Homeಕರ್ನಾಟಕಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು'!

ಚಿಕ್ಕಬಳ್ಳಾಪುರ ಡಾ.ಸುಧಾಕರ್ ಗೆಲುವಿಗೆ ಕಾರಣವಾದ ಆ `ಮೂರು’!

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟಿದೆ. ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರು 34 ಸಾವಿರ ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ತಳಮಟ್ಟದ ಕಾರ್ಯಕರ್ತರೇ ಇಲ್ಲದ ಕಡೆ ಹೆಚ್ಚು ಮತಗಳಿಂದ ಗೆದ್ದು ಬಂದಿರುವುದು ಜನರು ಹುಬ್ಬೇರಿಸುವಂತೆ ಮಾಡಿದೆ. ಈ ಚುನಾವಣೆಯ ಮತ ಎಣಿಕೆಯಲ್ಲಿ ಅಂಚೆಮತಗಳಿಂದ ಹಿಡಿದು ಕೊನೆಯ ಸುತ್ತಿನ ಮತ ಎಣಿಕೆಯವರೆಗೂ ಸುಧಾಕರ್ ಮೊದಲ ಸ್ಥಾನದಿಂದ ಹಿಂದೆ ಸರಿಯಲೇ ಇಲ್ಲ. ಸುಧಾಕರ್ ನಾಗಾಲೋಟಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಂದ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ಕಡಿಮೆ ಅಂತರದಲ್ಲಿ ಸುಧಾಕರ್ ಗೆಲ್ಲಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಸಭಾಧ್ಯಕ್ಷರು ಮತ್ತು ಸುಪ್ರೀಂಕೋರ್ಟ್‍ನಿಂದ ಅನರ್ಹರಾಗಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಮತದಾರ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಮಹಾರಾಷ್ಟ್ರ, ಹರ್ಯಾಣದಲ್ಲಿ ಪಕ್ಷಾಂತರಿಗಳನ್ನು ಸೋಲಿಸಿದ್ದಾರೆ. ಅದೇರೀತಿ ಕರ್ನಾಟಕದಲ್ಲಿ ಆಗಲಿದೆ ಎಂಬ ಲೆಕ್ಕಾಚಾರಗಳನ್ನು ಮತದಾರ ತಲೆಕೆಳಗು ಮಾಡಿದ್ದಾರೆ. ಹಾಗಾದರೆ ಸುಧಾಕರ್ ಗೆಲುವಿಗೆ ಕಾರಣವಾದ ಅಂಶಗಳು ಯಾವುವು ಎಂಬುದನ್ನು ನೋಡೋಣ.

ಉಪಚುನಾವಣೆಯಲ್ಲಿ ಬಿಜೆಪಿಯ ಡಾ.ಸುಧಾಕರ್-84381 ಅಂದರೆ ಶೇಕಡ 48.53ರಷ್ಟ ಮತ ಪಡೆದು ಕಳೆದ ಬಾರಿಗಿಂತ 4 ಸಾವಿರ ಮತಗಳಿಂದ ಆರಿಸಿ ಬಂದಿದ್ದಾರೆ.. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ, 49,588 ಅಂದರೆ ಶೇಕಡ 28.52ರಷ್ಟು ಮತ ಗಳಿಸಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ರಾಧಾಕೃಷ್ಣ 35,869 ಅಂದರೆ ಶೇಕಡ 20.65ರಷ್ಟು ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿ 50 ಸಾವಿರ ಮತ ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಈ ಬಾರಿ ಜೆಡಿಎಸ್ ಮತ ಗಳಿಕೆಯ ಪ್ರಮಾಣವೂ ಕಡಿಮೆಯಾಗಿದೆ. ಆದರೆ ಡಾ. ಸುಧಾಕರ್ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ಮತಗಳನ್ನು ಪಡೆದಿದ್ದರೋ ಅದಕ್ಕಿಂತ ಈ ಬಾರಿ ನಾಲ್ಕು ಸಾವಿರ ಹೆಚ್ಚು ಮತಗಳು ಬಿದ್ದಿವೆ. ಇದು ಹೇಗೆ ಸಾಧ್ಯವಾಯಿತು. ವಾಸ್ತವಾಂಶಗಳೇನು? ಮತದಾರರ ನಾಡಿಮಿಡಿತಗಳು ತಿಳಿಯಬೇಕಾಗಿದೆ..

ಡಾ.ಸುಧಾಕರ್ ಕ್ಷೇತ್ರದಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಹಣ ತಂದು ಜನರಿಗೆ ಕಾಣುವಂತಹ ರಸ್ತೆ ಮೊದಲಾದ ಕೆಲಸಗಳನ್ನು ಮಾಡಿರುವುದು ಜನ ಅವರಿಗೆ ಮತ ಹಾಕಲು ಕಾರಣವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ದೌರ್ಬಲ್ಯಗಳು ಕೂಡ ಸುಧಾಕರ್ ಗೆಲುವಿಗೆ ಪ್ಲೆಸ್ ಪಾಯಿಂಟ್ ಆಗಿದೆ. ಅಂದರೆ ಸುಧಾಕರ್ ಸಾಕಷ್ಟು ‘ಗಟ್ಟಿಕುಳ’ ಎಂಬ ನಂಬಿಕೆ ಜನರಲ್ಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಕ್ಷೇತ್ರದ ಸುತ್ತಾಟ ನಡೆಸಲಿಲ್ಲ. ಜನರನ್ನು ಸಂಪರ್ಕಿಸುವಲ್ಲಿ ಹಿಂದೆ ಬಿದ್ದರು. ಮತದಾರರಿಗೂ ‘ಒಂದಷ್ಟು’ ನೋಡಿಕೊಂಡಿದ್ದರೆ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು. ಇಲ್ಲವೇ ಮೈತ್ರಿ ಸರ್ಕಾರದಲ್ಲಿ ಒಂದಾಗಿದ್ದಂತೆ ಈ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದರೆ ಅನಾಯಾಸವಾಗಿ ಗೆಲ್ಲಬಹುದಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದ ಮತಗಳ ಉಭಯ ಪಕ್ಷಗಳ ನಡುವೆ ಹಂಚಿಕೆಯಾಗಿವೆ. ಇವು ಹರಿದು ಹಂಚಿಹೋಗದಂತೆ ನೋಡಿಕೊಂಡಿದ್ದರೆ ಗೆಲುವಿಗೆ ಗೇಣು ದೂರವಿತ್ತು. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಬಗ್ಗೆ ಇದ್ದ ‘ಮುನಿಸು’ ಮತಗಳು ಸುಧಾಕರ್‍ಗೆ ಬಿದ್ದಿವೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿ ಪರ ಮತ ಹಾಕುವಂತೆ ಮಾಡಿದ ಮನವಿಗೆ ಮತದಾರ ಕಿವಿಗೊಟ್ಟಿಲ್ಲ. ಅಂತೆಯೇ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಆಂಜನಪ್ಪ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ ಅವರಿಗೆ ವಹಿಸಲಾಗಿತ್ತು. ಕಾಂಗ್ರೆಸ್ ತಂತ್ರಗಳು ಕೂಡ ಇಲ್ಲಿ ವರ್ಕೌಟ್ ಆಗಿಲ್ಲ. ಆದರೆ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪಡೆದಷ್ಟು ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದೆ. ಆದರೆ ‘ಬಾಯಿ ಮಾತಿಗೆ’ ಯಾರು ಕರಗುತ್ತಾರೆ. ನೋಡ್ಕೋಬೇಕು ಇಲ್ಲದಿದ್ದರೆ ಏನೂ ಗಿಟ್ಟಲ್ಲ. ಅದೇ ಈ ಚುನಾವಣೆಯಲ್ಲಿ ಆಗಿದೆ. ಅಂದಹಾಗೆ ಜೆಡಿಎಸ್-ಕಾಂಗ್ರೆಸ್ ಜನರ ಮನಸ್ಸು ಮುಟ್ಟುವಲ್ಲಿ ವಿಫಲವಾಗಿದೆ ಎಂಬುದು ಸೋತವರ ಕಡೆಯ ಕಾರ್ಯಕರ್ತರ ಮಾತುಗಳು.

ಡಾ.ಸುಧಾಕರ್ ಅವರು ಮತದಾರರನ್ನು ತಲುಪಲು ಟೀಮ್ ಮಾಡಿದ್ದರು. ಆ ಗುಂಪುಗಳಿಗೆ ವಹಿಸಿದ್ದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಪ್ರತಿಯೊಂದು ಮನೆಗೂ ಹೋಗಿ ಆ ‘ಗುಂಪು’ ಮತದಾರರನ್ನು ಸಂಪರ್ಕಿಸಿ ಆ ‘ಮೂರು’ ಮಾತು ಹೇಳಿ ಮನವಿ ಮಾಡಿಕೊಂಡಿದೆ. ಹೋಬಳಿವಾರು ಕೆಲಸ ಹಂಚಿಕೆ ಮಾಡಿಕೊಂಡು ದುಡಿದಿರುವುದು ಕೂಡ ಗೆಲುವಿಗೆ ಪೂರಕವಾಗಿದೆ. ಫಲತಾಂಬೂಲವೂ ಕೈಹಿಡಿದಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಜಿಗಿದ ಮೇಲೆ ಸುಧಾಕರ್ ಮಂಚೇನಹಳ್ಳಿ ಕೇಂದ್ರವನ್ನು ತಾಲೂಕು ಮಾಡುವ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕ್ಷೇತ್ರಕ್ಕೆ ಕರೆಸಿ ವೆರೆಸಂದ್ರದಲ್ಲಿ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ನೆರವೇರಿಸಲಾಯಿತು. ಅದೇ ಕಾರ್ಯಕ್ರಮದಲ್ಲಿ ಮಂಚೇನಹಳ್ಳಿ ತಾಲೂಕು ಕೇಂದ್ರವನ್ನಾಗಿ ಮಾಡುವ ಘೋಷಣೆಯನ್ನೂ ಮುಖ್ಯಮಂತ್ರಿಯ ಕಡೆಯಿಂದ ಮಾಡಿಸಿದರು. ಪ್ರಮುಖವಾಗಿ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಕೊಡಿಸಿದ್ದು ಕೆಲಸ ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು ಎರಡು ಸಾವಿರ ಸ್ತ್ರೀಶಕ್ತಿ ಸಂಘಗಳಿದ್ದು, ಸ್ತ್ರೀಶಕ್ತಿ ಸಂಘವೊಂದಕ್ಕೆ ತಲಾ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದಾರೆ. ಹೀಗಾಗಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಕನಿಷ್ಠ 50 ಸಾವಿರ ರೂಪಾಯಿ ಸಾಲ ದೊರೆತಂತಾಗಿದೆ. ಹೀಗಾಗಿ ಬಹುತೇಕ ಮಹಿಳಾ ಮತದಾರರು ಸುಧಾಕರ್ ಅವರಿಗೆ ಮತ ಚಲಾಯಿಸಿದ್ದು ಗೆಲುವು ನಿರಾಯಾಸವಾಗಿದೆ ಎಂದು ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕಬಳ್ಳಾಪುರ, ಮಂಚೇನಹಳ್ಳಿ, ವೆರೆಸಂದ್ರ ಹೀಗೆ ಕ್ಷೇತ್ರದ ಹಲವು ಭಾಗದಲ್ಲಿ ಡಾ.ಸುಧಾಕರ್ ಅವರಿಗೆ ಮತಗಳು ಬಿದ್ದಿವೆ. ಮತ್ತೊಂದು ಸಂಗತಿಯೆಂದರೆ ಕಾಂಗ್ರೆಸ್ ಬೆಂಬಲಿತ ಯುವ ಮತದಾರರೂ ಕೂಡ ಸುಧಾಕರ್‍ಗೆ ಜೈ ಅಂದಿರುವುದು ಗೆಲುವಿನ ಓಟಕ್ಕೆ ಕಾರಣವಾಗಿದೆ. ಯುವಕರನ್ನು ಸೆಳೆದಿರುವ ಸುಧಾಕರ್ ಅವರನ್ನು ಚನ್ನಾಗಿಯೇ ನೋಡಿಕೊಂಡಿದ್ದಾರೆ ಎಂಬ ಮಾತುಗಳು ಕ್ಷೇತ್ರವ್ಯಾಪಿ ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...