Homeಕರ್ನಾಟಕಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು'!

ಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು’!

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟಿದೆ. ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರು 34 ಸಾವಿರ ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ತಳಮಟ್ಟದ ಕಾರ್ಯಕರ್ತರೇ ಇಲ್ಲದ ಕಡೆ ಹೆಚ್ಚು ಮತಗಳಿಂದ ಗೆದ್ದು ಬಂದಿರುವುದು ಜನರು ಹುಬ್ಬೇರಿಸುವಂತೆ ಮಾಡಿದೆ. ಈ ಚುನಾವಣೆಯ ಮತ ಎಣಿಕೆಯಲ್ಲಿ ಅಂಚೆಮತಗಳಿಂದ ಹಿಡಿದು ಕೊನೆಯ ಸುತ್ತಿನ ಮತ ಎಣಿಕೆಯವರೆಗೂ ಸುಧಾಕರ್ ಮೊದಲ ಸ್ಥಾನದಿಂದ ಹಿಂದೆ ಸರಿಯಲೇ ಇಲ್ಲ. ಸುಧಾಕರ್ ನಾಗಾಲೋಟಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಂದ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ಕಡಿಮೆ ಅಂತರದಲ್ಲಿ ಸುಧಾಕರ್ ಗೆಲ್ಲಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಸಭಾಧ್ಯಕ್ಷರು ಮತ್ತು ಸುಪ್ರೀಂಕೋರ್ಟ್‍ನಿಂದ ಅನರ್ಹರಾಗಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಮತದಾರ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಮಹಾರಾಷ್ಟ್ರ, ಹರ್ಯಾಣದಲ್ಲಿ ಪಕ್ಷಾಂತರಿಗಳನ್ನು ಸೋಲಿಸಿದ್ದಾರೆ. ಅದೇರೀತಿ ಕರ್ನಾಟಕದಲ್ಲಿ ಆಗಲಿದೆ ಎಂಬ ಲೆಕ್ಕಾಚಾರಗಳನ್ನು ಮತದಾರ ತಲೆಕೆಳಗು ಮಾಡಿದ್ದಾರೆ. ಹಾಗಾದರೆ ಸುಧಾಕರ್ ಗೆಲುವಿಗೆ ಕಾರಣವಾದ ಅಂಶಗಳು ಯಾವುವು ಎಂಬುದನ್ನು ನೋಡೋಣ.

ಉಪಚುನಾವಣೆಯಲ್ಲಿ ಬಿಜೆಪಿಯ ಡಾ.ಸುಧಾಕರ್-84381 ಅಂದರೆ ಶೇಕಡ 48.53ರಷ್ಟ ಮತ ಪಡೆದು ಕಳೆದ ಬಾರಿಗಿಂತ 4 ಸಾವಿರ ಮತಗಳಿಂದ ಆರಿಸಿ ಬಂದಿದ್ದಾರೆ.. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ, 49,588 ಅಂದರೆ ಶೇಕಡ 28.52ರಷ್ಟು ಮತ ಗಳಿಸಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ರಾಧಾಕೃಷ್ಣ 35,869 ಅಂದರೆ ಶೇಕಡ 20.65ರಷ್ಟು ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿ 50 ಸಾವಿರ ಮತ ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಈ ಬಾರಿ ಜೆಡಿಎಸ್ ಮತ ಗಳಿಕೆಯ ಪ್ರಮಾಣವೂ ಕಡಿಮೆಯಾಗಿದೆ. ಆದರೆ ಡಾ. ಸುಧಾಕರ್ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ಮತಗಳನ್ನು ಪಡೆದಿದ್ದರೋ ಅದಕ್ಕಿಂತ ಈ ಬಾರಿ ನಾಲ್ಕು ಸಾವಿರ ಹೆಚ್ಚು ಮತಗಳು ಬಿದ್ದಿವೆ. ಇದು ಹೇಗೆ ಸಾಧ್ಯವಾಯಿತು. ವಾಸ್ತವಾಂಶಗಳೇನು? ಮತದಾರರ ನಾಡಿಮಿಡಿತಗಳು ತಿಳಿಯಬೇಕಾಗಿದೆ..

ಡಾ.ಸುಧಾಕರ್ ಕ್ಷೇತ್ರದಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಹಣ ತಂದು ಜನರಿಗೆ ಕಾಣುವಂತಹ ರಸ್ತೆ ಮೊದಲಾದ ಕೆಲಸಗಳನ್ನು ಮಾಡಿರುವುದು ಜನ ಅವರಿಗೆ ಮತ ಹಾಕಲು ಕಾರಣವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ದೌರ್ಬಲ್ಯಗಳು ಕೂಡ ಸುಧಾಕರ್ ಗೆಲುವಿಗೆ ಪ್ಲೆಸ್ ಪಾಯಿಂಟ್ ಆಗಿದೆ. ಅಂದರೆ ಸುಧಾಕರ್ ಸಾಕಷ್ಟು ‘ಗಟ್ಟಿಕುಳ’ ಎಂಬ ನಂಬಿಕೆ ಜನರಲ್ಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಕ್ಷೇತ್ರದ ಸುತ್ತಾಟ ನಡೆಸಲಿಲ್ಲ. ಜನರನ್ನು ಸಂಪರ್ಕಿಸುವಲ್ಲಿ ಹಿಂದೆ ಬಿದ್ದರು. ಮತದಾರರಿಗೂ ‘ಒಂದಷ್ಟು’ ನೋಡಿಕೊಂಡಿದ್ದರೆ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು. ಇಲ್ಲವೇ ಮೈತ್ರಿ ಸರ್ಕಾರದಲ್ಲಿ ಒಂದಾಗಿದ್ದಂತೆ ಈ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದರೆ ಅನಾಯಾಸವಾಗಿ ಗೆಲ್ಲಬಹುದಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದ ಮತಗಳ ಉಭಯ ಪಕ್ಷಗಳ ನಡುವೆ ಹಂಚಿಕೆಯಾಗಿವೆ. ಇವು ಹರಿದು ಹಂಚಿಹೋಗದಂತೆ ನೋಡಿಕೊಂಡಿದ್ದರೆ ಗೆಲುವಿಗೆ ಗೇಣು ದೂರವಿತ್ತು. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಬಗ್ಗೆ ಇದ್ದ ‘ಮುನಿಸು’ ಮತಗಳು ಸುಧಾಕರ್‍ಗೆ ಬಿದ್ದಿವೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿ ಪರ ಮತ ಹಾಕುವಂತೆ ಮಾಡಿದ ಮನವಿಗೆ ಮತದಾರ ಕಿವಿಗೊಟ್ಟಿಲ್ಲ. ಅಂತೆಯೇ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ ಅವರಿಗೆ ವಹಿಸಲಾಗಿತ್ತು. ಕಾಂಗ್ರೆಸ್ ತಂತ್ರಗಳು ಕೂಡ ಇಲ್ಲಿ ವರ್ಕೌಟ್ ಆಗಿಲ್ಲ. ಆದರೆ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪಡೆದಷ್ಟು ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದೆ. ಆದರೆ ‘ಬಾಯಿ ಮಾತಿಗೆ’ ಯಾರು ಕರಗುತ್ತಾರೆ. ನೋಡ್ಕೋಬೇಕು ಇಲ್ಲದಿದ್ದರೆ ಏನೂ ಗಿಟ್ಟಲ್ಲ. ಅದೇ ಈ ಚುನಾವಣೆಯಲ್ಲಿ ಆಗಿದೆ. ಅಂದಹಾಗೆ ಜೆಡಿಎಸ್-ಕಾಂಗ್ರೆಸ್ ಜನರ ಮನಸ್ಸು ಮುಟ್ಟುವಲ್ಲಿ ವಿಫಲವಾಗಿದೆ ಎಂಬುದು ಸೋತವರ ಕಡೆಯ ಕಾರ್ಯಕರ್ತರ ಮಾತುಗಳು.

ಡಾ.ಸುಧಾಕರ್ ಅವರು ಮತದಾರರನ್ನು ತಲುಪಲು ಟೀಮ್ ಮಾಡಿದ್ದರು. ಆ ಗುಂಪುಗಳಿಗೆ ವಹಿಸಿದ್ದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಪ್ರತಿಯೊಂದು ಮನೆಗೂ ಹೋಗಿ ಆ ‘ಗುಂಪು’ ಮತದಾರರನ್ನು ಸಂಪರ್ಕಿಸಿ ಆ ‘ಮೂರು’ ಮಾತು ಹೇಳಿ ಮನವಿ ಮಾಡಿಕೊಂಡಿದೆ. ಹೋಬಳಿವಾರು ಕೆಲಸ ಹಂಚಿಕೆ ಮಾಡಿಕೊಂಡು ದುಡಿದಿರುವುದು ಕೂಡ ಗೆಲುವಿಗೆ ಪೂರಕವಾಗಿದೆ. ಫಲತಾಂಬೂಲವೂ ಕೈಹಿಡಿದಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಜಿಗಿದ ಮೇಲೆ ಸುಧಾಕರ್ ಮಂಚೇನಹಳ್ಳಿ ಕೇಂದ್ರವನ್ನು ತಾಲೂಕು ಮಾಡುವ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕ್ಷೇತ್ರಕ್ಕೆ ಕರೆಸಿ ವೆರೆಸಂದ್ರದಲ್ಲಿ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ನೆರವೇರಿಸಲಾಯಿತು. ಅದೇ ಕಾರ್ಯಕ್ರಮದಲ್ಲಿ ಮಂಚೇನಹಳ್ಳಿ ತಾಲೂಕು ಕೇಂದ್ರವನ್ನಾಗಿ ಮಾಡುವ ಘೋಷಣೆಯನ್ನೂ ಮುಖ್ಯಮಂತ್ರಿಯ ಕಡೆಯಿಂದ ಮಾಡಿಸಿದರು. ಪ್ರಮುಖವಾಗಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಕೊಡಿಸಿದ್ದು ಕೆಲಸ ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು ಎರಡು ಸಾವಿರ ಸ್ತ್ರೀಶಕ್ತಿ ಸಂಘಗಳಿದ್ದು, ಸ್ತ್ರೀಶಕ್ತಿ ಸಂಘವೊಂದಕ್ಕೆ ತಲಾ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದಾರೆ. ಹೀಗಾಗಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಕನಿಷ್ಠ 50 ಸಾವಿರ ರೂಪಾಯಿ ಸಾಲ ದೊರೆತಂತಾಗಿದೆ. ಹೀಗಾಗಿ ಬಹುತೇಕ ಮಹಿಳಾ ಮತದಾರರು ಸುಧಾಕರ್ ಅವರಿಗೆ ಮತ ಚಲಾಯಿಸಿದ್ದು ಗೆಲುವು ನಿರಾಯಾಸವಾಗಿದೆ ಎಂದು ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕಬಳ್ಳಾಪುರ, ಮಂಚೇನಹಳ್ಳಿ, ವೆರೆಸಂದ್ರ ಹೀಗೆ ಕ್ಷೇತ್ರದ ಹಲವು ಭಾಗದಲ್ಲಿ ಡಾ.ಸುಧಾಕರ್ ಅವರಿಗೆ ಮತಗಳು ಬಿದ್ದಿವೆ. ಮತ್ತೊಂದು ಸಂಗತಿಯೆಂದರೆ ಕಾಂಗ್ರೆಸ್ ಬೆಂಬಲಿತ ಯುವ ಮತದಾರರೂ ಕೂಡ ಸುಧಾಕರ್‍ಗೆ ಜೈ ಅಂದಿರುವುದು ಗೆಲುವಿನ ಓಟಕ್ಕೆ ಕಾರಣವಾಗಿದೆ. ಯುವಕರನ್ನು ಸೆಳೆದಿರುವ ಸುಧಾಕರ್ ಅವರನ್ನು ಚನ್ನಾಗಿಯೇ ನೋಡಿಕೊಂಡಿದ್ದಾರೆ ಎಂಬ ಮಾತುಗಳು ಕ್ಷೇತ್ರವ್ಯಾಪಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...