Homeಕರ್ನಾಟಕಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು'!

ಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು’!

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟಿದೆ. ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರು 34 ಸಾವಿರ ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ತಳಮಟ್ಟದ ಕಾರ್ಯಕರ್ತರೇ ಇಲ್ಲದ ಕಡೆ ಹೆಚ್ಚು ಮತಗಳಿಂದ ಗೆದ್ದು ಬಂದಿರುವುದು ಜನರು ಹುಬ್ಬೇರಿಸುವಂತೆ ಮಾಡಿದೆ. ಈ ಚುನಾವಣೆಯ ಮತ ಎಣಿಕೆಯಲ್ಲಿ ಅಂಚೆಮತಗಳಿಂದ ಹಿಡಿದು ಕೊನೆಯ ಸುತ್ತಿನ ಮತ ಎಣಿಕೆಯವರೆಗೂ ಸುಧಾಕರ್ ಮೊದಲ ಸ್ಥಾನದಿಂದ ಹಿಂದೆ ಸರಿಯಲೇ ಇಲ್ಲ. ಸುಧಾಕರ್ ನಾಗಾಲೋಟಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಂದ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ಕಡಿಮೆ ಅಂತರದಲ್ಲಿ ಸುಧಾಕರ್ ಗೆಲ್ಲಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಸಭಾಧ್ಯಕ್ಷರು ಮತ್ತು ಸುಪ್ರೀಂಕೋರ್ಟ್‍ನಿಂದ ಅನರ್ಹರಾಗಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಮತದಾರ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಮಹಾರಾಷ್ಟ್ರ, ಹರ್ಯಾಣದಲ್ಲಿ ಪಕ್ಷಾಂತರಿಗಳನ್ನು ಸೋಲಿಸಿದ್ದಾರೆ. ಅದೇರೀತಿ ಕರ್ನಾಟಕದಲ್ಲಿ ಆಗಲಿದೆ ಎಂಬ ಲೆಕ್ಕಾಚಾರಗಳನ್ನು ಮತದಾರ ತಲೆಕೆಳಗು ಮಾಡಿದ್ದಾರೆ. ಹಾಗಾದರೆ ಸುಧಾಕರ್ ಗೆಲುವಿಗೆ ಕಾರಣವಾದ ಅಂಶಗಳು ಯಾವುವು ಎಂಬುದನ್ನು ನೋಡೋಣ.

ಉಪಚುನಾವಣೆಯಲ್ಲಿ ಬಿಜೆಪಿಯ ಡಾ.ಸುಧಾಕರ್-84381 ಅಂದರೆ ಶೇಕಡ 48.53ರಷ್ಟ ಮತ ಪಡೆದು ಕಳೆದ ಬಾರಿಗಿಂತ 4 ಸಾವಿರ ಮತಗಳಿಂದ ಆರಿಸಿ ಬಂದಿದ್ದಾರೆ.. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ, 49,588 ಅಂದರೆ ಶೇಕಡ 28.52ರಷ್ಟು ಮತ ಗಳಿಸಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ರಾಧಾಕೃಷ್ಣ 35,869 ಅಂದರೆ ಶೇಕಡ 20.65ರಷ್ಟು ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿ 50 ಸಾವಿರ ಮತ ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಈ ಬಾರಿ ಜೆಡಿಎಸ್ ಮತ ಗಳಿಕೆಯ ಪ್ರಮಾಣವೂ ಕಡಿಮೆಯಾಗಿದೆ. ಆದರೆ ಡಾ. ಸುಧಾಕರ್ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ಮತಗಳನ್ನು ಪಡೆದಿದ್ದರೋ ಅದಕ್ಕಿಂತ ಈ ಬಾರಿ ನಾಲ್ಕು ಸಾವಿರ ಹೆಚ್ಚು ಮತಗಳು ಬಿದ್ದಿವೆ. ಇದು ಹೇಗೆ ಸಾಧ್ಯವಾಯಿತು. ವಾಸ್ತವಾಂಶಗಳೇನು? ಮತದಾರರ ನಾಡಿಮಿಡಿತಗಳು ತಿಳಿಯಬೇಕಾಗಿದೆ..

ಡಾ.ಸುಧಾಕರ್ ಕ್ಷೇತ್ರದಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಹಣ ತಂದು ಜನರಿಗೆ ಕಾಣುವಂತಹ ರಸ್ತೆ ಮೊದಲಾದ ಕೆಲಸಗಳನ್ನು ಮಾಡಿರುವುದು ಜನ ಅವರಿಗೆ ಮತ ಹಾಕಲು ಕಾರಣವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ದೌರ್ಬಲ್ಯಗಳು ಕೂಡ ಸುಧಾಕರ್ ಗೆಲುವಿಗೆ ಪ್ಲೆಸ್ ಪಾಯಿಂಟ್ ಆಗಿದೆ. ಅಂದರೆ ಸುಧಾಕರ್ ಸಾಕಷ್ಟು ‘ಗಟ್ಟಿಕುಳ’ ಎಂಬ ನಂಬಿಕೆ ಜನರಲ್ಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಕ್ಷೇತ್ರದ ಸುತ್ತಾಟ ನಡೆಸಲಿಲ್ಲ. ಜನರನ್ನು ಸಂಪರ್ಕಿಸುವಲ್ಲಿ ಹಿಂದೆ ಬಿದ್ದರು. ಮತದಾರರಿಗೂ ‘ಒಂದಷ್ಟು’ ನೋಡಿಕೊಂಡಿದ್ದರೆ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು. ಇಲ್ಲವೇ ಮೈತ್ರಿ ಸರ್ಕಾರದಲ್ಲಿ ಒಂದಾಗಿದ್ದಂತೆ ಈ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದರೆ ಅನಾಯಾಸವಾಗಿ ಗೆಲ್ಲಬಹುದಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದ ಮತಗಳ ಉಭಯ ಪಕ್ಷಗಳ ನಡುವೆ ಹಂಚಿಕೆಯಾಗಿವೆ. ಇವು ಹರಿದು ಹಂಚಿಹೋಗದಂತೆ ನೋಡಿಕೊಂಡಿದ್ದರೆ ಗೆಲುವಿಗೆ ಗೇಣು ದೂರವಿತ್ತು. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಬಗ್ಗೆ ಇದ್ದ ‘ಮುನಿಸು’ ಮತಗಳು ಸುಧಾಕರ್‍ಗೆ ಬಿದ್ದಿವೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿ ಪರ ಮತ ಹಾಕುವಂತೆ ಮಾಡಿದ ಮನವಿಗೆ ಮತದಾರ ಕಿವಿಗೊಟ್ಟಿಲ್ಲ. ಅಂತೆಯೇ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ ಅವರಿಗೆ ವಹಿಸಲಾಗಿತ್ತು. ಕಾಂಗ್ರೆಸ್ ತಂತ್ರಗಳು ಕೂಡ ಇಲ್ಲಿ ವರ್ಕೌಟ್ ಆಗಿಲ್ಲ. ಆದರೆ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪಡೆದಷ್ಟು ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದೆ. ಆದರೆ ‘ಬಾಯಿ ಮಾತಿಗೆ’ ಯಾರು ಕರಗುತ್ತಾರೆ. ನೋಡ್ಕೋಬೇಕು ಇಲ್ಲದಿದ್ದರೆ ಏನೂ ಗಿಟ್ಟಲ್ಲ. ಅದೇ ಈ ಚುನಾವಣೆಯಲ್ಲಿ ಆಗಿದೆ. ಅಂದಹಾಗೆ ಜೆಡಿಎಸ್-ಕಾಂಗ್ರೆಸ್ ಜನರ ಮನಸ್ಸು ಮುಟ್ಟುವಲ್ಲಿ ವಿಫಲವಾಗಿದೆ ಎಂಬುದು ಸೋತವರ ಕಡೆಯ ಕಾರ್ಯಕರ್ತರ ಮಾತುಗಳು.

ಡಾ.ಸುಧಾಕರ್ ಅವರು ಮತದಾರರನ್ನು ತಲುಪಲು ಟೀಮ್ ಮಾಡಿದ್ದರು. ಆ ಗುಂಪುಗಳಿಗೆ ವಹಿಸಿದ್ದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಪ್ರತಿಯೊಂದು ಮನೆಗೂ ಹೋಗಿ ಆ ‘ಗುಂಪು’ ಮತದಾರರನ್ನು ಸಂಪರ್ಕಿಸಿ ಆ ‘ಮೂರು’ ಮಾತು ಹೇಳಿ ಮನವಿ ಮಾಡಿಕೊಂಡಿದೆ. ಹೋಬಳಿವಾರು ಕೆಲಸ ಹಂಚಿಕೆ ಮಾಡಿಕೊಂಡು ದುಡಿದಿರುವುದು ಕೂಡ ಗೆಲುವಿಗೆ ಪೂರಕವಾಗಿದೆ. ಫಲತಾಂಬೂಲವೂ ಕೈಹಿಡಿದಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಜಿಗಿದ ಮೇಲೆ ಸುಧಾಕರ್ ಮಂಚೇನಹಳ್ಳಿ ಕೇಂದ್ರವನ್ನು ತಾಲೂಕು ಮಾಡುವ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕ್ಷೇತ್ರಕ್ಕೆ ಕರೆಸಿ ವೆರೆಸಂದ್ರದಲ್ಲಿ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ನೆರವೇರಿಸಲಾಯಿತು. ಅದೇ ಕಾರ್ಯಕ್ರಮದಲ್ಲಿ ಮಂಚೇನಹಳ್ಳಿ ತಾಲೂಕು ಕೇಂದ್ರವನ್ನಾಗಿ ಮಾಡುವ ಘೋಷಣೆಯನ್ನೂ ಮುಖ್ಯಮಂತ್ರಿಯ ಕಡೆಯಿಂದ ಮಾಡಿಸಿದರು. ಪ್ರಮುಖವಾಗಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಕೊಡಿಸಿದ್ದು ಕೆಲಸ ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು ಎರಡು ಸಾವಿರ ಸ್ತ್ರೀಶಕ್ತಿ ಸಂಘಗಳಿದ್ದು, ಸ್ತ್ರೀಶಕ್ತಿ ಸಂಘವೊಂದಕ್ಕೆ ತಲಾ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದಾರೆ. ಹೀಗಾಗಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಕನಿಷ್ಠ 50 ಸಾವಿರ ರೂಪಾಯಿ ಸಾಲ ದೊರೆತಂತಾಗಿದೆ. ಹೀಗಾಗಿ ಬಹುತೇಕ ಮಹಿಳಾ ಮತದಾರರು ಸುಧಾಕರ್ ಅವರಿಗೆ ಮತ ಚಲಾಯಿಸಿದ್ದು ಗೆಲುವು ನಿರಾಯಾಸವಾಗಿದೆ ಎಂದು ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕಬಳ್ಳಾಪುರ, ಮಂಚೇನಹಳ್ಳಿ, ವೆರೆಸಂದ್ರ ಹೀಗೆ ಕ್ಷೇತ್ರದ ಹಲವು ಭಾಗದಲ್ಲಿ ಡಾ.ಸುಧಾಕರ್ ಅವರಿಗೆ ಮತಗಳು ಬಿದ್ದಿವೆ. ಮತ್ತೊಂದು ಸಂಗತಿಯೆಂದರೆ ಕಾಂಗ್ರೆಸ್ ಬೆಂಬಲಿತ ಯುವ ಮತದಾರರೂ ಕೂಡ ಸುಧಾಕರ್‍ಗೆ ಜೈ ಅಂದಿರುವುದು ಗೆಲುವಿನ ಓಟಕ್ಕೆ ಕಾರಣವಾಗಿದೆ. ಯುವಕರನ್ನು ಸೆಳೆದಿರುವ ಸುಧಾಕರ್ ಅವರನ್ನು ಚನ್ನಾಗಿಯೇ ನೋಡಿಕೊಂಡಿದ್ದಾರೆ ಎಂಬ ಮಾತುಗಳು ಕ್ಷೇತ್ರವ್ಯಾಪಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...