದೇಶದಲ್ಲಿ ದಿನನಿತ್ಯ ಅಗತ್ಯವಿರುವ ವ್ಯಾಕ್ಸಿನ್‌ಗಳನ್ನು ಪೂರೈಸುವ ಸಾಮರ್ಥ್ಯ ತನಗಿದೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಹೇಳುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರ ದಿನಕ್ಕೆ 1 ಕೋಟಿ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಕ್ಕೆ ದಿನಕ್ಕೆ 1.25 ಕೋಟಿ ವ್ಯಾಕ್ಸಿನ್‌ಗಳನ್ನು ದಾಸ್ತಾನು ಮಾಡಿ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನ್ಯಾಷನಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (NTAGI) ಅಧ್ಯಕ್ಷ  ಡಾ. ಎನ್‌.ಕೆ. ಅರೋರಾ ಹೇಳುತ್ತಾರೆ. ಆದರೆ ಇದುವರೆಗೆ ಡಾ. ಅರೋರಾ ಅವರ ಮಾತನ್ನು ಸಾಬೀತು ಪಡಿಸುವ ಅಂಕಿ ಅಂಶಗಳು ಎಲ್ಲೂ ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾವು ಮುಂದಿನ 15 ದಿನಗಳ ವ್ಯಾಕ್ಸಿನ್‌ ಬೇಡಿಕೆಯನ್ನು ಮುಂಚಿತವಾಗಿ ನೀಡುವಂತೆ ರಾಜ್ಯಗಳಿಗೆ ಕೇಳಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸುತ್ತಾರೆ.

ಮಂಗಳವಾರದ ರಾಜ್ಯವಾರು ವ್ಯಾಕ್ಸಿನೇಶನ್ ಅಂಕಿ ಅಂಶವನ್ನು ನೋಡಿದರೆ ಅತ್ಯಂತ ಕಳವಳಕಾರಿಯಾಗಿದೆ. ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ. ಹಾಗೇ ಸೋಮವಾರ ತೆರೆಯಲಾಗಿದ್ದ ಬಹುತೇಕ ವ್ಯಾಕ್ಸೀನೇಷನ್ ಸೆಂಟರ್ ಗಳನ್ನು ಮುಚ್ಚಲಾಗಿದೆ. ಹಾಗೇ ಹಿಂದೆ ಮಧ್ಯ ಪ್ರದೇಶದಲ್ಲಿ ನಿತ್ಯ 5000 ಕ್ಕಿಂತ ಕಡಿಮೆ ವ್ಯಾಕ್ಸೀನ್‌ಗಳನ್ನು ನೀಡಿದ ಉದಾಹರಣೆಗಳಿಲ್ಲ. ಆದರೆ ಜೂನ್ 20ರ ಭಾನುವಾರ ಮಾತ್ರ ಮಧ್ಯ ಪ್ರದೇಶದಲ್ಲಿ ಕೇವಲ  692 ಡೋಸ್ ವ್ಯಾಕ್ಸೀನ್‌ಗಳನ್ನು ನೀಡಲಾಗಿತ್ತು. ಮಧ್ಯ ಪ್ರದೇಶದ ಇದುವರೆಗಿನ ಅತಿಹೆಚ್ಚು ವ್ಯಾಕ್ಸೀನ್‌ಗಳನ್ನು ನೀಡಿದ ದಾಖಲೆ 5 ಲಕ್ಷ ಡೊಸ್‌ಗಳಾಗಿತ್ತು. ಅದು ಜೂನ್ 14 ರಂದು. ವ್ಯಾಕ್ಸೀನೇಶನ್ ಪ್ರಕ್ರಿಯೆಯಲ್ಲಿನ ನಾಟಕೀಯ ಏರಿಕೆ-ಇಳಿಕೆಗಳು ಮಧ್ಯಪ್ರದೇಶ ಸರ್ಕಾರದತ್ತ ಬೊಟ್ಟು ಮಾಡುವಂತೆ ಮಾಡಿವೆ. ರಾಜ್ಯ ಸರ್ಕಾರ ದಿನನಿತ್ಯ ವ್ಯಾಕ್ಸಿನ್‌ಗಳನ್ನು ನೀಡದೇ ಸಂಗ್ರಹಿಸಿಟ್ಟು ಜೂನ್ 21 ರಂದು ಅತಿ ಹೆಚ್ಚು ವ್ಯಾಕ್ಸೀನ್ ವಿತರಿಸುವ ನಾಟಕವಾಡಿದೆ ಎಂದು ಅನೇಕ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಕರ್ನಾಟಕದಲ್ಲಿಯೂ ಮಂಗಳವಾರದ ಹೊತ್ತಿಗೆ ವ್ಯಾಕ್ಸಿನೇಶನ್‌ ನಂಬರ್‌ಗಳು ಗಣನೀಯವಾಗಿ ಇಳಿಮುಖವಾಗಿದೆ. ಸೋಮವಾರ 11 ಲಕ್ಷ ಡೋಸ್‌ಗಳಷ್ಟು ವ್ಯಾಕ್ಸೀನ್ ನೀಡಲಾಗಿದ್ದರೆ ಮಂಗಳವಾರ ಜೂನ್ 22 ರಂದು ಈ ಸಂಖ್ಯೆ 3.8 ಲಕ್ಷಕ್ಕೆ ಬಂದು ತಲುಪಿದೆ. ಮಧ್ಯ ಪ್ರದೇಶ, ಕರ್ನಾಟಕ, ಹರಿಯಾಣಗಳಲ್ಲಿ ಮಂಗಳವಾರ ನಾಟಕೀಯ ರೀತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ಇದು ದೇಶದ ವ್ಯಾಕ್ಸೀನೇಶನ್ ಅಂಕಿ ಅಂಶದ ಕುಸಿತಕ್ಕೂ ಕಾರಣವಾಗಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲಿ ಮಾತ್ರ ಸೋಮವಾರಕ್ಕಿಂತ ಮಂಗಳವಾರ ಹೆಚ್ಚು ವ್ಯಾಕ್ಸೀನ್ ಡೋಸ್‌ಗಳನ್ನು ನೀಡಲಾಗಿದೆ. ಸೋಮವಾರ ಸುಮಾರು 7ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಲಾಗಿದ್ದರೆ ಮಂಗಳವಾರ 8 ಲಕ್ಷ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ.

ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಮಂಗಳವಾರದ ದಿಢೀರ್ ಇಳಿಕೆಯ ಕುರಿತು ವಿವಿಧ ರಾಜಕೀಯ ಪಕ್ಷದ ನಾಯಕರು ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಆರೋಪಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯಿಸಿ, “ಸೋಮವಾರದ ವ್ಯಾಕ್ಸಿನೇಶನ್ ದಾಖಲೆಯ ಹಿಂದಿನ ಸತ್ಯ ಮಂಗಳವಾರ ಬಹಿರಂಗಗೊಂಡಿದೆ. ಭಾನುವಾರ ವ್ಯಾಕ್ಸಿನೇಶನ್ ನಿಲ್ಲಿಸಿ, ಸೋಮವಾರ ವಿಶ್ವದಾಖಲೆ ಮಾಡಿ, ಮತ್ತೆ ಮಂಗಳವಾರ ಹಿಂದಿನ ಸ್ಥಿತಿಗೆ ತಲುಪುವುದು. ಇದೇ ಕೇಂದ್ರ ಸರ್ಕಾರದ ವ್ಯಾಕ್ಸೀನ್ ನೀತಿ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ಯೋಗೆಂದ್ರ ಯಾದವ್ ಅವರು ಜೂನ್ 18 ರಿಂದ ಜೂನ್ 22ರ ವರೆಗಿನ ರಾಜ್ಯವಾರು ವ್ಯಾಕ್ಸಿನೇಶನ್ ಕುರಿತು ಅಂಕಿ ಸಂಖ್ಯೆಗಳ ಸಮೇತ ತೋರಿಸಿ ವ್ಯಾಕ್ಸಿನೇಶನ್ ಅನ್ನು ಒಂದು ದಿನದ ಇವೆಂಟ್‌ ಆಗಿ ನಡೆಸುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಢಿಯಾಗಿಸಿಕೊಂಡಿವೆ ಎಂದು ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡಿದ್ದಾರೆ.

ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮಂಗಳವಾರದದ ವ್ಯಾಕ್ಸಿನೇಶನ್ ನಂಬರ್‌ಗಳ ಇಳಿಕೆ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿದ್ದು ಲಸಿಕೆ ಅಭಿಯಾನವನ್ನು ಪ್ರಚಾರ ಆಂದೋಲನವಾಗಿ ನಡೆಸುವುದನ್ನು ಬಿಟ್ಟು ದೇಶದಲ್ಲಿ ನಿತ್ಯ ಕನಿಷ್ಠ 80 ಲಕ್ಷ ವ್ಯಾಕ್ಸಿನ್‌ಗಳನ್ನು ನಿಯಮಿತವಾಗಿ ನೀಡುವಂತೆ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯಾಕ್ಸಿನ್‌ ನೀತಿಯಲ್ಲಿನ ಪಾರದರ್ಶಕತೆಯ ಕೊರತೆ, ಅಸಮರ್ಪಕ ಯೋಜನೆ, ಪೂರೈಕೆಯಲ್ಲಿನ ವ್ಯತ್ಯಗಳ ಕಾರಣದಿಂದ 2021 ಅಂತ್ಯಕ್ಕೆ ದೇಶದ ಜನರನ್ನು ವ್ಯಾಕ್ಸಿನೇಟ್ ಮಾಡುವ ಕೇಂದ್ರ ಸರ್ಕಾರದ ಗುರಿಯ ಸಾಧನೆ ಮಂಕಾಗತೊಡಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ವರ್ಷಾಂತ್ಯಕ್ಕೆ ದೇಶದ ಎಲ್ಲಾ ಜನರಿಗೆ ಲಸಿಕೆ ಕೊಡುವ ನಿಜವಾದ ಪ್ರಯತ್ನಗಳನ್ನು ಮಾಡುತ್ತಿರುವುದೇ ಆದರೆ ದಿನನಿತ್ಯದ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ನಿತ್ಯ ಇಷ್ಟು ಏರಿಳಿಕೆಗಳು ಹೇಗೆ ಸಾಧ್ಯ ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿಯೇ ಉಳಿಯುತ್ತದೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿಯೇ ಹೊಸದಾದ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡು ದೇಶದಲ್ಲಿ ಆತಂಕವನ್ನು ಹುಟ್ಟಿಸಿದೆ. ಈಗ ಸಧ್ಯ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶದ ಮುಂದಿರುವ ಏಕೈಕ ಅಸ್ತ್ರ ವ್ಯಾಕ್ಸಿನೇಶನ್. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕವಾಗಿ ವ್ಯಾಕ್ಸಿನೇಶನ್ ಪ್ರಯತ್ನವನ್ನು ಕೈಗೊಂಡರೆ ಮಾತ್ರ ದೇಶ ಕೊರೋನಾ ವಿರುದ್ಧ ಹೋರಾಡಲು ಸಾಧ್ಯ.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...