Homeಮುಖಪುಟಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಸುಧಾ ಭಾರದ್ವಾಜ್‌ರವರಿಗೆ ಬಾಂಬೆ ಹೈಕೋರ್ಟ್ ಡೀಫಾಲ್ಟ್ ಜಾಮೀನು ನೀಡಿದೆ. ಸುಪ್ರೀಂ ಅದನ್ನು ಎತ್ತಿ ಹಿಡಿದಿದೆ. ಇಂದು ಅವರು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

- Advertisement -
- Advertisement -

6ನೇ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಭಾವಚಿತ್ರ ಪ್ರದರ್ಶನದಲ್ಲಿ ಜಗತ್ತಿನಾದ್ಯಂತ ಕಾನೂನು ಹಾಗೂ ನೀತಿ ನಿರೂಪಣೆಯ ಕ್ಷೇತ್ರದಲ್ಲಿ ತಮ್ಮ ಅಮೂಲ್ಯ ಕೊಡುಗೆಗಳನ್ನು ನೀಡಿದ ಮಹಿಳೆಯರಿಗೆ ಗೌರವವನ್ನು ಸಲ್ಲಿಸಲಾಯಿತು. ಆ ಎಲ್ಲ ಮಹಿಳಾ ಪ್ರತಿನಿಧಿಗಳನ್ನು ಆಯ್ಕೆ ಮಾಡಿದವರು ಹಾರ್ವರ್ಡ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ. ಈ ಎಲ್ಲಾ ಮಹಿಳಾ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಗಟ್ಟಿಯಾದ ಧ್ವನಿಯನ್ನು ಮೊಳಗಿಸಿದವರು. ಅದು ಹೈಕೋರ್ಟಿನ ಬೆಂಚಿನಲ್ಲಿ ಕುಳಿತಾಗಿರಬಹುದು, ಕ್ಲಾಕ್‌ರೂಮಿನಲ್ಲಿ ವಿದ್ಯಾರ್ಥಿಗಳ ಎದುರು ನಿಂತಾಗಿರಬಹುದು ಅಥವಾ ರಸ್ತೆಗಳಲ್ಲಿ ಪ್ರತಿಭಟಿಸುವುದಾಗಿರಬಹುದು ಅಥವಾ ಜೈಲಿನಲ್ಲಿ ಕುಳಿತದ್ದಿರಬಹುದು.

ಅಡ್ವೋಕೇಟ್ ಸುಧಾ ಭಾರದ್ವಾಜ್‌ 2019ರ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಗೌರವಾನ್ವಿತರಲ್ಲಿ ಒಬ್ಬರು. ಪುಣೆಯ ಜೈಲು ಕೋಣೆಯಲ್ಲಿ ಕುಳಿತಿರುವ ಅವರ ಚಿತ್ರ ಪ್ರದರ್ಶನಗೊಂಡಿತು. ಒಂದೇ ಸಮಯದಲ್ಲಿ ಈ ಎರಡು ಬಗೆಯ ವಿರೋಧಾಭಾಸಗಳು ಹೇಗೆ ಸಾಧ್ಯ?

ಇದನ್ನೂ ಓದಿ: ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಅತ್ಯಂತ ಪ್ರಸಿದ್ದ ತಂದೆತಾಯಿಯ ಮಗಳಾಗಿ ಅಮೆರಿಕದಲ್ಲಿ ಹುಟ್ಟಿದ ಸುಧಾ ತನ್ನ ವಿದ್ಯಾರ್ಥಿ ಜೀವನದ ಬಹುತೇಕ ಭಾಗವನ್ನು ಅಮೇರಿಕನ್ ಪ್ರಜೆಯಾಗಿ ಕಳೆದರು. ನಂತರ ಐಐಟಿ ಕಾನ್‌ಪುರದಲ್ಲಿ ಗಣಿತಶಾಸ್ತ್ರದಲ್ಲಿ ಪದವಿ ಗಳಿಸಿದರು. ಮುಂದಿನ 30 ವರ್ಷ ಛತ್ತಿಸಗಡ ಮುಕ್ತಿ ಮೋರ್ಚಾದ (CMM)ದಲ್ಲಿ ಟ್ರೇಡ್ ಯೂನಿಯನ್‌ನ ಭಾಗವಾಗಿ ನಿರಂತರ ಹೋರಾಟದಲ್ಲಿ ಕಳೆದರು. ಅದರ ನಂತರ ವಕೀಲಿ ವೃತ್ತಿ ಆರಂಭಿಸಿದರು. ಅದಕ್ಷ ವಕೀಲರುಗಳಿಂದ ಹಿನ್ನಡೆ ಅನುಭವಿಸುತ್ತಿದ್ದವರಿಗೆ ಸುಧಾ ಅವರ ದಕ್ಷತೆ, ಪ್ರಾಮಾಣಿಕತೆಯಲ್ಲಿ ಪ್ರಭಾವಶಾಲಿ ವಿರೋಧಿಗಳನ್ನು ಎದುರಿಸುವ ಹೊಸ ಭರವಸೆ ಕಂಡಿತು.

ಸುಧಾ ಅವರು ‘ಜನಹಿತ’ ಸ್ಥಾಪಿಸಿ ಅದರಿಂದ ಕಾರ್ಮಿಕರು, ಗಣಿ ಹಾಗೂ ಭೂಕಬಳಿಕೆಯ ವಿರುದ್ದ ಹೋರಾಡುತ್ತಿದ್ದ ಹಳ್ಳಿಗರು, ಅರಣ್ಯದಲ್ಲಿ ಹಕ್ಕುಗಳಿಗಾಗಿ ಹೋರಾಡುತ್ತಿರುವ ಆದಿವಾಸಿಗಳು ಪರವಾಗಿ ಮತ್ತು ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ಮುಂತಾದ ಕಡೆ ತೊಡಗಿಸಿಕೊಂಡರು. ಇಲ್ಲಿಯವರೆಗೆ ‘ಜನಹಿತ’ ಅನೇಕ ಪ್ರಭಾವಶಾಲಿ ಉದ್ಯಮಿಗಳ ವಿರುದ್ಧ ಕೇಸುಗಳನ್ನು ಹಾಕಿದೆ. ಅದರಲ್ಲಿ ಪ್ರಮುಖವಾಗಿ ಜಿಂದಾಲ್, ವೇದಾಂತ, ಬಾಲ್ಕೋ, ಲಫಾರ್ಚ್ ಹಾಲ್ಸಮ್, ಡಿ.ಬಿ ಪವರ್, ವಂದನಾ ವಿದ್ಯುತ್, SECL, , ಭಿಲಾಯ್ ಸ್ಟೀಲ್ ಪ್ಲಾಂಟ್, ಮಾನೆಟ್ ಸ್ಟೀಟ್, ಅದಾನಿ, ಹಿಂಡಾಲ್ಕೋ, ಗ್ರಾನೆಮ್, ಅಲ್ಟಾçಟೆಕ್ ಮತ್ತಿತರಿದ್ದಾರೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (PUCL)ನ ಅಂದಿನ ಅಧ್ಯಕ್ಷ ಬಿನಾಯಕ್ ಸೇನ್ ಅವರ ಬಂಧನದ ನಂತರ ಆ ಗುಂಪನ್ನು ಪುನರ್‌ರಚಿಸುವಲ್ಲಿ ಹಾಗೂ ಒಗ್ಗೂಡಿಸುವಲ್ಲಿ ಸುಧಾ ಅವರ ಕೊಡುಗೆ ಅಪಾರ. ನಂತರ ಸುಧಾ ಭಾರದ್ವಾಜ್ ಆ ಸಂಘಟನೆಗೆ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಆದರು. ಹಾಗೂ ಅಲ್ಪಸಂಖ್ಯಾತರು ಮತ್ತು ಮಾನವ ಕಳ್ಳ ಸಾಗಾಣಿಕೆಯಂತಹ ವಿಷಯಗಳಲ್ಲಿ ಕೆಲಸ ಮಾಡಿದರು. ಬಸ್ತರ್ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಬಲಿಪಶುಗಳಾದವರಿಗೆ ಸಹಾಯಹಸ್ತ ಚಾಚಿದರು. ಜೊತೆಗೆ ಆಡಳಿತದ ದೌರ್ಜನ್ಯ ಹಾಗೂ ದರ್ಪದ ವಿರುದ್ಧ ಧೈರ್ಯದಿಂದ ಎದುರುನಿಂತ ಕಾರ್ಯಕರ್ತರು ಹಾಗೂ ಪತ್ರಕರ್ತರಿಗೆ ಆಸರೆ ಒದಗಿಸಿದರು. ಇತ್ತೀಚೆಗೆ ‘ಇಂಡಿಯನ್ ಅಸೋಸಿಯೇಷನ್ ಆಫ್ ಪೀಪಲ್ಸ್ ಲಾರ‍್ಸ್ (IAPL)ಗೆ ಉಪಾಧ್ಯಕ್ಷೆಯಾಗಿ ಆಯ್ಕೆ ಆದರು.

ಸುಧಾ ದಲಿತರು ಹಾಗೂ ಮಾನವಹಕ್ಕು ವಕೀಲರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ಚಳವಳಿ ಪ್ರಾರಂಭಿಸಿದ್ದರು ಹಾಗೂ ಆ ವಿಷಯಗಳಲ್ಲಿ ಸತ್ಯಶೋಧಕ ಸಮಿತಿಯನ್ನು ರಚಿಸಿದ್ದರು.

ಸುಧಾ ಅವರನ್ನು ಅವರ ಫರೀದಾಬಾದ್‌ನ ಮನೆಯಿಂದ ಬಂಧಿಸಲಾಯಿತು. ಅಲ್ಲಿ ಅವರು ತಮ್ಮ ಮಗಳು ‘ಮಾಯ್‌ಶಾ’ ಜೊತೆ ಇರುತ್ತಿದ್ದರು. ಈ ಸಮಯದಲ್ಲಿ ಅವರು ದೆಹಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯಲ್ಲಿ ಅತಿಥಿ ಪ್ರಾಧ್ಯಾಪಕಿಯಾಗಿ, ಬುಡಕಟ್ಟು ಜನರ ಹಕ್ಕುಗಳು, ಭೂಕಬಳಿಕೆ, 5 ಮತ್ತು 6ನೇ ಶೆಡ್ಯೂಲುಗಳ ಮೇಲೆ ಸೆಮಿನಾರ್ ನೀಡುತ್ತಿದ್ದರು. ಈ ವರ್ಷ ಅವರು ‘ಪ್ರಪಂಚದ ಜಾಗತೀಕರಣದಲ್ಲಿ ಕಾನೂನು ಹಾಗೂ ನ್ಯಾಯ’ ಎಂಬ ವಿಷಯದ ಮೇಲೆ ಪಾಠ ಮಾಡಬೇಕಿತ್ತು. ದುರದೃಷ್ಟವಶಾತ್ ಅವರು ಜೈಲಿಗೆ ಹೋಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಅಲ್ಲಿಯ ವಿದ್ಯಾರ್ಥಿಗಳು ವಿಷಾದ ವ್ಯಕ್ತಪಡಿಸುತ್ತಾರೆ.

ಸುಧಾ ಅವರ ಮಗಳು ಮಾಯ್‌ಶಾ ತಮ್ಮ ತಾಯಿಯ ದಣಿವರಿಯದ ಚೈತನ್ಯ ಹಾಗೂ ಅವರ ಕೆಲಸದ ಬಗೆಗಿನ ನಿಷ್ಠೆ ಬಗ್ಗೆ ‘ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವುದು, ಕಾರ್ಮಿಕರ ಮತ್ತು ರೈತರ ಮೇಲಾಗುವ ದಬ್ಬಾಳಿಕೆ ಹಾಗೂ ದೌರ್ಜನ್ಯಗಳ ವಿರುದ್ಧ ಹೋರಾಡುವುದು, ತಮ್ಮ ಇಡೀ ಜೀವನವನ್ನು ಇದಕ್ಕಾಗಿ ಮುಡಿಪಾಗಿಡುವುದನ್ನು ನಕ್ಸಲಿಸಂ ಎನ್ನುವುದಾದರೆ ನನಗನ್ನಿಸುವ ಮಟ್ಟಿಗೆ ನಕ್ಸಲರು ಒಳ್ಳೆಯವರು ಎಂದಾಯಿತು’ ಎಂದು ಹೇಳುತ್ತಾರೆ.

ಗುನೀತ್ ಅಹುಜಾ ಎಂಬ ದೆಹಲಿಯ ವಕೀಲರು ಸುಧಾ ಅವರ ಬಗ್ಗೆ ಬಹಿರಂಗ ಪತ್ರ ಬರೆಯುತ್ತಾ ‘ನಾನು ಮೊದಲ ಬಾರಿ ಸುಧಾ ಅವರನ್ನು ಭೆಟ್ಟಿ ಮಾಡಿದಾಗ 47ರ ಸ್ವಾತಂತ್ಯ್ರದ ಅನ್ವೇಷಣೆ ಹಾಗೂ 48ರ ಬಸ್ತರ್‌ದಲ್ಲಿನ ಸ್ವಾತಂತ್ರ‍್ಯದ ಅನ್ವೇಷಣೆ ಮತ್ತು ಅದರ ಸ್ಫರ್ಧಾತ್ಮಕ ನಿರೂಪಣೆಗಳ ಬಗ್ಗೆ ಮಾತಾಡಿದ್ದೆ. ಅವರು ನೀಡಿದ ಉತ್ತರ ನನ್ನ ಮೇಲೆ ಬಹಳ ದೊಡ್ಡ ಪ್ರಭಾವವನ್ನು ಬೀರಿದೆ’ ಎಂದು ಹೇಳುತ್ತಾರೆ.

ಸುಧಾ ಅವರು ತಾವು ಹೋರಾಡುವ ಪ್ರತಿಯೊಬ್ಬರಿಗೂ ಜೊತೆ ಸಾಗುವ ದಾರಿಹೋಕರಂತೆ. ಅವರು ಆ ದಾರಿ ನಮಗೆಲ್ಲರಿಗೂ ಸೇರಿದ್ದು ಎಂದು ನಂಬುತ್ತಾರೆ. ರಾಜ್ಯ ಆಡಳಿತ ಎಂಬುದು ಒಂದು ಕಾರಿದ್ದಂತೆ, ಅದಕ್ಕೆ ದಾರಿಯಲ್ಲಿ ಹೋಗುವ ಜನರನ್ನು ಕಂಡರೆ ಅಸಡ್ಡೆ ಹಾಗೂ ಅದು ರಸ್ತೆ ತನಗೆ ಸೇರಿದ್ದು ಎಂದುಕೊಳ್ಳುತ್ತದೆ. ಅದು ತನ್ನ ಆಪ್ತರ ಕೆಲಸಗಳಲ್ಲಿ ತನ್ನನ್ನು ಗುರುತಿಸಿಕೊಳ್ಳಬಯಸುತ್ತದೆ. ಆಡಳಿತಕ್ಕೆ ಸುಧಾ ಅವರ ಜಾಗ ಜೈಲು ಆದರೆ ನಮಗೆಲ್ಲ ಅವರೊಬ್ಬ ಮಾನವ ಹಕ್ಕುಗಳ ಪ್ರತಿಪಾದಕಿ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ
ಅನುವಾದ: ರಾಜಲಕ್ಷ್ಮಿಅಂಕಲಗಿ


ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುದಾ ಭಾರದ್ವಾಜ್ ಮತ್ತು ಸಹವರ್ತಿ ಹೋರಾಟಗಾರರನ್ನು ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...