Homeಕರ್ನಾಟಕಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು'!

ಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು’!

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟಿದೆ. ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರು 34 ಸಾವಿರ ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ತಳಮಟ್ಟದ ಕಾರ್ಯಕರ್ತರೇ ಇಲ್ಲದ ಕಡೆ ಹೆಚ್ಚು ಮತಗಳಿಂದ ಗೆದ್ದು ಬಂದಿರುವುದು ಜನರು ಹುಬ್ಬೇರಿಸುವಂತೆ ಮಾಡಿದೆ. ಈ ಚುನಾವಣೆಯ ಮತ ಎಣಿಕೆಯಲ್ಲಿ ಅಂಚೆಮತಗಳಿಂದ ಹಿಡಿದು ಕೊನೆಯ ಸುತ್ತಿನ ಮತ ಎಣಿಕೆಯವರೆಗೂ ಸುಧಾಕರ್ ಮೊದಲ ಸ್ಥಾನದಿಂದ ಹಿಂದೆ ಸರಿಯಲೇ ಇಲ್ಲ. ಸುಧಾಕರ್ ನಾಗಾಲೋಟಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಂದ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ಕಡಿಮೆ ಅಂತರದಲ್ಲಿ ಸುಧಾಕರ್ ಗೆಲ್ಲಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಸಭಾಧ್ಯಕ್ಷರು ಮತ್ತು ಸುಪ್ರೀಂಕೋರ್ಟ್‍ನಿಂದ ಅನರ್ಹರಾಗಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಮತದಾರ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಮಹಾರಾಷ್ಟ್ರ, ಹರ್ಯಾಣದಲ್ಲಿ ಪಕ್ಷಾಂತರಿಗಳನ್ನು ಸೋಲಿಸಿದ್ದಾರೆ. ಅದೇರೀತಿ ಕರ್ನಾಟಕದಲ್ಲಿ ಆಗಲಿದೆ ಎಂಬ ಲೆಕ್ಕಾಚಾರಗಳನ್ನು ಮತದಾರ ತಲೆಕೆಳಗು ಮಾಡಿದ್ದಾರೆ. ಹಾಗಾದರೆ ಸುಧಾಕರ್ ಗೆಲುವಿಗೆ ಕಾರಣವಾದ ಅಂಶಗಳು ಯಾವುವು ಎಂಬುದನ್ನು ನೋಡೋಣ.

ಉಪಚುನಾವಣೆಯಲ್ಲಿ ಬಿಜೆಪಿಯ ಡಾ.ಸುಧಾಕರ್-84381 ಅಂದರೆ ಶೇಕಡ 48.53ರಷ್ಟ ಮತ ಪಡೆದು ಕಳೆದ ಬಾರಿಗಿಂತ 4 ಸಾವಿರ ಮತಗಳಿಂದ ಆರಿಸಿ ಬಂದಿದ್ದಾರೆ.. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ, 49,588 ಅಂದರೆ ಶೇಕಡ 28.52ರಷ್ಟು ಮತ ಗಳಿಸಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ರಾಧಾಕೃಷ್ಣ 35,869 ಅಂದರೆ ಶೇಕಡ 20.65ರಷ್ಟು ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿ 50 ಸಾವಿರ ಮತ ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಈ ಬಾರಿ ಜೆಡಿಎಸ್ ಮತ ಗಳಿಕೆಯ ಪ್ರಮಾಣವೂ ಕಡಿಮೆಯಾಗಿದೆ. ಆದರೆ ಡಾ. ಸುಧಾಕರ್ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ಮತಗಳನ್ನು ಪಡೆದಿದ್ದರೋ ಅದಕ್ಕಿಂತ ಈ ಬಾರಿ ನಾಲ್ಕು ಸಾವಿರ ಹೆಚ್ಚು ಮತಗಳು ಬಿದ್ದಿವೆ. ಇದು ಹೇಗೆ ಸಾಧ್ಯವಾಯಿತು. ವಾಸ್ತವಾಂಶಗಳೇನು? ಮತದಾರರ ನಾಡಿಮಿಡಿತಗಳು ತಿಳಿಯಬೇಕಾಗಿದೆ..

ಡಾ.ಸುಧಾಕರ್ ಕ್ಷೇತ್ರದಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಹಣ ತಂದು ಜನರಿಗೆ ಕಾಣುವಂತಹ ರಸ್ತೆ ಮೊದಲಾದ ಕೆಲಸಗಳನ್ನು ಮಾಡಿರುವುದು ಜನ ಅವರಿಗೆ ಮತ ಹಾಕಲು ಕಾರಣವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ದೌರ್ಬಲ್ಯಗಳು ಕೂಡ ಸುಧಾಕರ್ ಗೆಲುವಿಗೆ ಪ್ಲೆಸ್ ಪಾಯಿಂಟ್ ಆಗಿದೆ. ಅಂದರೆ ಸುಧಾಕರ್ ಸಾಕಷ್ಟು ‘ಗಟ್ಟಿಕುಳ’ ಎಂಬ ನಂಬಿಕೆ ಜನರಲ್ಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಕ್ಷೇತ್ರದ ಸುತ್ತಾಟ ನಡೆಸಲಿಲ್ಲ. ಜನರನ್ನು ಸಂಪರ್ಕಿಸುವಲ್ಲಿ ಹಿಂದೆ ಬಿದ್ದರು. ಮತದಾರರಿಗೂ ‘ಒಂದಷ್ಟು’ ನೋಡಿಕೊಂಡಿದ್ದರೆ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು. ಇಲ್ಲವೇ ಮೈತ್ರಿ ಸರ್ಕಾರದಲ್ಲಿ ಒಂದಾಗಿದ್ದಂತೆ ಈ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದರೆ ಅನಾಯಾಸವಾಗಿ ಗೆಲ್ಲಬಹುದಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದ ಮತಗಳ ಉಭಯ ಪಕ್ಷಗಳ ನಡುವೆ ಹಂಚಿಕೆಯಾಗಿವೆ. ಇವು ಹರಿದು ಹಂಚಿಹೋಗದಂತೆ ನೋಡಿಕೊಂಡಿದ್ದರೆ ಗೆಲುವಿಗೆ ಗೇಣು ದೂರವಿತ್ತು. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಬಗ್ಗೆ ಇದ್ದ ‘ಮುನಿಸು’ ಮತಗಳು ಸುಧಾಕರ್‍ಗೆ ಬಿದ್ದಿವೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿ ಪರ ಮತ ಹಾಕುವಂತೆ ಮಾಡಿದ ಮನವಿಗೆ ಮತದಾರ ಕಿವಿಗೊಟ್ಟಿಲ್ಲ. ಅಂತೆಯೇ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ ಅವರಿಗೆ ವಹಿಸಲಾಗಿತ್ತು. ಕಾಂಗ್ರೆಸ್ ತಂತ್ರಗಳು ಕೂಡ ಇಲ್ಲಿ ವರ್ಕೌಟ್ ಆಗಿಲ್ಲ. ಆದರೆ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪಡೆದಷ್ಟು ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದೆ. ಆದರೆ ‘ಬಾಯಿ ಮಾತಿಗೆ’ ಯಾರು ಕರಗುತ್ತಾರೆ. ನೋಡ್ಕೋಬೇಕು ಇಲ್ಲದಿದ್ದರೆ ಏನೂ ಗಿಟ್ಟಲ್ಲ. ಅದೇ ಈ ಚುನಾವಣೆಯಲ್ಲಿ ಆಗಿದೆ. ಅಂದಹಾಗೆ ಜೆಡಿಎಸ್-ಕಾಂಗ್ರೆಸ್ ಜನರ ಮನಸ್ಸು ಮುಟ್ಟುವಲ್ಲಿ ವಿಫಲವಾಗಿದೆ ಎಂಬುದು ಸೋತವರ ಕಡೆಯ ಕಾರ್ಯಕರ್ತರ ಮಾತುಗಳು.

ಡಾ.ಸುಧಾಕರ್ ಅವರು ಮತದಾರರನ್ನು ತಲುಪಲು ಟೀಮ್ ಮಾಡಿದ್ದರು. ಆ ಗುಂಪುಗಳಿಗೆ ವಹಿಸಿದ್ದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಪ್ರತಿಯೊಂದು ಮನೆಗೂ ಹೋಗಿ ಆ ‘ಗುಂಪು’ ಮತದಾರರನ್ನು ಸಂಪರ್ಕಿಸಿ ಆ ‘ಮೂರು’ ಮಾತು ಹೇಳಿ ಮನವಿ ಮಾಡಿಕೊಂಡಿದೆ. ಹೋಬಳಿವಾರು ಕೆಲಸ ಹಂಚಿಕೆ ಮಾಡಿಕೊಂಡು ದುಡಿದಿರುವುದು ಕೂಡ ಗೆಲುವಿಗೆ ಪೂರಕವಾಗಿದೆ. ಫಲತಾಂಬೂಲವೂ ಕೈಹಿಡಿದಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಜಿಗಿದ ಮೇಲೆ ಸುಧಾಕರ್ ಮಂಚೇನಹಳ್ಳಿ ಕೇಂದ್ರವನ್ನು ತಾಲೂಕು ಮಾಡುವ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕ್ಷೇತ್ರಕ್ಕೆ ಕರೆಸಿ ವೆರೆಸಂದ್ರದಲ್ಲಿ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ನೆರವೇರಿಸಲಾಯಿತು. ಅದೇ ಕಾರ್ಯಕ್ರಮದಲ್ಲಿ ಮಂಚೇನಹಳ್ಳಿ ತಾಲೂಕು ಕೇಂದ್ರವನ್ನಾಗಿ ಮಾಡುವ ಘೋಷಣೆಯನ್ನೂ ಮುಖ್ಯಮಂತ್ರಿಯ ಕಡೆಯಿಂದ ಮಾಡಿಸಿದರು. ಪ್ರಮುಖವಾಗಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಕೊಡಿಸಿದ್ದು ಕೆಲಸ ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು ಎರಡು ಸಾವಿರ ಸ್ತ್ರೀಶಕ್ತಿ ಸಂಘಗಳಿದ್ದು, ಸ್ತ್ರೀಶಕ್ತಿ ಸಂಘವೊಂದಕ್ಕೆ ತಲಾ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದಾರೆ. ಹೀಗಾಗಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಕನಿಷ್ಠ 50 ಸಾವಿರ ರೂಪಾಯಿ ಸಾಲ ದೊರೆತಂತಾಗಿದೆ. ಹೀಗಾಗಿ ಬಹುತೇಕ ಮಹಿಳಾ ಮತದಾರರು ಸುಧಾಕರ್ ಅವರಿಗೆ ಮತ ಚಲಾಯಿಸಿದ್ದು ಗೆಲುವು ನಿರಾಯಾಸವಾಗಿದೆ ಎಂದು ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕಬಳ್ಳಾಪುರ, ಮಂಚೇನಹಳ್ಳಿ, ವೆರೆಸಂದ್ರ ಹೀಗೆ ಕ್ಷೇತ್ರದ ಹಲವು ಭಾಗದಲ್ಲಿ ಡಾ.ಸುಧಾಕರ್ ಅವರಿಗೆ ಮತಗಳು ಬಿದ್ದಿವೆ. ಮತ್ತೊಂದು ಸಂಗತಿಯೆಂದರೆ ಕಾಂಗ್ರೆಸ್ ಬೆಂಬಲಿತ ಯುವ ಮತದಾರರೂ ಕೂಡ ಸುಧಾಕರ್‍ಗೆ ಜೈ ಅಂದಿರುವುದು ಗೆಲುವಿನ ಓಟಕ್ಕೆ ಕಾರಣವಾಗಿದೆ. ಯುವಕರನ್ನು ಸೆಳೆದಿರುವ ಸುಧಾಕರ್ ಅವರನ್ನು ಚನ್ನಾಗಿಯೇ ನೋಡಿಕೊಂಡಿದ್ದಾರೆ ಎಂಬ ಮಾತುಗಳು ಕ್ಷೇತ್ರವ್ಯಾಪಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...