Homeಮುಖಪುಟಸುಧಾಕರ್‌ v/s ಶ್ರೀರಾಮುಲು : ಕೊರೋನಾ ಎಮರ್ಜೆನ್ಸಿ ನಡುವೆ ಸ್ವಪ್ರತಿಷ್ಠೆಯೇ ಹೆಚ್ಚಾಯ್ತಾ ಸಚಿವರಿಗೆ?

ಸುಧಾಕರ್‌ v/s ಶ್ರೀರಾಮುಲು : ಕೊರೋನಾ ಎಮರ್ಜೆನ್ಸಿ ನಡುವೆ ಸ್ವಪ್ರತಿಷ್ಠೆಯೇ ಹೆಚ್ಚಾಯ್ತಾ ಸಚಿವರಿಗೆ?

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಸಾವಿರಾರು ಕೋಟಿ ರೂ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಳ್ಳುವ ಜವಾಬ್ದಾರಿಯನ್ನೂ ರಾಜ್ಯ ಸರ್ಕಾರ ಡಾ|ಕೆ. ಸುಧಾಕರ್ ಅವರಿಗೆ ನೀಡಿದೆ ಎನ್ನಲಾಗುತ್ತಿದೆ.

- Advertisement -
- Advertisement -

ಇಡೀ ವಿಶ್ವದ ಎದುರು ಕೊರೋನಾ ಎಂಬ ಮಾರಣಾಂತಿಕ ವೈರಸ್ ಸೃಷ್ಟಿಸಿರುವ ಮೃತ್ಯಕೂಪ ಊಹೆಗೂ ನಿಲುಕದಷ್ಟು ದೊಡ್ಡದಾಗಿ ಬೆಳೆದಿದೆ. ಚೀನಾ ದೇಶದ ವುಹಾನ್ ಎಂಬ ಪಟ್ಟಣದ ಮಾಂಸದ ಅಂಗಡಿಯೊಂದರ ಬಳಿ ಸೃಷ್ಟಿಯಾದ ಈ ವೈರಸ್ ಜಗತ್ತಿನಾದ್ಯಂತ ಸುಮಾರು 35,000 ಸಾವಿರ ಜೀವಗಳನ್ನು ಆಹುತಿ ತೆಗೆದುಕೊಂಡಿದೆ, 7 ಲಕ್ಷ ಜನರಿಗೆ ಈ ಸೋಂಕು ವ್ಯಾಪಿಸಿದೆ ಹಾಗೂ 186 ರಾಷ್ಟ್ರಗಳಿಗೆ ಸಾವಿನ ಬೆದರಿಕೆ ಒಡ್ಡಿದೆ ಎಂದರೆ ಈ ವೈರಸ್ ಹುಟ್ಟುಹಾಕಿರುವ ಭೀತಿಯನ್ನು ನೀವೆ ಊಹಿಸಬಹುದು.

ಈ ಹಿಂದೆಯೂ ಜಗತ್ತು ಇದ್ದಕಿಂತ ಮಾರಣಾಂತಿಕ ವೈರಸ್‌ ಅನ್ನು ಕಂಡಿದೆ. ಆದರೆ, ಜಗತ್ತನ್ನು ಈ ಪರಿ ಬಿಡದಂತೆ ಕಾಡಿದ ಮತ್ತೊಂದು ವೈರಸ್ ಇರಲಿಕ್ಕಿಲ್ಲ ಎನ್ನುತ್ತಿದೆ ವೈಜ್ಞಾನಿಕ ಜಗತ್ತು.

ಜನವರಿ ತಿಂಗಳಲ್ಲೇ ಚೀನಾದಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೋನಾ ವೈರಸ್ ಹಾವಳಿ ಭಾರತಕ್ಕೆ ಅಷ್ಟಾಗಿ ಬರಲು ಸಾಧ್ಯವಿಲ್ಲ ಎಂದೇ ಭಾವಿಸಲಾಗಿತ್ತು. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ವಹಿಸದೆ ಅಸಡ್ಡೆ ತೋರಿದ್ದವು. ಆದರೆ, ಊರ ಸುಟ್ಟ ಕಿಡಿ ಇಂದು ಮನೆಗೂ ವ್ಯಾಪಿಸಿದೆ.

ಅಧಿಕಾರಸ್ಥರ ಅಸಡ್ಡೆಗೆ ಭಾರತದಲ್ಲೂ ಕೊರೋನಾ ಸುಮಾರು 50 ಜನರನ್ನು ಬಲಿ ಪಡೆದಿದೆ. ಮೊದಲ ಕೊರೋನಾ ಸಾವು ಕರ್ನಾಟಕದಲ್ಲೇ ದಾಖಲಾಗಿತ್ತು ಎಂಬುದು ಉಲ್ಲೇಖಾರ್ಹ. ಇನ್ನೂ ಸುಮಾರು 2000ಕ್ಕೂ ಹೆಚ್ಚು ಜನರಿಗೆ ಈ ಸೋಂಕು ಹರಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಘೋಷಿಸಲಾದ ಲಾಕ್ಡೌನ್ ನಡುವೆಯೂ ದೇಶದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ ಎಂದರೆ ಪರಿಸ್ಥಿತಿಯನ್ನು ಊಹಿಸಬಹುದು.
ಇಂತಹ ಸಂದರ್ಭದಲ್ಲಿ ಆಡಳಿತರೂಢ ಪಕ್ಷದವರು ತುಸು ಹೆಚ್ಚೇ ಎಂಬಂತೆ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮ ರಾಜಕೀಯವನ್ನು ಬದಿಗಿಟ್ಟು ಜನರನ್ನು ಈ ಮಹಾಮಾರಿಯಿಂದ ಕಾಪಾಡಬೇಕಾದ ತುರ್ತು ಅಗತ್ಯವಿದೆ. ಆದರೆ, ಜನ ಜೀವ ಭಯದಲ್ಲಿ ದಿನದೂಡುತ್ತಿರುವ ಇಂತಹ ಪ್ರಕ್ಷುಬ್ಧ ಪರಿಸ್ಥಿತಿಯಲ್ಲೂ ರಾಜ್ಯದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಇಬ್ಬರು ಸಚಿವರುಗಳ ತಮ್ಮ ಸ್ವ ಪ್ರತಿಷ್ಠೆಗಾಗಿ ಬೀದಿಕಾಳಗಕ್ಕಿಳಿದಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಅಪಕ್ವತೆಯನ್ನು ಬಟಾಬಯಲು ಮಾಡಿದ್ದಾರೆ.

ಶ್ರೀರಾಮುಲು v/s ಸುಧಾಕರ್ ಅಧಿಕಾರದ ಕಿತ್ತಾಟ

ಮಾರ್ಚ್ ಮೊದಲ ವಾರದವರೆಗೆ ರಾಜ್ಯದಲ್ಲಿ ಎಲ್ಲವೂ ಸರಿಯಾಗೇ ಇತ್ತು. ಚೀನಾ, ಸ್ಪೈನ್ ಇಟಲಿಯಲ್ಲಿ ಸಾಲು ಸಾಲು ಜನರ ಹೆಣ ಬೀಳಿಸಿದ್ದ ಕೊರೋನಾ ಭಾರತದಲ್ಲಿ ಆಗಿನ್ನು ತನ್ನ ಖಾತೆಯನ್ನು ತೆರೆದಿರಲಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರ ತಣ್ಣಗೇ ಇತ್ತು. ಆರೋಗ್ಯ ಸಚಿವ ಶ್ರೀರಾಮುಲು ಸಹ ತನ್ನ ಮಗಳ ಮದುವೆಯಲ್ಲಿ ತಲ್ಲೀನರಾಗಿದ್ದರು.

ಆದರೆ, ಮಾರ್ಚ್ 12 ರಂದು ಕಲಬುರ್ಗಿಯಲ್ಲಿ 76 ವರ್ಷದ ವೃದ್ಧ ಕೊರೋನಾಗೆ ದೇಶದಲ್ಲೇ ಮೊದಲ ವ್ಯಕ್ತಿಯಾಗಿ ಸಾವಿಗೀಡಾಗುತ್ತಿದ್ದಂತೆ ರಾಜ್ಯ ಮಾತ್ರವಲ್ಲ ಇಡೀ ದೇಶ ಎಚ್ಚೆತ್ತಿತ್ತು. ಆಗಿನ್ನೂ ನಿದ್ದೆಯಿಂದ ಎದ್ದಿದ್ದ ಎರಡೂ ಸರ್ಕಾರಗಳು ಕೊರೋನಾ ಹರಡದಂತೆ ತಡೆಯಲು ನಾನಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದವು. ಆದರೆ, ಆಗಲೂ ಸಹ ಸಚಿವ ಶ್ರೀರಾಮುಲು ಮಾತ್ರ ಇನ್ನೂ ಎಚ್ಚೆತ್ತಿರಲಿಲ್ಲ.

ಮಗಳ ಮದುವೆ ಮೂಡ್‌ನಲ್ಲೇ ಇದ್ದ ಆರೋಗ್ಯ ಸಚಿವ ಶ್ರೀರಾಮುಲು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತಮ್ಮ ಮನೆಗೆ ಕರೆದು ಕೆಲ ಸಭೆ ನಡೆಸಿ ಸೂಚನೆ ನೀಡುವ ಗಿಮಿಕ್ ಮಾಡಿದರಾದರೂ ಸರಿಯಾದ ಅಂಕಿಅಂಶಗಳಿಲ್ಲದೆ ಸುದ್ದಿಗೋಷ್ಠಿಗಳಲ್ಲಿ ಪೇಚಿಗೆ ಸಿಲುಕಿ ಆಡಳಿತ ಸರ್ಕಾರವನ್ನೂ ಮುಜುಗರಕ್ಕೆ ಒಳಪಡಿಸಿದ್ದ ಘಟನೆಗಳು ನಡೆದಿದ್ದವು. ಅಲ್ಲದೆ, ಗಂಭೀರ ವಿಚಾರದ ಕುರಿತ ಶ್ರೀರಾಮುಲು ಅವರ ಈ ಮಟ್ಟದ ಅಸಡ್ಡೆ ಸ್ವತಃ ಸಿಎಂ ಯಡಿಯೂರಪ್ಪ ಅವರ ಕೆಂಗಣ್ಣಿಗೂ ಗುರಿಯಾಗಿತ್ತು.

ಆದರೆ, ಇಂತಹದ್ದೇ ಸಂದರ್ಭಕ್ಕೆ ಕಾದಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ|ಕೆ. ಸುಧಾಕರ್ ಸಚಿವ ಶ್ರೀರಾಮುಲು ಅವರ ಅನುಪಸ್ಥಿತಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರದಲ್ಲಿ ತನ್ನ ಮೂಗು ತೂರಿಸಿದ್ದರು. ಅಷ್ಟೇ ಅಲ್ಲ ರಾಜ್ಯದ ಉದ್ದಗಲಕ್ಕೂ ಓಡಾಡುವ ಮೂಲಕ ತಾನೇ ಆರೋಗ್ಯ ಸಚಿವ ಎಂಬಂತೆ ಮಾಧ್ಯಮಗಳ ಎದುರು ಸಾಕಷ್ಟು ಸ್ಕೋಪ್ ಸಹ ತೆಗೆದುಕೊಂಡಿದ್ದರು. ಈ ಘಟನೆ ಇದೀಗ ಇಬ್ಬರು ಸಚಿವರ ಪ್ರತಿಷ್ಠೆಗೆ ಕಾರಣವಾಗಿದೆ.

ಬಡ್ತಿ ಪಡೆದ ಕೆ. ಸುಧಾಕರ್

ಆಪರೇಷನ್ ಕಮಲದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಮೂಲಕ ಮೊದಲ ಬಾರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಪಡೆದಿದ್ದ ಡಾ|ಕೆ. ಸುಧಾಕರ್ ಅವರಿಗೆ ಕೊರೋನಾ ಕುರಿತ ಶ್ರೀರಾಮಲು ಅವರ ಅಸಡ್ಡೆ ಲಾಭವಾಯಿತು ಮತ್ತು ಜನರ-ಮಾಧ್ಯಮದ ಎದುರು ಒಳ್ಳೆಯ ಹೆಸರು ಗಳಿಸಲೂ ಅನುಕೂಲವಾಯಿತು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದಂತೆ ರಾಜ್ಯದ ಉದ್ದಗಲಕ್ಕೂ ಓಡಾಡಿದ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಎಲ್ಲಾ ಜಿಲ್ಲೆಗಳಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು ಅಲ್ಲದೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲು ಆರಂಭಿಸಿದರು. ಪ್ರತಿದಿನ ಸಂಜೆ ಪತ್ರಿಕಾಗೋಷ್ಠಿ ನಡೆಸಲು ಮುಂದಾದರು. ಒಂದರ್ಥದಲ್ಲಿ ತಾವೇ ಆರೋಗ್ಯ ಇಲಾಖೆ ಸಚಿವ ಎಂಬಂತೆ ಬಿಂಬಿತವಾಗಲಾರಂಭಿಸಿದರು.

ಸಚಿವ ಸುಧಾಕರ್ ಅವರ ಕೆಲಸ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೂ ಬಂದು ಮೆಚ್ಚುಗೆಗೂ ಪಾತ್ರವಾಗಿತ್ತು. ಮಾಧ್ಯಮಗಳೂ ಸಹ ಸುಧಾಕರ್ ಕೆಲಸಕ್ಕೆ ಮೆಚ್ಚುಗೆಯನ್ನು ತೋರಿದ್ದವು. ಇಷ್ಟು ಸಾಕಿತ್ತು ಶ್ರೀರಾಮುಲು ಕಣ್ಣು ಕೆಂಪಾಗಿಸಲು.

ಕೊರೋನಾ ಟಾಸ್ಕ್ ಫೋರ್ಸ್‌ ಬಯಲು ಮಾಡಿತು ಇವರ ಒಣ ಜಗಳ

ಕೊರೋನಾ ವಿಚಾರದಲ್ಲಿ ಸಚಿವ ಸುಧಾಕರ್ ಅವರ ಕೆಲಸಕ್ಕೆ ಮಣೆ ಹಾಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಇಲಾಖೆಯಲ್ಲಿ ಅವರಿಗೂ ಅಧಿಕಾರವನ್ನು ಹಂಚಿಕೆ ಮಾಡಿದ್ದರು. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ರಚಿಸಲಾಗಿದ್ದ “ಕೊರೋನಾ ಟಾಸ್ಕ್ ಫೋರ್ಸ್‌” ಜವಾಬ್ದಾರಿಯನ್ನು ಸುಧಾಕರ್‌ಗೆ ನೀಡಲಾಯಿತು. ಟಾಸ್ಕ್ ಫೋರ್ಸ್‌ ಬೆಂಗಳೂರು ಜವಾಬ್ದಾರಿಯನ್ನು ಸುಧಾಕರ್‌ಗೂ ಜಿಲ್ಲೆಗಳ ಜವಾಬ್ದಾರಿಯನ್ನು ಶ್ರೀರಾಮುಲುಗೂ ಹಂಚಿಕೆ ಮಾಡಲಾಗಿತ್ತು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಕೊರೋನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಲ್ಲಿ ಸರಿ ಸಮಾನವಾಗಿ ಅಧಿಕಾರ ಹಂಚಿದ್ದಕ್ಕೆ ರಾಮುಲು ಸಿಎಂ ಬಿಎಸ್‌ವೈ ಬಳಿ ಗರಂ ಆಗಿದ್ದರು. ಸುಧಾಕರ್‌ಗೆ ನನ್ನ ಇಲಾಖೆಯಲ್ಲಿ ಸರಿಸಮಾನ ಅಧಿಕಾರ ನೀಡಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಹೀಗಾಗಿ ಟಾಸ್ಕ್ ಫೋರ್ಸ್‌ ಕುರಿತ ಆದೇಶವನ್ನು ಮಾರ್ಪಾಡು ಮಾಡುವಂತೆ ಸಿಎಂಗೆ ಶ್ರೀರಾಮುಲು ಒತ್ತಡ ಹಾಕಿದ್ದರು.

ಮತ್ತೊಂದೆಡೆ ಈ ಕುರಿತು ಮಾಧ್ಯಮಗಳಿಗೆ ಬಹಿರಂಗವಾಗಿಯೇ ಪ್ರತಿಕ್ರಿಯೆ ನೀಡಿದ್ದ ಡಾ| ಸುಧಾಕರ್, “ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಟಾಸ್ಕ್ ಫೋರ್ಸ್‌ ರಚಿಸಲಾಗಿದೆ. ಬೆಂಗಳೂರಿನ ಜವಾಬ್ದಾರಿಯನ್ನು ನನಗೆ ಹಾಗೂ ಇತರೆ ಜಿಲ್ಲೆಗಳ ಜವಾಬ್ದಾರಿಯನ್ನು ಶ್ರೀರಾಮುಲು ಅವರಿಗೆ ವಹಿಸಿ ಸಿಎಂ ಆದೇಶಿಸಿದ್ದಾರೆ.
ಆದರೆ, ಟಾಸ್ಕ್ ಫೋರ್ಸ್ ನಿರ್ವಹಣೆ ಎಂಬುದು ಜವಾಬ್ದಾರಿಯುತ ಕೆಲಸವಾಗಿದ್ದು, ಇದನ್ನು ಒಬ್ಬರೇ ಮಾನಿಟರ್ ಮಾಡುವ ಹಾಗಿರಬೇಕು. ಯಾರಿಗಾದ್ರು ಒಬ್ಬರಿಗೆ ಜವಾಬ್ದಾರಿ ಇದ್ದರೆ ಅವರು ಉತ್ತರದಾಯಿತ್ವರಾಗಬೇಕು. ಜವಾಬ್ದಾರಿಗಳು ಹರಿದು ಹಂಚಿ ಹೋಗುವುದರಿಂದ ಗೊಂದಲಗಳೇ ಅಧಿಕ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಇಡೀ ಟಾಸ್ಕ್ ಫೋರ್ಸ್‌ ಅಧಿಕಾರವನ್ನು ತನಗೇ ನೀಡಬೇಕು ಎಂಬಂತೆ ವರ್ತಿಸತೊಡಗಿದರು.

ಇದೀಗ ಈ ಟಾಸ್ಕ್ ಫೋರ್ಸ್‌ ರಾಜ್ಯದಲ್ಲಿ ನಿರ್ವಹಿಸುತ್ತಿರುವ ಕೆಲಸ ಏನು? ಸೋಂಕು ಹರಡದಂತೆ ತಡೆಯುವಲ್ಲಿ ಈ ಫೋರ್ಸ್ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿದೆ ಎಂಬ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ. ಅಲ್ಲದೆ, ಕೆಲಸ ಮಾಡುವ ವಿಚಾರದಲ್ಲಿ ಈ ಇಬ್ಬರೂ ಸಚಿವರ ನಡುವೆ ಯಾವುದೇ ತಾಳ ಮೇಳ ಇದ್ದಂತೆಯೂ ಕಾಣಿಸುತ್ತಿಲ್ಲ. ಆದರೆ, ಪಕ್ಷದಲ್ಲಿ ಹಿರಿಯನಾದ ತನನ್ನು ವಲಸೆ ಸಚಿವ ಸುಧಾಕರ್ ಸೈಡ್‌ಲೈನ್ ಮಾಡಿರುವ ಸಿಟ್ಟು ರಾಮುಲು ಅವರ ವರ್ತನೆಯಲ್ಲಿ ಎದ್ದು ಕಾಣಿಸುತ್ತಿದೆ.

ಈ ನಡುವೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಳ್ಳುವ ಜವಾಬ್ದಾರಿಯನ್ನೂ ಸಹ ರಾಜ್ಯ ಸರ್ಕಾರ ಡಾ|ಕೆ. ಸುಧಾಕರ್ ಅವರಿಗೇ ನೀಡಿದೆ ಎನ್ನಲಾಗುತ್ತಿದೆ. ಒಟ್ಟಾರೆ ಈ ಎಲ್ಲಾ ಪ್ರಸಂಗಗಳನ್ನೂ ಬಿಜೆಪಿ ನಾಯಕರ ಒಣ ಪ್ರತಿಷ್ಠೆಯ ಕಿತ್ತಾಟವನ್ನು ಬಟಾಬಯಲು ಮಾಡಿದೆ.

ಒಂದೆಡೆ ಕೊರೋನಾ ಒಂದೊಂದೇ ದೇಶಗಳನ್ನು ಅಪೋಷನ ತೆಗೆದುಕೊಳ್ಳುತ್ತಿದೆ. ವಿಶ್ವದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಹೊಂದಿರುವ ಅಮೆರಿಕದಂತಹಾ ಅಮೆರಿಕಾ ಸಹ ಕೊರೋನಾ ಎದುರು ಮಂಡಿಯೂರಿ ಕುಳಿತಿದೆ. ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗ ನಮ್ಮದೇ ರಾಜ್ಯದಲ್ಲಿನ ಇಬ್ಬರು ಸಚಿವರುಗಳು ಅಧಿಕಾರಕ್ಕಾಗಿ ಹೀಗೆ ಕಿತ್ತಾಟ ನಡೆಸುತ್ತಿರುವುದು ವಿಪರ್ಯಾಸವೇ ಸರಿ. ಇಷ್ಟಕ್ಕೂ ಇದು ಅಧಿಕಾರ ಮುಖ್ಯವೇ? ಅಥವಾ ಜೀವ ಮುಖ್ಯವೇ? ಎಂದು ಯೋಚಿಸಬೇಕಾದ ಸಂದಿಗ್ಧ ಕಾಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...