Homeಮುಖಪುಟದಿಢೀರ್‌ ಭದ್ರತಾ ಲೋಪ: ಇಂದಿನ ಭಾರತ್ ಜೋಡೋ ಯಾತ್ರೆ ನಿಲ್ಲಿಸಿದ ಕಾಂಗ್ರೆಸ್

ದಿಢೀರ್‌ ಭದ್ರತಾ ಲೋಪ: ಇಂದಿನ ಭಾರತ್ ಜೋಡೋ ಯಾತ್ರೆ ನಿಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯು ಇಂದು ಕಾಶ್ಮೀರದಲ್ಲಿ ದಿಢೀರ್‌ ರದ್ದುಗೊಳಿಸಲಾಯಿತು. “ಅತ್ಯಂತ ಗಂಭೀರ ಭದ್ರತಾ ಲೋಪವಾಗಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿಯವರು ಕಾಶ್ಮೀರ ಕಣಿವೆಯಲ್ಲಿ ಇಂದು 11 ಕಿ.ಮೀ ನಡೆಯಬೇಕಿತ್ತು. ಆದರೆ ಒಂದು ಕಿಲೋಮೀಟರ್ ನಂತರ ನಿಲ್ಲಿಸಿದರು. ರಾಹುಲ್ ಗಾಂಧಿಯವರು ಕಾಶ್ಮೀರಕ್ಕೆ ಕಾಲಿಡುತ್ತಿದ್ದಂತೆ, ದೊಡ್ಡ ಹಾಗೂ ಅನಿರೀಕ್ಷಿತ ಜನಸಮೂಹ ಅವರಿಗಾಗಿ ಕಾಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

“ಭದ್ರತಾ ಸಿಬ್ಬಂದಿಯ ಹಠಾತ್ ವಾಪಸಾತಿಯಿಂದಾಗಿ ಗಂಭೀರ ಭದ್ರತಾ ಉಲ್ಲಂಘನೆಯಾಗಿದೆ” ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ಜನಸಂದಣಿಯನ್ನು ಸರಿಯಾಗಿ ನಿರ್ವಹಿಸುವಲ್ಲಿ ಸೋತಿದೆ ಎಂದು ದೂರಲಾಗಿದೆ.

ಶ್ರೀನಗರಕ್ಕೆ ಹೋಗುವ ದಾರಿಯಲ್ಲಿ ಬನಿಹಾಲ್ ಸುರಂಗವನ್ನು ದಾಟಿದ ನಂತರ ರಾಹುಲ್ ಗಾಂಧಿಯವರು ಪಾದಯಾತ್ರೆಯನ್ನು ನಿಲ್ಲಿಸಿದರು. ಭಾರೀ ಜನಸಮೂಹ ಸೇರಿದ್ದು, ಅಸಮರ್ಪಕ ಭದ್ರತೆಯಿಂದಾಗಿ ಕಾಂಗ್ರೆಸ್ ಯಾತ್ರೆಯನ್ನು ನಿಲ್ಲಿಸಬೇಕಾಯಿತು ಎಂದು ಮೂಲಗಳು ಸ್ಪಷ್ಟಪಡಿಸಿವೆ.

ರಾಹುಲ್ ಗಾಂಧಿ ಅವರು 30 ನಿಮಿಷವೂ ಪಾದಯಾತ್ರೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅವರನ್ನು ಭದ್ರತಾ ವಾಹನದಲ್ಲಿ ಕರೆದೊಯ್ಯಲಾಯಿತು, ಪಕ್ಷವು ಇಂದಿನ ಯಾತ್ರೆಯನ್ನು ರದ್ದುಗೊಳಿಸಿತು.

“ನಾವು ಬನಿಹಾಲ್ ಸುರಂಗವನ್ನು ದಾಟಿದ ನಂತರ ಪೊಲೀಸರು ರಕ್ಷಣೆ ನೀಡಲಿಲ್ಲ” ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಒಮರ್ ಅಬ್ದುಲ್ಲಾ ಅವರಿಗೆ ಸೂಕ್ತ ಭದ್ರತೆಯನ್ನು ಪೊಲೀಸರು ನೀಡಿರಲಿಲ್ಲ. ಗಂಭೀರವಾದ ಭದ್ರತಾ ಲೋಪಗಳಾಗಿವೆ. ರಾಹುಲ್ ಗಾಂಧಿ ಯಾವುದೇ ಭದ್ರತೆಯಿಲ್ಲದೆ ಹೋಗುತ್ತಿದ್ದರು. ನಾವು ಭದ್ರತಾ ಅಂಶದ ಬಗ್ಗೆ ತುಂಬಾ ಕಾಳಜಿ ವಹಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತ್ ಜೋಡೋ: ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ?

“ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡಲಿದೆ” ಎಂದು ಇಂಡಿಯಾ ಟುಡೆ ನಡೆಸಿದ ಸಮೀಕ್ಷೆ ಹೇಳಿದೆ.

ಇಂಡಿಯಾ ಟುಡೇ-ಸಿವೋಟರ್‌ ನಡೆಸಿರುವ ‘ಮೂಡ್ ಆಫ್‌ ದಿ ನೇಷನ್‌’ ಸಮೀಕ್ಷೆಯು, ಭಾರತ್ ಜೋಡೋ ಯಾತ್ರೆಯು ದೊಡ್ಡ ಮಟ್ಟದಲ್ಲಿ ನಡೆದಿರುವ ಸಾರ್ವಜನಿಕ ಸಂಪರ್ಕದ ಪ್ರಯೋಗವಾಗಿದೆ ಎಂದು 29% ರಷ್ಟು ಜನರು ಹೇಳಿರುವುದಾಗಿ ತಿಳಿಸಿದೆ.

ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ 37% ಜನರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಸಂಚಲನವನ್ನು ಸೃಷ್ಟಿಸಿದೆ, ಆದರೆ ಕಾಂಗ್ರೆಸ್‌ಗೆ ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಸಮೀಕ್ಷೆಗೆ ಪ್ರತಿಕ್ರಿಯಿಸಿದ 26% ರಷ್ಟು ಮಂದಿ ಕಾಂಗ್ರೆಸ್ ಅನ್ನು ಪುನರುಜ್ಜೀವನಗೊಳಿಸಲು ರಾಹುಲ್ ಗಾಂಧಿಯೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 284 ಸ್ಥಾನಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್ 191 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಸಮೀಕ್ಷೆಯು 1,40,917 ಜನರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...