Homeಚಳವಳಿಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಬಂಧಿತರಾದ 16 ಹೋರಾಟಗಾರರಲ್ಲಿ ಸುಧಾ ಭಾರದ್ವಾಜ್ ಡೀಫಾಲ್ಟ್ ಜಾಮೀನು ಪಡೆದ ಮೊದಲಿಗರಾಗಿದ್ದಾರೆ.

- Advertisement -
- Advertisement -

ಹೋರಾಟಗಾರ್ತಿ ಸುಧಾ ಭಾರದ್ವಾಜ್‌ರವರಿಗೆ ಬಾಂಬೆ ಹೈಕೋರ್ಟ್‌ ನೀಡಲಾದ ಡೀಫಾಲ್ಟ್‌ ಜಾಮೀನನ್ನು ಪ್ರಶ್ನಿಸಿ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಹಾಗಾಗಿ ಸುಧಾ ಭಾರದ್ವಾಜ್‌ರವರು ಡೀಫಾಲ್ಟ್ ಜಾಮೀನಿಗೆ ಅರ್ಹರಾಗಿದ್ದು ನಾಳೆ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಬಂಧನವಾಗಿ ಮೂರು ವರ್ಷಗಳು ಕಳೆದರೂ ಪೊಲೀಸರು ಯಾವುದೆ ದೋಷಾರೋಪ ಪಟ್ಟಿಯನ್ನು ಸಲ್ಲಿಸದೇ ಇರುವ ಕಾರಣ ಭೀಮಾ ಕೊರೆಗಾಂವ್‌‌‌ – ಎಲ್ಗರ್‌ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾನವ ಹಕ್ಕುಗಳ ಹೋರಾಟಗಾರ್ತಿ, ವಕೀಲೆ ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಕಳೆದ ವಾರ ಡೀಫಾಲ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಅದನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಾಂಬೆ ಹೈಕೋರ್ಟ್ ನೀಡಿದ ಜಾಮೀನಿನಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ನ್ಯಾಯಮೂರ್ತಿಗಳಾದ ಎಸ್‌ ಎಸ್‌ ಶಿಂಧೆ ಮತ್ತು ಎನ್‌ಜೆ ಜಾಮದಾರ್‌ರವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣದ ತನಿಖೆಗಾಗಿ ಒದಗಿಸಲಾದ ಗರಿಷ್ಠ ಅವಧಿ ಮುಗಿದ ನಂತರವೂ ಪೊಲೀಸರು ಯಾವುದೇ ಆರೋಪ ಪಟ್ಟಿಯನ್ನು ಸಲ್ಲಿಸದಿದ್ದರೆ, ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹನಾಗುತ್ತಾರೆ. ಇನ್ನು ಡೀಫಾಲ್ಟ್‌ ಜಾಮೀನು ಎಂದು ಕರೆಯುತ್ತಾರೆ.

ಡಿಸೆಂಬರ್ 8 ರಂದು ಮುಂಬೈನ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ತನ್ನ ಜಾಮೀನಿನ ಷರತ್ತುಗಳ ನಿರ್ಧಾರಕ್ಕಾಗಿ ಸುಧಾ ಭಾರದ್ವಾಜ್‌ರವರು ಹಾಜರಾಗಬೇಕಾಗುತ್ತದೆ. ಇದರ ನಂತರ ಬೈಕುಲ್ಲಾ ಮಹಿಳಾ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಗುತ್ತದೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿರುವ ಸುಧಾ ಭಾರದ್ವಾಜ್‌ರವರು ನವೆಂಬರ್ 26, 2018 ರಂದು ಡೀಫಾಲ್ಟ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ವಿರುದ್ಧ ಫೆಬ್ರವರಿ 21, 2019 ರಂದು ಚಾರ್ಜ್‌ಶೀಟ್ ಸಲ್ಲಿಸಲಾಯಿತು. ಹಾಗಾಗಿ ಅವರಿಗೆ ಜಾಮೀನು ಲಭ್ಯವಾಗಿದೆ.

ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಬಂಧಿತರಾದ 16 ಹೋರಾಟಗಾರರಲ್ಲಿ ಸುಧಾ ಭಾರದ್ವಾಜ್ ಡೀಫಾಲ್ಟ್ ಜಾಮೀನು ಪಡೆದ ಮೊದಲಿಗರಾಗಿದ್ದಾರೆ.

ಮೇ 2019ರಲ್ಲಿ ಅಂದರೆ ಚಾರ್ಜ್‌ಶೀಟ್‌ ಸಲ್ಲಿಸಿದ ನಂತರ ಜಾಮೀನಿಗೆ ಅರ್ಜಿ ಹಾಕಿದ ವರವರರಾವ್, ಅರುಣ್ ಫೆರಾರ, ವೆರ್ನನ್ ಗೊನ್ಸಾಲ್ವ್ಸ್ ರವರಿಗೆ ಜಾಮೀನು ನೀಡಲಾಗಿಲ್ಲ. ಆದರೆ ವರವರರಾವ್‌ರವರು ತಮ್ಮ ಅನಾರೋಗ್ಯದ ಕಾರಣಕ್ಕೆ ಡಿಸೆಂಬರ್ 06ರವರೆಗೆ ಜಾಮೀನು ಪಡೆದಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ಸ್ವಾಗತಾರ್ಹ. ಬೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂದಿತರಾಗಿರುವ ಎಲ್ಲರನ್ನೂ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...