Homeಮುಖಪುಟಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಸುಧಾ ಭಾರದ್ವಾಜ್‌ರವರಿಗೆ ಬಾಂಬೆ ಹೈಕೋರ್ಟ್ ಡೀಫಾಲ್ಟ್ ಜಾಮೀನು ನೀಡಿದೆ. ಸುಪ್ರೀಂ ಅದನ್ನು ಎತ್ತಿ ಹಿಡಿದಿದೆ. ಇಂದು ಅವರು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

- Advertisement -
- Advertisement -

6ನೇ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಭಾವಚಿತ್ರ ಪ್ರದರ್ಶನದಲ್ಲಿ ಜಗತ್ತಿನಾದ್ಯಂತ ಕಾನೂನು ಹಾಗೂ ನೀತಿ ನಿರೂಪಣೆಯ ಕ್ಷೇತ್ರದಲ್ಲಿ ತಮ್ಮ ಅಮೂಲ್ಯ ಕೊಡುಗೆಗಳನ್ನು ನೀಡಿದ ಮಹಿಳೆಯರಿಗೆ ಗೌರವವನ್ನು ಸಲ್ಲಿಸಲಾಯಿತು. ಆ ಎಲ್ಲ ಮಹಿಳಾ ಪ್ರತಿನಿಧಿಗಳನ್ನು ಆಯ್ಕೆ ಮಾಡಿದವರು ಹಾರ್ವರ್ಡ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ. ಈ ಎಲ್ಲಾ ಮಹಿಳಾ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಗಟ್ಟಿಯಾದ ಧ್ವನಿಯನ್ನು ಮೊಳಗಿಸಿದವರು. ಅದು ಹೈಕೋರ್ಟಿನ ಬೆಂಚಿನಲ್ಲಿ ಕುಳಿತಾಗಿರಬಹುದು, ಕ್ಲಾಕ್‌ರೂಮಿನಲ್ಲಿ ವಿದ್ಯಾರ್ಥಿಗಳ ಎದುರು ನಿಂತಾಗಿರಬಹುದು ಅಥವಾ ರಸ್ತೆಗಳಲ್ಲಿ ಪ್ರತಿಭಟಿಸುವುದಾಗಿರಬಹುದು ಅಥವಾ ಜೈಲಿನಲ್ಲಿ ಕುಳಿತದ್ದಿರಬಹುದು.

ಅಡ್ವೋಕೇಟ್ ಸುಧಾ ಭಾರದ್ವಾಜ್‌ 2019ರ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಗೌರವಾನ್ವಿತರಲ್ಲಿ ಒಬ್ಬರು. ಪುಣೆಯ ಜೈಲು ಕೋಣೆಯಲ್ಲಿ ಕುಳಿತಿರುವ ಅವರ ಚಿತ್ರ ಪ್ರದರ್ಶನಗೊಂಡಿತು. ಒಂದೇ ಸಮಯದಲ್ಲಿ ಈ ಎರಡು ಬಗೆಯ ವಿರೋಧಾಭಾಸಗಳು ಹೇಗೆ ಸಾಧ್ಯ?

ಇದನ್ನೂ ಓದಿ: ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಅತ್ಯಂತ ಪ್ರಸಿದ್ದ ತಂದೆತಾಯಿಯ ಮಗಳಾಗಿ ಅಮೆರಿಕದಲ್ಲಿ ಹುಟ್ಟಿದ ಸುಧಾ ತನ್ನ ವಿದ್ಯಾರ್ಥಿ ಜೀವನದ ಬಹುತೇಕ ಭಾಗವನ್ನು ಅಮೇರಿಕನ್ ಪ್ರಜೆಯಾಗಿ ಕಳೆದರು. ನಂತರ ಐಐಟಿ ಕಾನ್‌ಪುರದಲ್ಲಿ ಗಣಿತಶಾಸ್ತ್ರದಲ್ಲಿ ಪದವಿ ಗಳಿಸಿದರು. ಮುಂದಿನ 30 ವರ್ಷ ಛತ್ತಿಸಗಡ ಮುಕ್ತಿ ಮೋರ್ಚಾದ (CMM)ದಲ್ಲಿ ಟ್ರೇಡ್ ಯೂನಿಯನ್‌ನ ಭಾಗವಾಗಿ ನಿರಂತರ ಹೋರಾಟದಲ್ಲಿ ಕಳೆದರು. ಅದರ ನಂತರ ವಕೀಲಿ ವೃತ್ತಿ ಆರಂಭಿಸಿದರು. ಅದಕ್ಷ ವಕೀಲರುಗಳಿಂದ ಹಿನ್ನಡೆ ಅನುಭವಿಸುತ್ತಿದ್ದವರಿಗೆ ಸುಧಾ ಅವರ ದಕ್ಷತೆ, ಪ್ರಾಮಾಣಿಕತೆಯಲ್ಲಿ ಪ್ರಭಾವಶಾಲಿ ವಿರೋಧಿಗಳನ್ನು ಎದುರಿಸುವ ಹೊಸ ಭರವಸೆ ಕಂಡಿತು.

ಸುಧಾ ಅವರು ‘ಜನಹಿತ’ ಸ್ಥಾಪಿಸಿ ಅದರಿಂದ ಕಾರ್ಮಿಕರು, ಗಣಿ ಹಾಗೂ ಭೂಕಬಳಿಕೆಯ ವಿರುದ್ದ ಹೋರಾಡುತ್ತಿದ್ದ ಹಳ್ಳಿಗರು, ಅರಣ್ಯದಲ್ಲಿ ಹಕ್ಕುಗಳಿಗಾಗಿ ಹೋರಾಡುತ್ತಿರುವ ಆದಿವಾಸಿಗಳು ಪರವಾಗಿ ಮತ್ತು ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ಮುಂತಾದ ಕಡೆ ತೊಡಗಿಸಿಕೊಂಡರು. ಇಲ್ಲಿಯವರೆಗೆ ‘ಜನಹಿತ’ ಅನೇಕ ಪ್ರಭಾವಶಾಲಿ ಉದ್ಯಮಿಗಳ ವಿರುದ್ಧ ಕೇಸುಗಳನ್ನು ಹಾಕಿದೆ. ಅದರಲ್ಲಿ ಪ್ರಮುಖವಾಗಿ ಜಿಂದಾಲ್, ವೇದಾಂತ, ಬಾಲ್ಕೋ, ಲಫಾರ್ಚ್ ಹಾಲ್ಸಮ್, ಡಿ.ಬಿ ಪವರ್, ವಂದನಾ ವಿದ್ಯುತ್, SECL, , ಭಿಲಾಯ್ ಸ್ಟೀಲ್ ಪ್ಲಾಂಟ್, ಮಾನೆಟ್ ಸ್ಟೀಟ್, ಅದಾನಿ, ಹಿಂಡಾಲ್ಕೋ, ಗ್ರಾನೆಮ್, ಅಲ್ಟಾçಟೆಕ್ ಮತ್ತಿತರಿದ್ದಾರೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (PUCL)ನ ಅಂದಿನ ಅಧ್ಯಕ್ಷ ಬಿನಾಯಕ್ ಸೇನ್ ಅವರ ಬಂಧನದ ನಂತರ ಆ ಗುಂಪನ್ನು ಪುನರ್‌ರಚಿಸುವಲ್ಲಿ ಹಾಗೂ ಒಗ್ಗೂಡಿಸುವಲ್ಲಿ ಸುಧಾ ಅವರ ಕೊಡುಗೆ ಅಪಾರ. ನಂತರ ಸುಧಾ ಭಾರದ್ವಾಜ್ ಆ ಸಂಘಟನೆಗೆ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಆದರು. ಹಾಗೂ ಅಲ್ಪಸಂಖ್ಯಾತರು ಮತ್ತು ಮಾನವ ಕಳ್ಳ ಸಾಗಾಣಿಕೆಯಂತಹ ವಿಷಯಗಳಲ್ಲಿ ಕೆಲಸ ಮಾಡಿದರು. ಬಸ್ತರ್ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಬಲಿಪಶುಗಳಾದವರಿಗೆ ಸಹಾಯಹಸ್ತ ಚಾಚಿದರು. ಜೊತೆಗೆ ಆಡಳಿತದ ದೌರ್ಜನ್ಯ ಹಾಗೂ ದರ್ಪದ ವಿರುದ್ಧ ಧೈರ್ಯದಿಂದ ಎದುರುನಿಂತ ಕಾರ್ಯಕರ್ತರು ಹಾಗೂ ಪತ್ರಕರ್ತರಿಗೆ ಆಸರೆ ಒದಗಿಸಿದರು. ಇತ್ತೀಚೆಗೆ ‘ಇಂಡಿಯನ್ ಅಸೋಸಿಯೇಷನ್ ಆಫ್ ಪೀಪಲ್ಸ್ ಲಾರ‍್ಸ್ (IAPL)ಗೆ ಉಪಾಧ್ಯಕ್ಷೆಯಾಗಿ ಆಯ್ಕೆ ಆದರು.

ಸುಧಾ ದಲಿತರು ಹಾಗೂ ಮಾನವಹಕ್ಕು ವಕೀಲರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ಚಳವಳಿ ಪ್ರಾರಂಭಿಸಿದ್ದರು ಹಾಗೂ ಆ ವಿಷಯಗಳಲ್ಲಿ ಸತ್ಯಶೋಧಕ ಸಮಿತಿಯನ್ನು ರಚಿಸಿದ್ದರು.

ಸುಧಾ ಅವರನ್ನು ಅವರ ಫರೀದಾಬಾದ್‌ನ ಮನೆಯಿಂದ ಬಂಧಿಸಲಾಯಿತು. ಅಲ್ಲಿ ಅವರು ತಮ್ಮ ಮಗಳು ‘ಮಾಯ್‌ಶಾ’ ಜೊತೆ ಇರುತ್ತಿದ್ದರು. ಈ ಸಮಯದಲ್ಲಿ ಅವರು ದೆಹಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯಲ್ಲಿ ಅತಿಥಿ ಪ್ರಾಧ್ಯಾಪಕಿಯಾಗಿ, ಬುಡಕಟ್ಟು ಜನರ ಹಕ್ಕುಗಳು, ಭೂಕಬಳಿಕೆ, 5 ಮತ್ತು 6ನೇ ಶೆಡ್ಯೂಲುಗಳ ಮೇಲೆ ಸೆಮಿನಾರ್ ನೀಡುತ್ತಿದ್ದರು. ಈ ವರ್ಷ ಅವರು ‘ಪ್ರಪಂಚದ ಜಾಗತೀಕರಣದಲ್ಲಿ ಕಾನೂನು ಹಾಗೂ ನ್ಯಾಯ’ ಎಂಬ ವಿಷಯದ ಮೇಲೆ ಪಾಠ ಮಾಡಬೇಕಿತ್ತು. ದುರದೃಷ್ಟವಶಾತ್ ಅವರು ಜೈಲಿಗೆ ಹೋಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಅಲ್ಲಿಯ ವಿದ್ಯಾರ್ಥಿಗಳು ವಿಷಾದ ವ್ಯಕ್ತಪಡಿಸುತ್ತಾರೆ.

ಸುಧಾ ಅವರ ಮಗಳು ಮಾಯ್‌ಶಾ ತಮ್ಮ ತಾಯಿಯ ದಣಿವರಿಯದ ಚೈತನ್ಯ ಹಾಗೂ ಅವರ ಕೆಲಸದ ಬಗೆಗಿನ ನಿಷ್ಠೆ ಬಗ್ಗೆ ‘ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವುದು, ಕಾರ್ಮಿಕರ ಮತ್ತು ರೈತರ ಮೇಲಾಗುವ ದಬ್ಬಾಳಿಕೆ ಹಾಗೂ ದೌರ್ಜನ್ಯಗಳ ವಿರುದ್ಧ ಹೋರಾಡುವುದು, ತಮ್ಮ ಇಡೀ ಜೀವನವನ್ನು ಇದಕ್ಕಾಗಿ ಮುಡಿಪಾಗಿಡುವುದನ್ನು ನಕ್ಸಲಿಸಂ ಎನ್ನುವುದಾದರೆ ನನಗನ್ನಿಸುವ ಮಟ್ಟಿಗೆ ನಕ್ಸಲರು ಒಳ್ಳೆಯವರು ಎಂದಾಯಿತು’ ಎಂದು ಹೇಳುತ್ತಾರೆ.

ಗುನೀತ್ ಅಹುಜಾ ಎಂಬ ದೆಹಲಿಯ ವಕೀಲರು ಸುಧಾ ಅವರ ಬಗ್ಗೆ ಬಹಿರಂಗ ಪತ್ರ ಬರೆಯುತ್ತಾ ‘ನಾನು ಮೊದಲ ಬಾರಿ ಸುಧಾ ಅವರನ್ನು ಭೆಟ್ಟಿ ಮಾಡಿದಾಗ 47ರ ಸ್ವಾತಂತ್ಯ್ರದ ಅನ್ವೇಷಣೆ ಹಾಗೂ 48ರ ಬಸ್ತರ್‌ದಲ್ಲಿನ ಸ್ವಾತಂತ್ರ‍್ಯದ ಅನ್ವೇಷಣೆ ಮತ್ತು ಅದರ ಸ್ಫರ್ಧಾತ್ಮಕ ನಿರೂಪಣೆಗಳ ಬಗ್ಗೆ ಮಾತಾಡಿದ್ದೆ. ಅವರು ನೀಡಿದ ಉತ್ತರ ನನ್ನ ಮೇಲೆ ಬಹಳ ದೊಡ್ಡ ಪ್ರಭಾವವನ್ನು ಬೀರಿದೆ’ ಎಂದು ಹೇಳುತ್ತಾರೆ.

ಸುಧಾ ಅವರು ತಾವು ಹೋರಾಡುವ ಪ್ರತಿಯೊಬ್ಬರಿಗೂ ಜೊತೆ ಸಾಗುವ ದಾರಿಹೋಕರಂತೆ. ಅವರು ಆ ದಾರಿ ನಮಗೆಲ್ಲರಿಗೂ ಸೇರಿದ್ದು ಎಂದು ನಂಬುತ್ತಾರೆ. ರಾಜ್ಯ ಆಡಳಿತ ಎಂಬುದು ಒಂದು ಕಾರಿದ್ದಂತೆ, ಅದಕ್ಕೆ ದಾರಿಯಲ್ಲಿ ಹೋಗುವ ಜನರನ್ನು ಕಂಡರೆ ಅಸಡ್ಡೆ ಹಾಗೂ ಅದು ರಸ್ತೆ ತನಗೆ ಸೇರಿದ್ದು ಎಂದುಕೊಳ್ಳುತ್ತದೆ. ಅದು ತನ್ನ ಆಪ್ತರ ಕೆಲಸಗಳಲ್ಲಿ ತನ್ನನ್ನು ಗುರುತಿಸಿಕೊಳ್ಳಬಯಸುತ್ತದೆ. ಆಡಳಿತಕ್ಕೆ ಸುಧಾ ಅವರ ಜಾಗ ಜೈಲು ಆದರೆ ನಮಗೆಲ್ಲ ಅವರೊಬ್ಬ ಮಾನವ ಹಕ್ಕುಗಳ ಪ್ರತಿಪಾದಕಿ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ
ಅನುವಾದ: ರಾಜಲಕ್ಷ್ಮಿಅಂಕಲಗಿ


ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುದಾ ಭಾರದ್ವಾಜ್ ಮತ್ತು ಸಹವರ್ತಿ ಹೋರಾಟಗಾರರನ್ನು ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....