Homeಕರೋನಾ ತಲ್ಲಣಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ...

ಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ದಿಢೀರ್ ಇಳಿಕೆ!

ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ.

- Advertisement -
- Advertisement -

ಭಾರತದಲ್ಲಿ ಜೂನ್ 21 ರ ಸೋಮವಾರದಿಂದ ಲಸಿಕೆ ಅಭಿಯಾನಕ್ಕೆ ತೀವ್ರ ವೇಗವನ್ನು ನೀಡಲಾಗಿತ್ತು. ವ್ಯಾಪಕ ವ್ಯಾಕ್ಸಿನೇಶನ್ ಪ್ರಕ್ರಿಯೆಯ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗೇ ಜೂನ್‌ 21 ರ ಸೋಮವಾರ ದೇಶಾದ್ಯಂತ 88 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನದಲ್ಲಿ ಅತಿಹೆಚ್ಚು ವ್ಯಾಕ್ಸಿನೇಶನ್‌ ನೀಡಿದ ದಾಖಲೆಯೂ ನಿರ್ಮಾಣವಾಗಿತ್ತು. ಜೂನ್ 21 ರಂದು ಗರಿಷ್ಠ ಮಟ್ಟ ತಲುಪಿದ್ದ ವ್ಯಾಕ್ಸಿನೇಶನ್ ಪ್ರಕ್ರಿಯೆ ಮಂಗಳವಾರದ ಹೊತ್ತಿಗೆ ಮತ್ತೆ ಕುಸಿತಗೊಂಡಿದೆ. ಮಂಗಳವಾರ ದೇಶದಲ್ಲಿ 54.22 ಲಕ್ಷ ಡೋಸ್‌ಗಳಷ್ಟು ಮಾತ್ರ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿನ ದಿಢೀರ್ ಕುಸಿತ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ದೊಡ್ಡ ಮಟ್ಟದ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ದೀರ್ಘಾವಧಿಯವರೆಗೆ ಕಾಯ್ದುಕೊಂಡು ಹೋಗುವುದು ಸಾಧ್ಯವೇ ಎಂಬ ಅನುಮಾನ ಹುಟ್ಟತೊಡಗಿದೆ. ನಮ್ಮ ಲಸಿಕೆ ಅಭಿಯಾನ ಅರಂಭಿಕ ಶೂರತ್ವ ಮಾತ್ರವೇ ಅಥವಾ ನಿಯಮಿತವಾಗಿ ದೊಡ್ಡ ಮಟ್ಟದಲ್ಲಿ ವ್ಯಾಕ್ಸೀನ್‌ಗಳನ್ನು ನಿಡುವಷ್ಟು ಉತ್ಪಾದನೆ ದೇಶದಲ್ಲಿ ಇದೆಯೆ ಎಂಬ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಜೊತೆಗೆ ಜೂನ್ 21 ರ ಸೋಮವಾರದ ಅತಿ ಹೆಚ್ಚು ಮ್ಯಾಜಿಕ್ ನಂಬರ್‌ಗಳನ್ನು ತಲುಪಲು ರಾಜ್ಯ ಸರ್ಕಾರಗಳು ಈ ಹಿಂದಿನ ಅನೇಕ ದಿನಗಳ ಕಾಲ ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ದಾಸ್ತಾನು ಮಾಡಿದ್ದವು ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಸೋಮವಾರ ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಲಾದ ಮೊದಲ 10 ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಇವೆ. ಜೂನ್ 21 ರಂದು ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರದ ಹೊತ್ತಿಗೆ ಲಸಿಕೆ ಅಭಿಯಾನ ಸೋಮವಾರದ ಅರ್ಧದಷ್ಟಕ್ಕೆ ಬಂದಿದೆ.

2021ರ ಅಂತ್ಯಕ್ಕೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಕೆಂದ್ರ ಸರ್ಕಾರ ಇಟ್ಟುಕೊಂಡಿದೆ. ಮತ್ತು ಅದೇ ಗುರಿಯನ್ನು ಸಾಧಿಸಲಿಕ್ಕೆ ರಾಜ್ಯಗಳ ಮೇಲೆಯೂ ಒತ್ತಡ ಹಾಕುತ್ತಿದೆ. ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ಗುರಿಯನ್ನು ತಲುಪಲು ದಿನ ನಿತ್ಯ ನಿಯಮಿತವಾಗಿ 97 ಲಕ್ಷ ಡೋಸ್ ವ್ಯಾಕ್ಸೀನ್‌ಗಳನ್ನು ನೀಡಬೇಕು. ಸಧ್ಯ ದೇಶದಲ್ಲಿ ಲಭ್ಯವಿರುವ ವ್ಯಾಕ್ಸಿನ್‌ ಪೂರೈಕೆಯನ್ನು ಗಮನಿಸಿದರೆ ವರ್ಷಾಂತ್ಯದ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ಕೇಂದ್ರ ಸರ್ಕಾರದ ಗುರಿ ಸಾಧಿಸುವುದು ಅನುಮಾನವಾಗಿ ಕಾಣುತ್ತಿದೆ.

ದೇಶದಲ್ಲಿ ದಿನನಿತ್ಯ ಅಗತ್ಯವಿರುವ ವ್ಯಾಕ್ಸಿನ್‌ಗಳನ್ನು ಪೂರೈಸುವ ಸಾಮರ್ಥ್ಯ ತನಗಿದೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಹೇಳುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರ ದಿನಕ್ಕೆ 1 ಕೋಟಿ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಕ್ಕೆ ದಿನಕ್ಕೆ 1.25 ಕೋಟಿ ವ್ಯಾಕ್ಸಿನ್‌ಗಳನ್ನು ದಾಸ್ತಾನು ಮಾಡಿ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನ್ಯಾಷನಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (NTAGI) ಅಧ್ಯಕ್ಷ  ಡಾ. ಎನ್‌.ಕೆ. ಅರೋರಾ ಹೇಳುತ್ತಾರೆ. ಆದರೆ ಇದುವರೆಗೆ ಡಾ. ಅರೋರಾ ಅವರ ಮಾತನ್ನು ಸಾಬೀತು ಪಡಿಸುವ ಅಂಕಿ ಅಂಶಗಳು ಎಲ್ಲೂ ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾವು ಮುಂದಿನ 15 ದಿನಗಳ ವ್ಯಾಕ್ಸಿನ್‌ ಬೇಡಿಕೆಯನ್ನು ಮುಂಚಿತವಾಗಿ ನೀಡುವಂತೆ ರಾಜ್ಯಗಳಿಗೆ ಕೇಳಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸುತ್ತಾರೆ.

ಮಂಗಳವಾರದ ರಾಜ್ಯವಾರು ವ್ಯಾಕ್ಸಿನೇಶನ್ ಅಂಕಿ ಅಂಶವನ್ನು ನೋಡಿದರೆ ಅತ್ಯಂತ ಕಳವಳಕಾರಿಯಾಗಿದೆ. ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ. ಹಾಗೇ ಸೋಮವಾರ ತೆರೆಯಲಾಗಿದ್ದ ಬಹುತೇಕ ವ್ಯಾಕ್ಸೀನೇಷನ್ ಸೆಂಟರ್ ಗಳನ್ನು ಮುಚ್ಚಲಾಗಿದೆ. ಹಾಗೇ ಹಿಂದೆ ಮಧ್ಯ ಪ್ರದೇಶದಲ್ಲಿ ನಿತ್ಯ 5000 ಕ್ಕಿಂತ ಕಡಿಮೆ ವ್ಯಾಕ್ಸೀನ್‌ಗಳನ್ನು ನೀಡಿದ ಉದಾಹರಣೆಗಳಿಲ್ಲ. ಆದರೆ ಜೂನ್ 20ರ ಭಾನುವಾರ ಮಾತ್ರ ಮಧ್ಯ ಪ್ರದೇಶದಲ್ಲಿ ಕೇವಲ  692 ಡೋಸ್ ವ್ಯಾಕ್ಸೀನ್‌ಗಳನ್ನು ನೀಡಲಾಗಿತ್ತು. ಮಧ್ಯ ಪ್ರದೇಶದ ಇದುವರೆಗಿನ ಅತಿಹೆಚ್ಚು ವ್ಯಾಕ್ಸೀನ್‌ಗಳನ್ನು ನೀಡಿದ ದಾಖಲೆ 5 ಲಕ್ಷ ಡೊಸ್‌ಗಳಾಗಿತ್ತು. ಅದು ಜೂನ್ 14 ರಂದು. ವ್ಯಾಕ್ಸೀನೇಶನ್ ಪ್ರಕ್ರಿಯೆಯಲ್ಲಿನ ನಾಟಕೀಯ ಏರಿಕೆ-ಇಳಿಕೆಗಳು ಮಧ್ಯಪ್ರದೇಶ ಸರ್ಕಾರದತ್ತ ಬೊಟ್ಟು ಮಾಡುವಂತೆ ಮಾಡಿವೆ. ರಾಜ್ಯ ಸರ್ಕಾರ ದಿನನಿತ್ಯ ವ್ಯಾಕ್ಸಿನ್‌ಗಳನ್ನು ನೀಡದೇ ಸಂಗ್ರಹಿಸಿಟ್ಟು ಜೂನ್ 21 ರಂದು ಅತಿ ಹೆಚ್ಚು ವ್ಯಾಕ್ಸೀನ್ ವಿತರಿಸುವ ನಾಟಕವಾಡಿದೆ ಎಂದು ಅನೇಕ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಕರ್ನಾಟಕದಲ್ಲಿಯೂ ಮಂಗಳವಾರದ ಹೊತ್ತಿಗೆ ವ್ಯಾಕ್ಸಿನೇಶನ್‌ ನಂಬರ್‌ಗಳು ಗಣನೀಯವಾಗಿ ಇಳಿಮುಖವಾಗಿದೆ. ಸೋಮವಾರ 11 ಲಕ್ಷ ಡೋಸ್‌ಗಳಷ್ಟು ವ್ಯಾಕ್ಸೀನ್ ನೀಡಲಾಗಿದ್ದರೆ ಮಂಗಳವಾರ ಜೂನ್ 22 ರಂದು ಈ ಸಂಖ್ಯೆ 3.8 ಲಕ್ಷಕ್ಕೆ ಬಂದು ತಲುಪಿದೆ. ಮಧ್ಯ ಪ್ರದೇಶ, ಕರ್ನಾಟಕ, ಹರಿಯಾಣಗಳಲ್ಲಿ ಮಂಗಳವಾರ ನಾಟಕೀಯ ರೀತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ಇದು ದೇಶದ ವ್ಯಾಕ್ಸೀನೇಶನ್ ಅಂಕಿ ಅಂಶದ ಕುಸಿತಕ್ಕೂ ಕಾರಣವಾಗಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲಿ ಮಾತ್ರ ಸೋಮವಾರಕ್ಕಿಂತ ಮಂಗಳವಾರ ಹೆಚ್ಚು ವ್ಯಾಕ್ಸೀನ್ ಡೋಸ್‌ಗಳನ್ನು ನೀಡಲಾಗಿದೆ. ಸೋಮವಾರ ಸುಮಾರು 7ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಲಾಗಿದ್ದರೆ ಮಂಗಳವಾರ 8 ಲಕ್ಷ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ.

ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಮಂಗಳವಾರದ ದಿಢೀರ್ ಇಳಿಕೆಯ ಕುರಿತು ವಿವಿಧ ರಾಜಕೀಯ ಪಕ್ಷದ ನಾಯಕರು ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಆರೋಪಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯಿಸಿ, “ಸೋಮವಾರದ ವ್ಯಾಕ್ಸಿನೇಶನ್ ದಾಖಲೆಯ ಹಿಂದಿನ ಸತ್ಯ ಮಂಗಳವಾರ ಬಹಿರಂಗಗೊಂಡಿದೆ. ಭಾನುವಾರ ವ್ಯಾಕ್ಸಿನೇಶನ್ ನಿಲ್ಲಿಸಿ, ಸೋಮವಾರ ವಿಶ್ವದಾಖಲೆ ಮಾಡಿ, ಮತ್ತೆ ಮಂಗಳವಾರ ಹಿಂದಿನ ಸ್ಥಿತಿಗೆ ತಲುಪುವುದು. ಇದೇ ಕೇಂದ್ರ ಸರ್ಕಾರದ ವ್ಯಾಕ್ಸೀನ್ ನೀತಿ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ಯೋಗೆಂದ್ರ ಯಾದವ್ ಅವರು ಜೂನ್ 18 ರಿಂದ ಜೂನ್ 22ರ ವರೆಗಿನ ರಾಜ್ಯವಾರು ವ್ಯಾಕ್ಸಿನೇಶನ್ ಕುರಿತು ಅಂಕಿ ಸಂಖ್ಯೆಗಳ ಸಮೇತ ತೋರಿಸಿ ವ್ಯಾಕ್ಸಿನೇಶನ್ ಅನ್ನು ಒಂದು ದಿನದ ಇವೆಂಟ್‌ ಆಗಿ ನಡೆಸುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಢಿಯಾಗಿಸಿಕೊಂಡಿವೆ ಎಂದು ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡಿದ್ದಾರೆ.

ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮಂಗಳವಾರದದ ವ್ಯಾಕ್ಸಿನೇಶನ್ ನಂಬರ್‌ಗಳ ಇಳಿಕೆ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿದ್ದು ಲಸಿಕೆ ಅಭಿಯಾನವನ್ನು ಪ್ರಚಾರ ಆಂದೋಲನವಾಗಿ ನಡೆಸುವುದನ್ನು ಬಿಟ್ಟು ದೇಶದಲ್ಲಿ ನಿತ್ಯ ಕನಿಷ್ಠ 80 ಲಕ್ಷ ವ್ಯಾಕ್ಸಿನ್‌ಗಳನ್ನು ನಿಯಮಿತವಾಗಿ ನೀಡುವಂತೆ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯಾಕ್ಸಿನ್‌ ನೀತಿಯಲ್ಲಿನ ಪಾರದರ್ಶಕತೆಯ ಕೊರತೆ, ಅಸಮರ್ಪಕ ಯೋಜನೆ, ಪೂರೈಕೆಯಲ್ಲಿನ ವ್ಯತ್ಯಗಳ ಕಾರಣದಿಂದ 2021 ಅಂತ್ಯಕ್ಕೆ ದೇಶದ ಜನರನ್ನು ವ್ಯಾಕ್ಸಿನೇಟ್ ಮಾಡುವ ಕೇಂದ್ರ ಸರ್ಕಾರದ ಗುರಿಯ ಸಾಧನೆ ಮಂಕಾಗತೊಡಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ವರ್ಷಾಂತ್ಯಕ್ಕೆ ದೇಶದ ಎಲ್ಲಾ ಜನರಿಗೆ ಲಸಿಕೆ ಕೊಡುವ ನಿಜವಾದ ಪ್ರಯತ್ನಗಳನ್ನು ಮಾಡುತ್ತಿರುವುದೇ ಆದರೆ ದಿನನಿತ್ಯದ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ನಿತ್ಯ ಇಷ್ಟು ಏರಿಳಿಕೆಗಳು ಹೇಗೆ ಸಾಧ್ಯ ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿಯೇ ಉಳಿಯುತ್ತದೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿಯೇ ಹೊಸದಾದ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡು ದೇಶದಲ್ಲಿ ಆತಂಕವನ್ನು ಹುಟ್ಟಿಸಿದೆ. ಈಗ ಸಧ್ಯ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶದ ಮುಂದಿರುವ ಏಕೈಕ ಅಸ್ತ್ರ ವ್ಯಾಕ್ಸಿನೇಶನ್. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕವಾಗಿ ವ್ಯಾಕ್ಸಿನೇಶನ್ ಪ್ರಯತ್ನವನ್ನು ಕೈಗೊಂಡರೆ ಮಾತ್ರ ದೇಶ ಕೊರೋನಾ ವಿರುದ್ಧ ಹೋರಾಡಲು ಸಾಧ್ಯ.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...