Homeಕರೋನಾ ತಲ್ಲಣಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ...

ಸೋಮವಾರ 88 ಲಕ್ಷ ಡೋಸ್, ಮಂಗಳವಾರ 54 ಲಕ್ಷ ಡೋಸ್: ಒಂದೇ ದಿನದಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ದಿಢೀರ್ ಇಳಿಕೆ!

ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ.

- Advertisement -
- Advertisement -

ಭಾರತದಲ್ಲಿ ಜೂನ್ 21 ರ ಸೋಮವಾರದಿಂದ ಲಸಿಕೆ ಅಭಿಯಾನಕ್ಕೆ ತೀವ್ರ ವೇಗವನ್ನು ನೀಡಲಾಗಿತ್ತು. ವ್ಯಾಪಕ ವ್ಯಾಕ್ಸಿನೇಶನ್ ಪ್ರಕ್ರಿಯೆಯ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ವೇಗವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಹಾಗೇ ಜೂನ್‌ 21 ರ ಸೋಮವಾರ ದೇಶಾದ್ಯಂತ 88 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನದಲ್ಲಿ ಅತಿಹೆಚ್ಚು ವ್ಯಾಕ್ಸಿನೇಶನ್‌ ನೀಡಿದ ದಾಖಲೆಯೂ ನಿರ್ಮಾಣವಾಗಿತ್ತು. ಜೂನ್ 21 ರಂದು ಗರಿಷ್ಠ ಮಟ್ಟ ತಲುಪಿದ್ದ ವ್ಯಾಕ್ಸಿನೇಶನ್ ಪ್ರಕ್ರಿಯೆ ಮಂಗಳವಾರದ ಹೊತ್ತಿಗೆ ಮತ್ತೆ ಕುಸಿತಗೊಂಡಿದೆ. ಮಂಗಳವಾರ ದೇಶದಲ್ಲಿ 54.22 ಲಕ್ಷ ಡೋಸ್‌ಗಳಷ್ಟು ಮಾತ್ರ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿನ ದಿಢೀರ್ ಕುಸಿತ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ದೊಡ್ಡ ಮಟ್ಟದ ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ದೀರ್ಘಾವಧಿಯವರೆಗೆ ಕಾಯ್ದುಕೊಂಡು ಹೋಗುವುದು ಸಾಧ್ಯವೇ ಎಂಬ ಅನುಮಾನ ಹುಟ್ಟತೊಡಗಿದೆ. ನಮ್ಮ ಲಸಿಕೆ ಅಭಿಯಾನ ಅರಂಭಿಕ ಶೂರತ್ವ ಮಾತ್ರವೇ ಅಥವಾ ನಿಯಮಿತವಾಗಿ ದೊಡ್ಡ ಮಟ್ಟದಲ್ಲಿ ವ್ಯಾಕ್ಸೀನ್‌ಗಳನ್ನು ನಿಡುವಷ್ಟು ಉತ್ಪಾದನೆ ದೇಶದಲ್ಲಿ ಇದೆಯೆ ಎಂಬ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಜೊತೆಗೆ ಜೂನ್ 21 ರ ಸೋಮವಾರದ ಅತಿ ಹೆಚ್ಚು ಮ್ಯಾಜಿಕ್ ನಂಬರ್‌ಗಳನ್ನು ತಲುಪಲು ರಾಜ್ಯ ಸರ್ಕಾರಗಳು ಈ ಹಿಂದಿನ ಅನೇಕ ದಿನಗಳ ಕಾಲ ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ದಾಸ್ತಾನು ಮಾಡಿದ್ದವು ಎಂಬ ಆರೋಪಗಳು ಕೂಡ ಕೇಳಿಬಂದಿದೆ. ಸೋಮವಾರ ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಲಾದ ಮೊದಲ 10 ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಇವೆ. ಜೂನ್ 21 ರಂದು ಅತಿಹೆಚ್ಚು ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರದ ಹೊತ್ತಿಗೆ ಲಸಿಕೆ ಅಭಿಯಾನ ಸೋಮವಾರದ ಅರ್ಧದಷ್ಟಕ್ಕೆ ಬಂದಿದೆ.

2021ರ ಅಂತ್ಯಕ್ಕೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಕೆಂದ್ರ ಸರ್ಕಾರ ಇಟ್ಟುಕೊಂಡಿದೆ. ಮತ್ತು ಅದೇ ಗುರಿಯನ್ನು ಸಾಧಿಸಲಿಕ್ಕೆ ರಾಜ್ಯಗಳ ಮೇಲೆಯೂ ಒತ್ತಡ ಹಾಕುತ್ತಿದೆ. ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ಗುರಿಯನ್ನು ತಲುಪಲು ದಿನ ನಿತ್ಯ ನಿಯಮಿತವಾಗಿ 97 ಲಕ್ಷ ಡೋಸ್ ವ್ಯಾಕ್ಸೀನ್‌ಗಳನ್ನು ನೀಡಬೇಕು. ಸಧ್ಯ ದೇಶದಲ್ಲಿ ಲಭ್ಯವಿರುವ ವ್ಯಾಕ್ಸಿನ್‌ ಪೂರೈಕೆಯನ್ನು ಗಮನಿಸಿದರೆ ವರ್ಷಾಂತ್ಯದ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ಕೇಂದ್ರ ಸರ್ಕಾರದ ಗುರಿ ಸಾಧಿಸುವುದು ಅನುಮಾನವಾಗಿ ಕಾಣುತ್ತಿದೆ.

ದೇಶದಲ್ಲಿ ದಿನನಿತ್ಯ ಅಗತ್ಯವಿರುವ ವ್ಯಾಕ್ಸಿನ್‌ಗಳನ್ನು ಪೂರೈಸುವ ಸಾಮರ್ಥ್ಯ ತನಗಿದೆ ಎಂದು ಕೇಂದ್ರ ಸರ್ಕಾರ ಪದೇ ಪದೇ ಹೇಳುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರ ದಿನಕ್ಕೆ 1 ಕೋಟಿ ವ್ಯಾಕ್ಸಿನ್‌ಗಳನ್ನು ನೀಡುವ ಗುರಿಯನ್ನು ಹೊಂದಿದೆ. ಸರ್ಕಾರಕ್ಕೆ ದಿನಕ್ಕೆ 1.25 ಕೋಟಿ ವ್ಯಾಕ್ಸಿನ್‌ಗಳನ್ನು ದಾಸ್ತಾನು ಮಾಡಿ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನ್ಯಾಷನಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (NTAGI) ಅಧ್ಯಕ್ಷ  ಡಾ. ಎನ್‌.ಕೆ. ಅರೋರಾ ಹೇಳುತ್ತಾರೆ. ಆದರೆ ಇದುವರೆಗೆ ಡಾ. ಅರೋರಾ ಅವರ ಮಾತನ್ನು ಸಾಬೀತು ಪಡಿಸುವ ಅಂಕಿ ಅಂಶಗಳು ಎಲ್ಲೂ ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ನಾವು ಮುಂದಿನ 15 ದಿನಗಳ ವ್ಯಾಕ್ಸಿನ್‌ ಬೇಡಿಕೆಯನ್ನು ಮುಂಚಿತವಾಗಿ ನೀಡುವಂತೆ ರಾಜ್ಯಗಳಿಗೆ ಕೇಳಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸುತ್ತಾರೆ.

ಮಂಗಳವಾರದ ರಾಜ್ಯವಾರು ವ್ಯಾಕ್ಸಿನೇಶನ್ ಅಂಕಿ ಅಂಶವನ್ನು ನೋಡಿದರೆ ಅತ್ಯಂತ ಕಳವಳಕಾರಿಯಾಗಿದೆ. ಜೂನ್ 21 ರ ಸೋಮವಾರ ದೇಶದಲ್ಲಿ ಅತಿಹೆಚ್ಚು ಎಂದರೆ 17 ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಿದ್ದ ಮಧ್ಯಪ್ರದೇಶದಲ್ಲಿ ಮಂಗಳವಾರ ಕೇವಲ 4,563 ಗಳಷ್ಟು ವ್ಯಾಕ್ಸಿನ್‌ ಡೋಸ್‌ಗಳನ್ನು ಮಾತ್ರ ನೀಡಲಾಗಿದೆ. ಹಾಗೇ ಸೋಮವಾರ ತೆರೆಯಲಾಗಿದ್ದ ಬಹುತೇಕ ವ್ಯಾಕ್ಸೀನೇಷನ್ ಸೆಂಟರ್ ಗಳನ್ನು ಮುಚ್ಚಲಾಗಿದೆ. ಹಾಗೇ ಹಿಂದೆ ಮಧ್ಯ ಪ್ರದೇಶದಲ್ಲಿ ನಿತ್ಯ 5000 ಕ್ಕಿಂತ ಕಡಿಮೆ ವ್ಯಾಕ್ಸೀನ್‌ಗಳನ್ನು ನೀಡಿದ ಉದಾಹರಣೆಗಳಿಲ್ಲ. ಆದರೆ ಜೂನ್ 20ರ ಭಾನುವಾರ ಮಾತ್ರ ಮಧ್ಯ ಪ್ರದೇಶದಲ್ಲಿ ಕೇವಲ  692 ಡೋಸ್ ವ್ಯಾಕ್ಸೀನ್‌ಗಳನ್ನು ನೀಡಲಾಗಿತ್ತು. ಮಧ್ಯ ಪ್ರದೇಶದ ಇದುವರೆಗಿನ ಅತಿಹೆಚ್ಚು ವ್ಯಾಕ್ಸೀನ್‌ಗಳನ್ನು ನೀಡಿದ ದಾಖಲೆ 5 ಲಕ್ಷ ಡೊಸ್‌ಗಳಾಗಿತ್ತು. ಅದು ಜೂನ್ 14 ರಂದು. ವ್ಯಾಕ್ಸೀನೇಶನ್ ಪ್ರಕ್ರಿಯೆಯಲ್ಲಿನ ನಾಟಕೀಯ ಏರಿಕೆ-ಇಳಿಕೆಗಳು ಮಧ್ಯಪ್ರದೇಶ ಸರ್ಕಾರದತ್ತ ಬೊಟ್ಟು ಮಾಡುವಂತೆ ಮಾಡಿವೆ. ರಾಜ್ಯ ಸರ್ಕಾರ ದಿನನಿತ್ಯ ವ್ಯಾಕ್ಸಿನ್‌ಗಳನ್ನು ನೀಡದೇ ಸಂಗ್ರಹಿಸಿಟ್ಟು ಜೂನ್ 21 ರಂದು ಅತಿ ಹೆಚ್ಚು ವ್ಯಾಕ್ಸೀನ್ ವಿತರಿಸುವ ನಾಟಕವಾಡಿದೆ ಎಂದು ಅನೇಕ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಕರ್ನಾಟಕದಲ್ಲಿಯೂ ಮಂಗಳವಾರದ ಹೊತ್ತಿಗೆ ವ್ಯಾಕ್ಸಿನೇಶನ್‌ ನಂಬರ್‌ಗಳು ಗಣನೀಯವಾಗಿ ಇಳಿಮುಖವಾಗಿದೆ. ಸೋಮವಾರ 11 ಲಕ್ಷ ಡೋಸ್‌ಗಳಷ್ಟು ವ್ಯಾಕ್ಸೀನ್ ನೀಡಲಾಗಿದ್ದರೆ ಮಂಗಳವಾರ ಜೂನ್ 22 ರಂದು ಈ ಸಂಖ್ಯೆ 3.8 ಲಕ್ಷಕ್ಕೆ ಬಂದು ತಲುಪಿದೆ. ಮಧ್ಯ ಪ್ರದೇಶ, ಕರ್ನಾಟಕ, ಹರಿಯಾಣಗಳಲ್ಲಿ ಮಂಗಳವಾರ ನಾಟಕೀಯ ರೀತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸೀನ್‌ಗಳನ್ನು ನೀಡಲಾಗಿದೆ. ಇದು ದೇಶದ ವ್ಯಾಕ್ಸೀನೇಶನ್ ಅಂಕಿ ಅಂಶದ ಕುಸಿತಕ್ಕೂ ಕಾರಣವಾಗಿದೆ.

ಉತ್ತರ ಪ್ರದೇಶ ರಾಜ್ಯವೊಂದರಲ್ಲಿ ಮಾತ್ರ ಸೋಮವಾರಕ್ಕಿಂತ ಮಂಗಳವಾರ ಹೆಚ್ಚು ವ್ಯಾಕ್ಸೀನ್ ಡೋಸ್‌ಗಳನ್ನು ನೀಡಲಾಗಿದೆ. ಸೋಮವಾರ ಸುಮಾರು 7ಲಕ್ಷ ವ್ಯಾಕ್ಸಿನ್‌ಗಳನ್ನು ನೀಡಲಾಗಿದ್ದರೆ ಮಂಗಳವಾರ 8 ಲಕ್ಷ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ.

ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಮಂಗಳವಾರದ ದಿಢೀರ್ ಇಳಿಕೆಯ ಕುರಿತು ವಿವಿಧ ರಾಜಕೀಯ ಪಕ್ಷದ ನಾಯಕರು ಪ್ರತಿಕ್ರಿಯಿಸಿದ್ದು ಕೇಂದ್ರ ಸರ್ಕಾರ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಆರೋಪಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪಿ. ಚಿದಂಬರಂ ಪ್ರತಿಕ್ರಿಯಿಸಿ, “ಸೋಮವಾರದ ವ್ಯಾಕ್ಸಿನೇಶನ್ ದಾಖಲೆಯ ಹಿಂದಿನ ಸತ್ಯ ಮಂಗಳವಾರ ಬಹಿರಂಗಗೊಂಡಿದೆ. ಭಾನುವಾರ ವ್ಯಾಕ್ಸಿನೇಶನ್ ನಿಲ್ಲಿಸಿ, ಸೋಮವಾರ ವಿಶ್ವದಾಖಲೆ ಮಾಡಿ, ಮತ್ತೆ ಮಂಗಳವಾರ ಹಿಂದಿನ ಸ್ಥಿತಿಗೆ ತಲುಪುವುದು. ಇದೇ ಕೇಂದ್ರ ಸರ್ಕಾರದ ವ್ಯಾಕ್ಸೀನ್ ನೀತಿ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಹೋರಾಟಗಾರ ಯೋಗೆಂದ್ರ ಯಾದವ್ ಅವರು ಜೂನ್ 18 ರಿಂದ ಜೂನ್ 22ರ ವರೆಗಿನ ರಾಜ್ಯವಾರು ವ್ಯಾಕ್ಸಿನೇಶನ್ ಕುರಿತು ಅಂಕಿ ಸಂಖ್ಯೆಗಳ ಸಮೇತ ತೋರಿಸಿ ವ್ಯಾಕ್ಸಿನೇಶನ್ ಅನ್ನು ಒಂದು ದಿನದ ಇವೆಂಟ್‌ ಆಗಿ ನಡೆಸುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಢಿಯಾಗಿಸಿಕೊಂಡಿವೆ ಎಂದು ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡಿದ್ದಾರೆ.

ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮಂಗಳವಾರದದ ವ್ಯಾಕ್ಸಿನೇಶನ್ ನಂಬರ್‌ಗಳ ಇಳಿಕೆ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿದ್ದು ಲಸಿಕೆ ಅಭಿಯಾನವನ್ನು ಪ್ರಚಾರ ಆಂದೋಲನವಾಗಿ ನಡೆಸುವುದನ್ನು ಬಿಟ್ಟು ದೇಶದಲ್ಲಿ ನಿತ್ಯ ಕನಿಷ್ಠ 80 ಲಕ್ಷ ವ್ಯಾಕ್ಸಿನ್‌ಗಳನ್ನು ನಿಯಮಿತವಾಗಿ ನೀಡುವಂತೆ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ವ್ಯಾಕ್ಸಿನ್‌ ನೀತಿಯಲ್ಲಿನ ಪಾರದರ್ಶಕತೆಯ ಕೊರತೆ, ಅಸಮರ್ಪಕ ಯೋಜನೆ, ಪೂರೈಕೆಯಲ್ಲಿನ ವ್ಯತ್ಯಗಳ ಕಾರಣದಿಂದ 2021 ಅಂತ್ಯಕ್ಕೆ ದೇಶದ ಜನರನ್ನು ವ್ಯಾಕ್ಸಿನೇಟ್ ಮಾಡುವ ಕೇಂದ್ರ ಸರ್ಕಾರದ ಗುರಿಯ ಸಾಧನೆ ಮಂಕಾಗತೊಡಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ಈ ವರ್ಷಾಂತ್ಯಕ್ಕೆ ದೇಶದ ಎಲ್ಲಾ ಜನರಿಗೆ ಲಸಿಕೆ ಕೊಡುವ ನಿಜವಾದ ಪ್ರಯತ್ನಗಳನ್ನು ಮಾಡುತ್ತಿರುವುದೇ ಆದರೆ ದಿನನಿತ್ಯದ ವ್ಯಾಕ್ಸಿನೇಶನ್ ಪ್ರಕ್ರಿಯೆಯಲ್ಲಿ ನಿತ್ಯ ಇಷ್ಟು ಏರಿಳಿಕೆಗಳು ಹೇಗೆ ಸಾಧ್ಯ ಎಂಬ ಪ್ರಶ್ನೆ ಯಕ್ಷ ಪ್ರಶ್ನೆಯಾಗಿಯೇ ಉಳಿಯುತ್ತದೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿಯೇ ಹೊಸದಾದ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡು ದೇಶದಲ್ಲಿ ಆತಂಕವನ್ನು ಹುಟ್ಟಿಸಿದೆ. ಈಗ ಸಧ್ಯ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶದ ಮುಂದಿರುವ ಏಕೈಕ ಅಸ್ತ್ರ ವ್ಯಾಕ್ಸಿನೇಶನ್. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕವಾಗಿ ವ್ಯಾಕ್ಸಿನೇಶನ್ ಪ್ರಯತ್ನವನ್ನು ಕೈಗೊಂಡರೆ ಮಾತ್ರ ದೇಶ ಕೊರೋನಾ ವಿರುದ್ಧ ಹೋರಾಡಲು ಸಾಧ್ಯ.

ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...