Homeಮುಖಪುಟಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಸುಧಾ ಭಾರದ್ವಾಜ್‌ರವರಿಗೆ ಬಾಂಬೆ ಹೈಕೋರ್ಟ್ ಡೀಫಾಲ್ಟ್ ಜಾಮೀನು ನೀಡಿದೆ. ಸುಪ್ರೀಂ ಅದನ್ನು ಎತ್ತಿ ಹಿಡಿದಿದೆ. ಇಂದು ಅವರು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

- Advertisement -
- Advertisement -

6ನೇ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಭಾವಚಿತ್ರ ಪ್ರದರ್ಶನದಲ್ಲಿ ಜಗತ್ತಿನಾದ್ಯಂತ ಕಾನೂನು ಹಾಗೂ ನೀತಿ ನಿರೂಪಣೆಯ ಕ್ಷೇತ್ರದಲ್ಲಿ ತಮ್ಮ ಅಮೂಲ್ಯ ಕೊಡುಗೆಗಳನ್ನು ನೀಡಿದ ಮಹಿಳೆಯರಿಗೆ ಗೌರವವನ್ನು ಸಲ್ಲಿಸಲಾಯಿತು. ಆ ಎಲ್ಲ ಮಹಿಳಾ ಪ್ರತಿನಿಧಿಗಳನ್ನು ಆಯ್ಕೆ ಮಾಡಿದವರು ಹಾರ್ವರ್ಡ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ. ಈ ಎಲ್ಲಾ ಮಹಿಳಾ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಗಟ್ಟಿಯಾದ ಧ್ವನಿಯನ್ನು ಮೊಳಗಿಸಿದವರು. ಅದು ಹೈಕೋರ್ಟಿನ ಬೆಂಚಿನಲ್ಲಿ ಕುಳಿತಾಗಿರಬಹುದು, ಕ್ಲಾಕ್‌ರೂಮಿನಲ್ಲಿ ವಿದ್ಯಾರ್ಥಿಗಳ ಎದುರು ನಿಂತಾಗಿರಬಹುದು ಅಥವಾ ರಸ್ತೆಗಳಲ್ಲಿ ಪ್ರತಿಭಟಿಸುವುದಾಗಿರಬಹುದು ಅಥವಾ ಜೈಲಿನಲ್ಲಿ ಕುಳಿತದ್ದಿರಬಹುದು.

ಅಡ್ವೋಕೇಟ್ ಸುಧಾ ಭಾರದ್ವಾಜ್‌ 2019ರ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಗೌರವಾನ್ವಿತರಲ್ಲಿ ಒಬ್ಬರು. ಪುಣೆಯ ಜೈಲು ಕೋಣೆಯಲ್ಲಿ ಕುಳಿತಿರುವ ಅವರ ಚಿತ್ರ ಪ್ರದರ್ಶನಗೊಂಡಿತು. ಒಂದೇ ಸಮಯದಲ್ಲಿ ಈ ಎರಡು ಬಗೆಯ ವಿರೋಧಾಭಾಸಗಳು ಹೇಗೆ ಸಾಧ್ಯ?

ಇದನ್ನೂ ಓದಿ: ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಅತ್ಯಂತ ಪ್ರಸಿದ್ದ ತಂದೆತಾಯಿಯ ಮಗಳಾಗಿ ಅಮೆರಿಕದಲ್ಲಿ ಹುಟ್ಟಿದ ಸುಧಾ ತನ್ನ ವಿದ್ಯಾರ್ಥಿ ಜೀವನದ ಬಹುತೇಕ ಭಾಗವನ್ನು ಅಮೇರಿಕನ್ ಪ್ರಜೆಯಾಗಿ ಕಳೆದರು. ನಂತರ ಐಐಟಿ ಕಾನ್‌ಪುರದಲ್ಲಿ ಗಣಿತಶಾಸ್ತ್ರದಲ್ಲಿ ಪದವಿ ಗಳಿಸಿದರು. ಮುಂದಿನ 30 ವರ್ಷ ಛತ್ತಿಸಗಡ ಮುಕ್ತಿ ಮೋರ್ಚಾದ (CMM)ದಲ್ಲಿ ಟ್ರೇಡ್ ಯೂನಿಯನ್‌ನ ಭಾಗವಾಗಿ ನಿರಂತರ ಹೋರಾಟದಲ್ಲಿ ಕಳೆದರು. ಅದರ ನಂತರ ವಕೀಲಿ ವೃತ್ತಿ ಆರಂಭಿಸಿದರು. ಅದಕ್ಷ ವಕೀಲರುಗಳಿಂದ ಹಿನ್ನಡೆ ಅನುಭವಿಸುತ್ತಿದ್ದವರಿಗೆ ಸುಧಾ ಅವರ ದಕ್ಷತೆ, ಪ್ರಾಮಾಣಿಕತೆಯಲ್ಲಿ ಪ್ರಭಾವಶಾಲಿ ವಿರೋಧಿಗಳನ್ನು ಎದುರಿಸುವ ಹೊಸ ಭರವಸೆ ಕಂಡಿತು.

ಸುಧಾ ಅವರು ‘ಜನಹಿತ’ ಸ್ಥಾಪಿಸಿ ಅದರಿಂದ ಕಾರ್ಮಿಕರು, ಗಣಿ ಹಾಗೂ ಭೂಕಬಳಿಕೆಯ ವಿರುದ್ದ ಹೋರಾಡುತ್ತಿದ್ದ ಹಳ್ಳಿಗರು, ಅರಣ್ಯದಲ್ಲಿ ಹಕ್ಕುಗಳಿಗಾಗಿ ಹೋರಾಡುತ್ತಿರುವ ಆದಿವಾಸಿಗಳು ಪರವಾಗಿ ಮತ್ತು ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ಮುಂತಾದ ಕಡೆ ತೊಡಗಿಸಿಕೊಂಡರು. ಇಲ್ಲಿಯವರೆಗೆ ‘ಜನಹಿತ’ ಅನೇಕ ಪ್ರಭಾವಶಾಲಿ ಉದ್ಯಮಿಗಳ ವಿರುದ್ಧ ಕೇಸುಗಳನ್ನು ಹಾಕಿದೆ. ಅದರಲ್ಲಿ ಪ್ರಮುಖವಾಗಿ ಜಿಂದಾಲ್, ವೇದಾಂತ, ಬಾಲ್ಕೋ, ಲಫಾರ್ಚ್ ಹಾಲ್ಸಮ್, ಡಿ.ಬಿ ಪವರ್, ವಂದನಾ ವಿದ್ಯುತ್, SECL, , ಭಿಲಾಯ್ ಸ್ಟೀಲ್ ಪ್ಲಾಂಟ್, ಮಾನೆಟ್ ಸ್ಟೀಟ್, ಅದಾನಿ, ಹಿಂಡಾಲ್ಕೋ, ಗ್ರಾನೆಮ್, ಅಲ್ಟಾçಟೆಕ್ ಮತ್ತಿತರಿದ್ದಾರೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (PUCL)ನ ಅಂದಿನ ಅಧ್ಯಕ್ಷ ಬಿನಾಯಕ್ ಸೇನ್ ಅವರ ಬಂಧನದ ನಂತರ ಆ ಗುಂಪನ್ನು ಪುನರ್‌ರಚಿಸುವಲ್ಲಿ ಹಾಗೂ ಒಗ್ಗೂಡಿಸುವಲ್ಲಿ ಸುಧಾ ಅವರ ಕೊಡುಗೆ ಅಪಾರ. ನಂತರ ಸುಧಾ ಭಾರದ್ವಾಜ್ ಆ ಸಂಘಟನೆಗೆ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಆದರು. ಹಾಗೂ ಅಲ್ಪಸಂಖ್ಯಾತರು ಮತ್ತು ಮಾನವ ಕಳ್ಳ ಸಾಗಾಣಿಕೆಯಂತಹ ವಿಷಯಗಳಲ್ಲಿ ಕೆಲಸ ಮಾಡಿದರು. ಬಸ್ತರ್ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಬಲಿಪಶುಗಳಾದವರಿಗೆ ಸಹಾಯಹಸ್ತ ಚಾಚಿದರು. ಜೊತೆಗೆ ಆಡಳಿತದ ದೌರ್ಜನ್ಯ ಹಾಗೂ ದರ್ಪದ ವಿರುದ್ಧ ಧೈರ್ಯದಿಂದ ಎದುರುನಿಂತ ಕಾರ್ಯಕರ್ತರು ಹಾಗೂ ಪತ್ರಕರ್ತರಿಗೆ ಆಸರೆ ಒದಗಿಸಿದರು. ಇತ್ತೀಚೆಗೆ ‘ಇಂಡಿಯನ್ ಅಸೋಸಿಯೇಷನ್ ಆಫ್ ಪೀಪಲ್ಸ್ ಲಾರ‍್ಸ್ (IAPL)ಗೆ ಉಪಾಧ್ಯಕ್ಷೆಯಾಗಿ ಆಯ್ಕೆ ಆದರು.

ಸುಧಾ ದಲಿತರು ಹಾಗೂ ಮಾನವಹಕ್ಕು ವಕೀಲರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ಚಳವಳಿ ಪ್ರಾರಂಭಿಸಿದ್ದರು ಹಾಗೂ ಆ ವಿಷಯಗಳಲ್ಲಿ ಸತ್ಯಶೋಧಕ ಸಮಿತಿಯನ್ನು ರಚಿಸಿದ್ದರು.

ಸುಧಾ ಅವರನ್ನು ಅವರ ಫರೀದಾಬಾದ್‌ನ ಮನೆಯಿಂದ ಬಂಧಿಸಲಾಯಿತು. ಅಲ್ಲಿ ಅವರು ತಮ್ಮ ಮಗಳು ‘ಮಾಯ್‌ಶಾ’ ಜೊತೆ ಇರುತ್ತಿದ್ದರು. ಈ ಸಮಯದಲ್ಲಿ ಅವರು ದೆಹಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯಲ್ಲಿ ಅತಿಥಿ ಪ್ರಾಧ್ಯಾಪಕಿಯಾಗಿ, ಬುಡಕಟ್ಟು ಜನರ ಹಕ್ಕುಗಳು, ಭೂಕಬಳಿಕೆ, 5 ಮತ್ತು 6ನೇ ಶೆಡ್ಯೂಲುಗಳ ಮೇಲೆ ಸೆಮಿನಾರ್ ನೀಡುತ್ತಿದ್ದರು. ಈ ವರ್ಷ ಅವರು ‘ಪ್ರಪಂಚದ ಜಾಗತೀಕರಣದಲ್ಲಿ ಕಾನೂನು ಹಾಗೂ ನ್ಯಾಯ’ ಎಂಬ ವಿಷಯದ ಮೇಲೆ ಪಾಠ ಮಾಡಬೇಕಿತ್ತು. ದುರದೃಷ್ಟವಶಾತ್ ಅವರು ಜೈಲಿಗೆ ಹೋಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಅಲ್ಲಿಯ ವಿದ್ಯಾರ್ಥಿಗಳು ವಿಷಾದ ವ್ಯಕ್ತಪಡಿಸುತ್ತಾರೆ.

ಸುಧಾ ಅವರ ಮಗಳು ಮಾಯ್‌ಶಾ ತಮ್ಮ ತಾಯಿಯ ದಣಿವರಿಯದ ಚೈತನ್ಯ ಹಾಗೂ ಅವರ ಕೆಲಸದ ಬಗೆಗಿನ ನಿಷ್ಠೆ ಬಗ್ಗೆ ‘ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವುದು, ಕಾರ್ಮಿಕರ ಮತ್ತು ರೈತರ ಮೇಲಾಗುವ ದಬ್ಬಾಳಿಕೆ ಹಾಗೂ ದೌರ್ಜನ್ಯಗಳ ವಿರುದ್ಧ ಹೋರಾಡುವುದು, ತಮ್ಮ ಇಡೀ ಜೀವನವನ್ನು ಇದಕ್ಕಾಗಿ ಮುಡಿಪಾಗಿಡುವುದನ್ನು ನಕ್ಸಲಿಸಂ ಎನ್ನುವುದಾದರೆ ನನಗನ್ನಿಸುವ ಮಟ್ಟಿಗೆ ನಕ್ಸಲರು ಒಳ್ಳೆಯವರು ಎಂದಾಯಿತು’ ಎಂದು ಹೇಳುತ್ತಾರೆ.

ಗುನೀತ್ ಅಹುಜಾ ಎಂಬ ದೆಹಲಿಯ ವಕೀಲರು ಸುಧಾ ಅವರ ಬಗ್ಗೆ ಬಹಿರಂಗ ಪತ್ರ ಬರೆಯುತ್ತಾ ‘ನಾನು ಮೊದಲ ಬಾರಿ ಸುಧಾ ಅವರನ್ನು ಭೆಟ್ಟಿ ಮಾಡಿದಾಗ 47ರ ಸ್ವಾತಂತ್ಯ್ರದ ಅನ್ವೇಷಣೆ ಹಾಗೂ 48ರ ಬಸ್ತರ್‌ದಲ್ಲಿನ ಸ್ವಾತಂತ್ರ‍್ಯದ ಅನ್ವೇಷಣೆ ಮತ್ತು ಅದರ ಸ್ಫರ್ಧಾತ್ಮಕ ನಿರೂಪಣೆಗಳ ಬಗ್ಗೆ ಮಾತಾಡಿದ್ದೆ. ಅವರು ನೀಡಿದ ಉತ್ತರ ನನ್ನ ಮೇಲೆ ಬಹಳ ದೊಡ್ಡ ಪ್ರಭಾವವನ್ನು ಬೀರಿದೆ’ ಎಂದು ಹೇಳುತ್ತಾರೆ.

ಸುಧಾ ಅವರು ತಾವು ಹೋರಾಡುವ ಪ್ರತಿಯೊಬ್ಬರಿಗೂ ಜೊತೆ ಸಾಗುವ ದಾರಿಹೋಕರಂತೆ. ಅವರು ಆ ದಾರಿ ನಮಗೆಲ್ಲರಿಗೂ ಸೇರಿದ್ದು ಎಂದು ನಂಬುತ್ತಾರೆ. ರಾಜ್ಯ ಆಡಳಿತ ಎಂಬುದು ಒಂದು ಕಾರಿದ್ದಂತೆ, ಅದಕ್ಕೆ ದಾರಿಯಲ್ಲಿ ಹೋಗುವ ಜನರನ್ನು ಕಂಡರೆ ಅಸಡ್ಡೆ ಹಾಗೂ ಅದು ರಸ್ತೆ ತನಗೆ ಸೇರಿದ್ದು ಎಂದುಕೊಳ್ಳುತ್ತದೆ. ಅದು ತನ್ನ ಆಪ್ತರ ಕೆಲಸಗಳಲ್ಲಿ ತನ್ನನ್ನು ಗುರುತಿಸಿಕೊಳ್ಳಬಯಸುತ್ತದೆ. ಆಡಳಿತಕ್ಕೆ ಸುಧಾ ಅವರ ಜಾಗ ಜೈಲು ಆದರೆ ನಮಗೆಲ್ಲ ಅವರೊಬ್ಬ ಮಾನವ ಹಕ್ಕುಗಳ ಪ್ರತಿಪಾದಕಿ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ
ಅನುವಾದ: ರಾಜಲಕ್ಷ್ಮಿಅಂಕಲಗಿ


ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುದಾ ಭಾರದ್ವಾಜ್ ಮತ್ತು ಸಹವರ್ತಿ ಹೋರಾಟಗಾರರನ್ನು ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...