Homeಮುಖಪುಟದಿಢೀರ್‌ ಭದ್ರತಾ ಲೋಪ: ಇಂದಿನ ಭಾರತ್ ಜೋಡೋ ಯಾತ್ರೆ ನಿಲ್ಲಿಸಿದ ಕಾಂಗ್ರೆಸ್

ದಿಢೀರ್‌ ಭದ್ರತಾ ಲೋಪ: ಇಂದಿನ ಭಾರತ್ ಜೋಡೋ ಯಾತ್ರೆ ನಿಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯು ಇಂದು ಕಾಶ್ಮೀರದಲ್ಲಿ ದಿಢೀರ್‌ ರದ್ದುಗೊಳಿಸಲಾಯಿತು. “ಅತ್ಯಂತ ಗಂಭೀರ ಭದ್ರತಾ ಲೋಪವಾಗಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿಯವರು ಕಾಶ್ಮೀರ ಕಣಿವೆಯಲ್ಲಿ ಇಂದು 11 ಕಿ.ಮೀ ನಡೆಯಬೇಕಿತ್ತು. ಆದರೆ ಒಂದು ಕಿಲೋಮೀಟರ್ ನಂತರ ನಿಲ್ಲಿಸಿದರು. ರಾಹುಲ್ ಗಾಂಧಿಯವರು ಕಾಶ್ಮೀರಕ್ಕೆ ಕಾಲಿಡುತ್ತಿದ್ದಂತೆ, ದೊಡ್ಡ ಹಾಗೂ ಅನಿರೀಕ್ಷಿತ ಜನಸಮೂಹ ಅವರಿಗಾಗಿ ಕಾಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

“ಭದ್ರತಾ ಸಿಬ್ಬಂದಿಯ ಹಠಾತ್ ವಾಪಸಾತಿಯಿಂದಾಗಿ ಗಂಭೀರ ಭದ್ರತಾ ಉಲ್ಲಂಘನೆಯಾಗಿದೆ” ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ಜನಸಂದಣಿಯನ್ನು ಸರಿಯಾಗಿ ನಿರ್ವಹಿಸುವಲ್ಲಿ ಸೋತಿದೆ ಎಂದು ದೂರಲಾಗಿದೆ.

ಶ್ರೀನಗರಕ್ಕೆ ಹೋಗುವ ದಾರಿಯಲ್ಲಿ ಬನಿಹಾಲ್ ಸುರಂಗವನ್ನು ದಾಟಿದ ನಂತರ ರಾಹುಲ್ ಗಾಂಧಿಯವರು ಪಾದಯಾತ್ರೆಯನ್ನು ನಿಲ್ಲಿಸಿದರು. ಭಾರೀ ಜನಸಮೂಹ ಸೇರಿದ್ದು, ಅಸಮರ್ಪಕ ಭದ್ರತೆಯಿಂದಾಗಿ ಕಾಂಗ್ರೆಸ್ ಯಾತ್ರೆಯನ್ನು ನಿಲ್ಲಿಸಬೇಕಾಯಿತು ಎಂದು ಮೂಲಗಳು ಸ್ಪಷ್ಟಪಡಿಸಿವೆ.

ರಾಹುಲ್ ಗಾಂಧಿ ಅವರು 30 ನಿಮಿಷವೂ ಪಾದಯಾತ್ರೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅವರನ್ನು ಭದ್ರತಾ ವಾಹನದಲ್ಲಿ ಕರೆದೊಯ್ಯಲಾಯಿತು, ಪಕ್ಷವು ಇಂದಿನ ಯಾತ್ರೆಯನ್ನು ರದ್ದುಗೊಳಿಸಿತು.

“ನಾವು ಬನಿಹಾಲ್ ಸುರಂಗವನ್ನು ದಾಟಿದ ನಂತರ ಪೊಲೀಸರು ರಕ್ಷಣೆ ನೀಡಲಿಲ್ಲ” ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಒಮರ್ ಅಬ್ದುಲ್ಲಾ ಅವರಿಗೆ ಸೂಕ್ತ ಭದ್ರತೆಯನ್ನು ಪೊಲೀಸರು ನೀಡಿರಲಿಲ್ಲ. ಗಂಭೀರವಾದ ಭದ್ರತಾ ಲೋಪಗಳಾಗಿವೆ. ರಾಹುಲ್ ಗಾಂಧಿ ಯಾವುದೇ ಭದ್ರತೆಯಿಲ್ಲದೆ ಹೋಗುತ್ತಿದ್ದರು. ನಾವು ಭದ್ರತಾ ಅಂಶದ ಬಗ್ಗೆ ತುಂಬಾ ಕಾಳಜಿ ವಹಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತ್ ಜೋಡೋ: ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ?

“ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡಲಿದೆ” ಎಂದು ಇಂಡಿಯಾ ಟುಡೆ ನಡೆಸಿದ ಸಮೀಕ್ಷೆ ಹೇಳಿದೆ.

ಇಂಡಿಯಾ ಟುಡೇ-ಸಿವೋಟರ್‌ ನಡೆಸಿರುವ ‘ಮೂಡ್ ಆಫ್‌ ದಿ ನೇಷನ್‌’ ಸಮೀಕ್ಷೆಯು, ಭಾರತ್ ಜೋಡೋ ಯಾತ್ರೆಯು ದೊಡ್ಡ ಮಟ್ಟದಲ್ಲಿ ನಡೆದಿರುವ ಸಾರ್ವಜನಿಕ ಸಂಪರ್ಕದ ಪ್ರಯೋಗವಾಗಿದೆ ಎಂದು 29% ರಷ್ಟು ಜನರು ಹೇಳಿರುವುದಾಗಿ ತಿಳಿಸಿದೆ.

ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ 37% ಜನರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಸಂಚಲನವನ್ನು ಸೃಷ್ಟಿಸಿದೆ, ಆದರೆ ಕಾಂಗ್ರೆಸ್‌ಗೆ ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಸಮೀಕ್ಷೆಗೆ ಪ್ರತಿಕ್ರಿಯಿಸಿದ 26% ರಷ್ಟು ಮಂದಿ ಕಾಂಗ್ರೆಸ್ ಅನ್ನು ಪುನರುಜ್ಜೀವನಗೊಳಿಸಲು ರಾಹುಲ್ ಗಾಂಧಿಯೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 284 ಸ್ಥಾನಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್ 191 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಸಮೀಕ್ಷೆಯು 1,40,917 ಜನರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...