Homeಕರೋನಾ ತಲ್ಲಣಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ...

ಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ದಿಢೀರ್ ಇಳಿಕೆ!

ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ.

- Advertisement -
- Advertisement -

ಭಾರತದಲ್ಲಿ ಜೂನ್ 21 ರ ಸೋಮವಾರದಿಂದ ಲಸಿಕೆ ಅಭಿಯಾನಕ್ಕೆ ತೀವ್ರ ವೇಗವನ್ನು ನೀಡಲಾಗಿತ್ತು. ವ್ಯಾಪಕ ವ್ಯಾಕ್ಸಿನೇಶನ್ ಪ್ರಕ್ರಿಯೆಯ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗೇ ಜೂನ್‌ 21 ರ ಸೋಮವಾರ ದೇಶಾದ್ಯಂತ 88 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನದಲ್ಲಿ ಅತಿಹೆಚ್ಚು ವ್ಯಾಕ್ಸಿನೇಶನ್‌ ನೀಡಿದ ದಾಖಲೆಯೂ ನಿರ್ಮಾಣವಾಗಿತ್ತು. ಜೂನ್ 21 ರಂದು ಗರಿಷ್ಠ ಮಟ್ಟ ತಲುಪಿದ್ದ ವ್ಯಾಕ್ಸಿನೇಶನ್ ಪ್ರಕ್ರಿಯೆ ಮಂಗಳವಾರದ ಹೊತ್ತಿಗೆ ಮತ್ತೆ ಕುಸಿತಗೊಂಡಿದೆ. ಮಂಗಳವಾರ ದೇಶದಲ್ಲಿ 54.22 ಲಕ್ಷ ಡೋಸ್‌ಗಳಷ್ಟು ಮಾತ್ರ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿನ ದಿಢೀರ್ ಕುಸಿತ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ದೊಡ್ಡ ಮಟ್ಟದ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ದೀರ್ಘಾವಧಿಯವರೆಗೆ ಕಾಯ್ದುಕೊಂಡು ಹೋಗುವುದು ಸಾಧ್ಯವೇ ಎಂಬ ಅನುಮಾನ ಹುಟ್ಟತೊಡಗಿದೆ. ನಮ್ಮ ಲಸಿಕೆ ಅಭಿಯಾನ ಅರಂಭಿಕ ಶೂರತ್ವ ಮಾತ್ರವೇ ಅಥವಾ ನಿಯಮಿತವಾಗಿ ದೊಡ್ಡ ಮಟ್ಟದಲ್ಲಿ ವ್ಯಾಕ್ಸೀನ್‌ಗಳನ್ನು ನಿಡುವಷ್ಟು ಉತ್ಪಾದನೆ ದೇಶದಲ್ಲಿ ಇದೆಯೆ ಎಂಬ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಜೊತೆಗೆ ಜೂನ್ 21 ರ ಸೋಮವಾರದ ಅತಿ ಹೆಚ್ಚು ಮ್ಯಾಜಿಕ್ ನಂಬರ್‌ಗಳನ್ನು ತಲುಪಲು ರಾಜ್ಯ ಸರ್ಕಾರಗಳು ಈ ಹಿಂದಿನ ಅನೇಕ ದಿನಗಳ ಕಾಲ ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ದಾಸ್ತಾನು ಮಾಡಿದ್ದವು ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಸೋಮವಾರ ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಲಾದ ಮೊದಲ 10 ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಇವೆ. ಜೂನ್ 21 ರಂದು ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರದ ಹೊತ್ತಿಗೆ ಲಸಿಕೆ ಅಭಿಯಾನ ಸೋಮವಾರದ ಅರ್ಧದಷ್ಟಕ್ಕೆ ಬಂದಿದೆ.

2021ರ ಅಂತ್ಯಕ್ಕೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಕೆಂದ್ರ ಸರ್ಕಾರ ಇಟ್ಟುಕೊಂಡಿದೆ. ಮತ್ತು ಅದೇ ಗುರಿಯನ್ನು ಸಾಧಿಸಲಿಕ್ಕೆ ರಾಜ್ಯಗಳ ಮೇಲೆಯೂ ಒತ್ತಡ ಹಾಕುತ್ತಿದೆ. ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ಗುರಿಯನ್ನು ತಲುಪಲು ದಿನ ನಿತ್ಯ ನಿಯಮಿತವಾಗಿ 97 ಲಕ್ಷ ಡೋಸ್ ವ್ಯಾಕ್ಸೀನ್‌ಗಳನ್ನು ನೀಡಬೇಕು. ಸಧ್ಯ ದೇಶದಲ್ಲಿ ಲಭ್ಯವಿರುವ ವ್ಯಾಕ್ಸಿನ್‌ ಪೂರೈಕೆಯನ್ನು ಗಮನಿಸಿದರೆ ವರ್ಷಾಂತ್ಯದ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ಕೇಂದ್ರ ಸರ್ಕಾರದ ಗುರಿ ಸಾಧಿಸುವುದು ಅನುಮಾನವಾಗಿ ಕಾಣುತ್ತಿದೆ.

ದೇಶದಲ್ಲಿ ದಿನನಿತ್ಯ ಅಗತ್ಯವಿರುವ ವ್ಯಾಕ್ಸಿನ್‌ಗಳನ್ನು ಪೂರೈಸುವ ಸಾಮರ್ಥ್ಯ ತನಗಿದೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಹೇಳುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರ ದಿನಕ್ಕೆ 1 ಕೋಟಿ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಕ್ಕೆ ದಿನಕ್ಕೆ 1.25 ಕೋಟಿ ವ್ಯಾಕ್ಸಿನ್‌ಗಳನ್ನು ದಾಸ್ತಾನು ಮಾಡಿ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನ್ಯಾಷನಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (NTAGI) ಅಧ್ಯಕ್ಷ  ಡಾ. ಎನ್‌.ಕೆ. ಅರೋರಾ ಹೇಳುತ್ತಾರೆ. ಆದರೆ ಇದುವರೆಗೆ ಡಾ. ಅರೋರಾ ಅವರ ಮಾತನ್ನು ಸಾಬೀತು ಪಡಿಸುವ ಅಂಕಿ ಅಂಶಗಳು ಎಲ್ಲೂ ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾವು ಮುಂದಿನ 15 ದಿನಗಳ ವ್ಯಾಕ್ಸಿನ್‌ ಬೇಡಿಕೆಯನ್ನು ಮುಂಚಿತವಾಗಿ ನೀಡುವಂತೆ ರಾಜ್ಯಗಳಿಗೆ ಕೇಳಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸುತ್ತಾರೆ.

ಮಂಗಳವಾರದ ರಾಜ್ಯವಾರು ವ್ಯಾಕ್ಸಿನೇಶನ್ ಅಂಕಿ ಅಂಶವನ್ನು ನೋಡಿದರೆ ಅತ್ಯಂತ ಕಳವಳಕಾರಿಯಾಗಿದೆ. ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ. ಹಾಗೇ ಸೋಮವಾರ ತೆರೆಯಲಾಗಿದ್ದ ಬಹುತೇಕ ವ್ಯಾಕ್ಸೀನೇಷನ್ ಸೆಂಟರ್ ಗಳನ್ನು ಮುಚ್ಚಲಾಗಿದೆ. ಹಾಗೇ ಹಿಂದೆ ಮಧ್ಯ ಪ್ರದೇಶದಲ್ಲಿ ನಿತ್ಯ 5000 ಕ್ಕಿಂತ ಕಡಿಮೆ ವ್ಯಾಕ್ಸೀನ್‌ಗಳನ್ನು ನೀಡಿದ ಉದಾಹರಣೆಗಳಿಲ್ಲ. ಆದರೆ ಜೂನ್ 20ರ ಭಾನುವಾರ ಮಾತ್ರ ಮಧ್ಯ ಪ್ರದೇಶದಲ್ಲಿ ಕೇವಲ  692 ಡೋಸ್ ವ್ಯಾಕ್ಸೀನ್‌ಗಳನ್ನು ನೀಡಲಾಗಿತ್ತು. ಮಧ್ಯ ಪ್ರದೇಶದ ಇದುವರೆಗಿನ ಅತಿಹೆಚ್ಚು ವ್ಯಾಕ್ಸೀನ್‌ಗಳನ್ನು ನೀಡಿದ ದಾಖಲೆ 5 ಲಕ್ಷ ಡೊಸ್‌ಗಳಾಗಿತ್ತು. ಅದು ಜೂನ್ 14 ರಂದು. ವ್ಯಾಕ್ಸೀನೇಶನ್ ಪ್ರಕ್ರಿಯೆಯಲ್ಲಿನ ನಾಟಕೀಯ ಏರಿಕೆ-ಇಳಿಕೆಗಳು ಮಧ್ಯಪ್ರದೇಶ ಸರ್ಕಾರದತ್ತ ಬೊಟ್ಟು ಮಾಡುವಂತೆ ಮಾಡಿವೆ. ರಾಜ್ಯ ಸರ್ಕಾರ ದಿನನಿತ್ಯ ವ್ಯಾಕ್ಸಿನ್‌ಗಳನ್ನು ನೀಡದೇ ಸಂಗ್ರಹಿಸಿಟ್ಟು ಜೂನ್ 21 ರಂದು ಅತಿ ಹೆಚ್ಚು ವ್ಯಾಕ್ಸೀನ್ ವಿತರಿಸುವ ನಾಟಕವಾಡಿದೆ ಎಂದು ಅನೇಕ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಕರ್ನಾಟಕದಲ್ಲಿಯೂ ಮಂಗಳವಾರದ ಹೊತ್ತಿಗೆ ವ್ಯಾಕ್ಸಿನೇಶನ್‌ ನಂಬರ್‌ಗಳು ಗಣನೀಯವಾಗಿ ಇಳಿಮುಖವಾಗಿದೆ. ಸೋಮವಾರ 11 ಲಕ್ಷ ಡೋಸ್‌ಗಳಷ್ಟು ವ್ಯಾಕ್ಸೀನ್ ನೀಡಲಾಗಿದ್ದರೆ ಮಂಗಳವಾರ ಜೂನ್ 22 ರಂದು ಈ ಸಂಖ್ಯೆ 3.8 ಲಕ್ಷಕ್ಕೆ ಬಂದು ತಲುಪಿದೆ. ಮಧ್ಯ ಪ್ರದೇಶ, ಕರ್ನಾಟಕ, ಹರಿಯಾಣಗಳಲ್ಲಿ ಮಂಗಳವಾರ ನಾಟಕೀಯ ರೀತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ಇದು ದೇಶದ ವ್ಯಾಕ್ಸೀನೇಶನ್ ಅಂಕಿ ಅಂಶದ ಕುಸಿತಕ್ಕೂ ಕಾರಣವಾಗಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲಿ ಮಾತ್ರ ಸೋಮವಾರಕ್ಕಿಂತ ಮಂಗಳವಾರ ಹೆಚ್ಚು ವ್ಯಾಕ್ಸೀನ್ ಡೋಸ್‌ಗಳನ್ನು ನೀಡಲಾಗಿದೆ. ಸೋಮವಾರ ಸುಮಾರು 7ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಲಾಗಿದ್ದರೆ ಮಂಗಳವಾರ 8 ಲಕ್ಷ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ.

ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಮಂಗಳವಾರದ ದಿಢೀರ್ ಇಳಿಕೆಯ ಕುರಿತು ವಿವಿಧ ರಾಜಕೀಯ ಪಕ್ಷದ ನಾಯಕರು ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಆರೋಪಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯಿಸಿ, “ಸೋಮವಾರದ ವ್ಯಾಕ್ಸಿನೇಶನ್ ದಾಖಲೆಯ ಹಿಂದಿನ ಸತ್ಯ ಮಂಗಳವಾರ ಬಹಿರಂಗಗೊಂಡಿದೆ. ಭಾನುವಾರ ವ್ಯಾಕ್ಸಿನೇಶನ್ ನಿಲ್ಲಿಸಿ, ಸೋಮವಾರ ವಿಶ್ವದಾಖಲೆ ಮಾಡಿ, ಮತ್ತೆ ಮಂಗಳವಾರ ಹಿಂದಿನ ಸ್ಥಿತಿಗೆ ತಲುಪುವುದು. ಇದೇ ಕೇಂದ್ರ ಸರ್ಕಾರದ ವ್ಯಾಕ್ಸೀನ್ ನೀತಿ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ಯೋಗೆಂದ್ರ ಯಾದವ್ ಅವರು ಜೂನ್ 18 ರಿಂದ ಜೂನ್ 22ರ ವರೆಗಿನ ರಾಜ್ಯವಾರು ವ್ಯಾಕ್ಸಿನೇಶನ್ ಕುರಿತು ಅಂಕಿ ಸಂಖ್ಯೆಗಳ ಸಮೇತ ತೋರಿಸಿ ವ್ಯಾಕ್ಸಿನೇಶನ್ ಅನ್ನು ಒಂದು ದಿನದ ಇವೆಂಟ್‌ ಆಗಿ ನಡೆಸುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಢಿಯಾಗಿಸಿಕೊಂಡಿವೆ ಎಂದು ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡಿದ್ದಾರೆ.

ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮಂಗಳವಾರದದ ವ್ಯಾಕ್ಸಿನೇಶನ್ ನಂಬರ್‌ಗಳ ಇಳಿಕೆ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿದ್ದು ಲಸಿಕೆ ಅಭಿಯಾನವನ್ನು ಪ್ರಚಾರ ಆಂದೋಲನವಾಗಿ ನಡೆಸುವುದನ್ನು ಬಿಟ್ಟು ದೇಶದಲ್ಲಿ ನಿತ್ಯ ಕನಿಷ್ಠ 80 ಲಕ್ಷ ವ್ಯಾಕ್ಸಿನ್‌ಗಳನ್ನು ನಿಯಮಿತವಾಗಿ ನೀಡುವಂತೆ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯಾಕ್ಸಿನ್‌ ನೀತಿಯಲ್ಲಿನ ಪಾರದರ್ಶಕತೆಯ ಕೊರತೆ, ಅಸಮರ್ಪಕ ಯೋಜನೆ, ಪೂರೈಕೆಯಲ್ಲಿನ ವ್ಯತ್ಯಗಳ ಕಾರಣದಿಂದ 2021 ಅಂತ್ಯಕ್ಕೆ ದೇಶದ ಜನರನ್ನು ವ್ಯಾಕ್ಸಿನೇಟ್ ಮಾಡುವ ಕೇಂದ್ರ ಸರ್ಕಾರದ ಗುರಿಯ ಸಾಧನೆ ಮಂಕಾಗತೊಡಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ವರ್ಷಾಂತ್ಯಕ್ಕೆ ದೇಶದ ಎಲ್ಲಾ ಜನರಿಗೆ ಲಸಿಕೆ ಕೊಡುವ ನಿಜವಾದ ಪ್ರಯತ್ನಗಳನ್ನು ಮಾಡುತ್ತಿರುವುದೇ ಆದರೆ ದಿನನಿತ್ಯದ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ನಿತ್ಯ ಇಷ್ಟು ಏರಿಳಿಕೆಗಳು ಹೇಗೆ ಸಾಧ್ಯ ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿಯೇ ಉಳಿಯುತ್ತದೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿಯೇ ಹೊಸದಾದ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡು ದೇಶದಲ್ಲಿ ಆತಂಕವನ್ನು ಹುಟ್ಟಿಸಿದೆ. ಈಗ ಸಧ್ಯ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶದ ಮುಂದಿರುವ ಏಕೈಕ ಅಸ್ತ್ರ ವ್ಯಾಕ್ಸಿನೇಶನ್. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕವಾಗಿ ವ್ಯಾಕ್ಸಿನೇಶನ್ ಪ್ರಯತ್ನವನ್ನು ಕೈಗೊಂಡರೆ ಮಾತ್ರ ದೇಶ ಕೊರೋನಾ ವಿರುದ್ಧ ಹೋರಾಡಲು ಸಾಧ್ಯ.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...