Homeಮುಖಪುಟಸುಧಾಕರ್‌ v/s ಶ್ರೀರಾಮುಲು : ಕೊರೋನಾ ಎಮರ್ಜೆನ್ಸಿ ನಡುವೆ ಸ್ವಪ್ರತಿಷ್ಠೆಯೇ ಹೆಚ್ಚಾಯ್ತಾ ಸಚಿವರಿಗೆ?

ಸುಧಾಕರ್‌ v/s ಶ್ರೀರಾಮುಲು : ಕೊರೋನಾ ಎಮರ್ಜೆನ್ಸಿ ನಡುವೆ ಸ್ವಪ್ರತಿಷ್ಠೆಯೇ ಹೆಚ್ಚಾಯ್ತಾ ಸಚಿವರಿಗೆ?

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಸಾವಿರಾರು ಕೋಟಿ ರೂ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಳ್ಳುವ ಜವಾಬ್ದಾರಿಯನ್ನೂ ರಾಜ್ಯ ಸರ್ಕಾರ ಡಾ|ಕೆ. ಸುಧಾಕರ್ ಅವರಿಗೆ ನೀಡಿದೆ ಎನ್ನಲಾಗುತ್ತಿದೆ.

- Advertisement -
- Advertisement -

ಇಡೀ ವಿಶ್ವದ ಎದುರು ಕೊರೋನಾ ಎಂಬ ಮಾರಣಾಂತಿಕ ವೈರಸ್ ಸೃಷ್ಟಿಸಿರುವ ಮೃತ್ಯಕೂಪ ಊಹೆಗೂ ನಿಲುಕದಷ್ಟು ದೊಡ್ಡದಾಗಿ ಬೆಳೆದಿದೆ. ಚೀನಾ ದೇಶದ ವುಹಾನ್ ಎಂಬ ಪಟ್ಟಣದ ಮಾಂಸದ ಅಂಗಡಿಯೊಂದರ ಬಳಿ ಸೃಷ್ಟಿಯಾದ ಈ ವೈರಸ್ ಜಗತ್ತಿನಾದ್ಯಂತ ಸುಮಾರು 35,000 ಸಾವಿರ ಜೀವಗಳನ್ನು ಆಹುತಿ ತೆಗೆದುಕೊಂಡಿದೆ, 7 ಲಕ್ಷ ಜನರಿಗೆ ಈ ಸೋಂಕು ವ್ಯಾಪಿಸಿದೆ ಹಾಗೂ 186 ರಾಷ್ಟ್ರಗಳಿಗೆ ಸಾವಿನ ಬೆದರಿಕೆ ಒಡ್ಡಿದೆ ಎಂದರೆ ಈ ವೈರಸ್ ಹುಟ್ಟುಹಾಕಿರುವ ಭೀತಿಯನ್ನು ನೀವೆ ಊಹಿಸಬಹುದು.

ಈ ಹಿಂದೆಯೂ ಜಗತ್ತು ಇದ್ದಕಿಂತ ಮಾರಣಾಂತಿಕ ವೈರಸ್‌ ಅನ್ನು ಕಂಡಿದೆ. ಆದರೆ, ಜಗತ್ತನ್ನು ಈ ಪರಿ ಬಿಡದಂತೆ ಕಾಡಿದ ಮತ್ತೊಂದು ವೈರಸ್ ಇರಲಿಕ್ಕಿಲ್ಲ ಎನ್ನುತ್ತಿದೆ ವೈಜ್ಞಾನಿಕ ಜಗತ್ತು.

ಜನವರಿ ತಿಂಗಳಲ್ಲೇ ಚೀನಾದಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೋನಾ ವೈರಸ್ ಹಾವಳಿ ಭಾರತಕ್ಕೆ ಅಷ್ಟಾಗಿ ಬರಲು ಸಾಧ್ಯವಿಲ್ಲ ಎಂದೇ ಭಾವಿಸಲಾಗಿತ್ತು. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ವಹಿಸದೆ ಅಸಡ್ಡೆ ತೋರಿದ್ದವು. ಆದರೆ, ಊರ ಸುಟ್ಟ ಕಿಡಿ ಇಂದು ಮನೆಗೂ ವ್ಯಾಪಿಸಿದೆ.

ಅಧಿಕಾರಸ್ಥರ ಅಸಡ್ಡೆಗೆ ಭಾರತದಲ್ಲೂ ಕೊರೋನಾ ಸುಮಾರು 50 ಜನರನ್ನು ಬಲಿ ಪಡೆದಿದೆ. ಮೊದಲ ಕೊರೋನಾ ಸಾವು ಕರ್ನಾಟಕದಲ್ಲೇ ದಾಖಲಾಗಿತ್ತು ಎಂಬುದು ಉಲ್ಲೇಖಾರ್ಹ. ಇನ್ನೂ ಸುಮಾರು 2000ಕ್ಕೂ ಹೆಚ್ಚು ಜನರಿಗೆ ಈ ಸೋಂಕು ಹರಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಘೋಷಿಸಲಾದ ಲಾಕ್ಡೌನ್ ನಡುವೆಯೂ ದೇಶದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ ಎಂದರೆ ಪರಿಸ್ಥಿತಿಯನ್ನು ಊಹಿಸಬಹುದು.
ಇಂತಹ ಸಂದರ್ಭದಲ್ಲಿ ಆಡಳಿತರೂಢ ಪಕ್ಷದವರು ತುಸು ಹೆಚ್ಚೇ ಎಂಬಂತೆ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮ ರಾಜಕೀಯವನ್ನು ಬದಿಗಿಟ್ಟು ಜನರನ್ನು ಈ ಮಹಾಮಾರಿಯಿಂದ ಕಾಪಾಡಬೇಕಾದ ತುರ್ತು ಅಗತ್ಯವಿದೆ. ಆದರೆ, ಜನ ಜೀವ ಭಯದಲ್ಲಿ ದಿನದೂಡುತ್ತಿರುವ ಇಂತಹ ಪ್ರಕ್ಷುಬ್ಧ ಪರಿಸ್ಥಿತಿಯಲ್ಲೂ ರಾಜ್ಯದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಇಬ್ಬರು ಸಚಿವರುಗಳ ತಮ್ಮ ಸ್ವ ಪ್ರತಿಷ್ಠೆಗಾಗಿ ಬೀದಿಕಾಳಗಕ್ಕಿಳಿದಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಅಪಕ್ವತೆಯನ್ನು ಬಟಾಬಯಲು ಮಾಡಿದ್ದಾರೆ.

ಶ್ರೀರಾಮುಲು v/s ಸುಧಾಕರ್ ಅಧಿಕಾರದ ಕಿತ್ತಾಟ

ಮಾರ್ಚ್ ಮೊದಲ ವಾರದವರೆಗೆ ರಾಜ್ಯದಲ್ಲಿ ಎಲ್ಲವೂ ಸರಿಯಾಗೇ ಇತ್ತು. ಚೀನಾ, ಸ್ಪೈನ್ ಇಟಲಿಯಲ್ಲಿ ಸಾಲು ಸಾಲು ಜನರ ಹೆಣ ಬೀಳಿಸಿದ್ದ ಕೊರೋನಾ ಭಾರತದಲ್ಲಿ ಆಗಿನ್ನು ತನ್ನ ಖಾತೆಯನ್ನು ತೆರೆದಿರಲಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರ ತಣ್ಣಗೇ ಇತ್ತು. ಆರೋಗ್ಯ ಸಚಿವ ಶ್ರೀರಾಮುಲು ಸಹ ತನ್ನ ಮಗಳ ಮದುವೆಯಲ್ಲಿ ತಲ್ಲೀನರಾಗಿದ್ದರು.

ಆದರೆ, ಮಾರ್ಚ್ 12 ರಂದು ಕಲಬುರ್ಗಿಯಲ್ಲಿ 76 ವರ್ಷದ ವೃದ್ಧ ಕೊರೋನಾಗೆ ದೇಶದಲ್ಲೇ ಮೊದಲ ವ್ಯಕ್ತಿಯಾಗಿ ಸಾವಿಗೀಡಾಗುತ್ತಿದ್ದಂತೆ ರಾಜ್ಯ ಮಾತ್ರವಲ್ಲ ಇಡೀ ದೇಶ ಎಚ್ಚೆತ್ತಿತ್ತು. ಆಗಿನ್ನೂ ನಿದ್ದೆಯಿಂದ ಎದ್ದಿದ್ದ ಎರಡೂ ಸರ್ಕಾರಗಳು ಕೊರೋನಾ ಹರಡದಂತೆ ತಡೆಯಲು ನಾನಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದವು. ಆದರೆ, ಆಗಲೂ ಸಹ ಸಚಿವ ಶ್ರೀರಾಮುಲು ಮಾತ್ರ ಇನ್ನೂ ಎಚ್ಚೆತ್ತಿರಲಿಲ್ಲ.

ಮಗಳ ಮದುವೆ ಮೂಡ್‌ನಲ್ಲೇ ಇದ್ದ ಆರೋಗ್ಯ ಸಚಿವ ಶ್ರೀರಾಮುಲು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತಮ್ಮ ಮನೆಗೆ ಕರೆದು ಕೆಲ ಸಭೆ ನಡೆಸಿ ಸೂಚನೆ ನೀಡುವ ಗಿಮಿಕ್ ಮಾಡಿದರಾದರೂ ಸರಿಯಾದ ಅಂಕಿಅಂಶಗಳಿಲ್ಲದೆ ಸುದ್ದಿಗೋಷ್ಠಿಗಳಲ್ಲಿ ಪೇಚಿಗೆ ಸಿಲುಕಿ ಆಡಳಿತ ಸರ್ಕಾರವನ್ನೂ ಮುಜುಗರಕ್ಕೆ ಒಳಪಡಿಸಿದ್ದ ಘಟನೆಗಳು ನಡೆದಿದ್ದವು. ಅಲ್ಲದೆ, ಗಂಭೀರ ವಿಚಾರದ ಕುರಿತ ಶ್ರೀರಾಮುಲು ಅವರ ಈ ಮಟ್ಟದ ಅಸಡ್ಡೆ ಸ್ವತಃ ಸಿಎಂ ಯಡಿಯೂರಪ್ಪ ಅವರ ಕೆಂಗಣ್ಣಿಗೂ ಗುರಿಯಾಗಿತ್ತು.

ಆದರೆ, ಇಂತಹದ್ದೇ ಸಂದರ್ಭಕ್ಕೆ ಕಾದಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ|ಕೆ. ಸುಧಾಕರ್ ಸಚಿವ ಶ್ರೀರಾಮುಲು ಅವರ ಅನುಪಸ್ಥಿತಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರದಲ್ಲಿ ತನ್ನ ಮೂಗು ತೂರಿಸಿದ್ದರು. ಅಷ್ಟೇ ಅಲ್ಲ ರಾಜ್ಯದ ಉದ್ದಗಲಕ್ಕೂ ಓಡಾಡುವ ಮೂಲಕ ತಾನೇ ಆರೋಗ್ಯ ಸಚಿವ ಎಂಬಂತೆ ಮಾಧ್ಯಮಗಳ ಎದುರು ಸಾಕಷ್ಟು ಸ್ಕೋಪ್ ಸಹ ತೆಗೆದುಕೊಂಡಿದ್ದರು. ಈ ಘಟನೆ ಇದೀಗ ಇಬ್ಬರು ಸಚಿವರ ಪ್ರತಿಷ್ಠೆಗೆ ಕಾರಣವಾಗಿದೆ.

ಬಡ್ತಿ ಪಡೆದ ಕೆ. ಸುಧಾಕರ್

ಆಪರೇಷನ್ ಕಮಲದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಮೂಲಕ ಮೊದಲ ಬಾರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಪಡೆದಿದ್ದ ಡಾ|ಕೆ. ಸುಧಾಕರ್ ಅವರಿಗೆ ಕೊರೋನಾ ಕುರಿತ ಶ್ರೀರಾಮಲು ಅವರ ಅಸಡ್ಡೆ ಲಾಭವಾಯಿತು ಮತ್ತು ಜನರ-ಮಾಧ್ಯಮದ ಎದುರು ಒಳ್ಳೆಯ ಹೆಸರು ಗಳಿಸಲೂ ಅನುಕೂಲವಾಯಿತು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದಂತೆ ರಾಜ್ಯದ ಉದ್ದಗಲಕ್ಕೂ ಓಡಾಡಿದ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಎಲ್ಲಾ ಜಿಲ್ಲೆಗಳಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು ಅಲ್ಲದೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲು ಆರಂಭಿಸಿದರು. ಪ್ರತಿದಿನ ಸಂಜೆ ಪತ್ರಿಕಾಗೋಷ್ಠಿ ನಡೆಸಲು ಮುಂದಾದರು. ಒಂದರ್ಥದಲ್ಲಿ ತಾವೇ ಆರೋಗ್ಯ ಇಲಾಖೆ ಸಚಿವ ಎಂಬಂತೆ ಬಿಂಬಿತವಾಗಲಾರಂಭಿಸಿದರು.

ಸಚಿವ ಸುಧಾಕರ್ ಅವರ ಕೆಲಸ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೂ ಬಂದು ಮೆಚ್ಚುಗೆಗೂ ಪಾತ್ರವಾಗಿತ್ತು. ಮಾಧ್ಯಮಗಳೂ ಸಹ ಸುಧಾಕರ್ ಕೆಲಸಕ್ಕೆ ಮೆಚ್ಚುಗೆಯನ್ನು ತೋರಿದ್ದವು. ಇಷ್ಟು ಸಾಕಿತ್ತು ಶ್ರೀರಾಮುಲು ಕಣ್ಣು ಕೆಂಪಾಗಿಸಲು.

ಕೊರೋನಾ ಟಾಸ್ಕ್ ಫೋರ್ಸ್‌ ಬಯಲು ಮಾಡಿತು ಇವರ ಒಣ ಜಗಳ

ಕೊರೋನಾ ವಿಚಾರದಲ್ಲಿ ಸಚಿವ ಸುಧಾಕರ್ ಅವರ ಕೆಲಸಕ್ಕೆ ಮಣೆ ಹಾಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಇಲಾಖೆಯಲ್ಲಿ ಅವರಿಗೂ ಅಧಿಕಾರವನ್ನು ಹಂಚಿಕೆ ಮಾಡಿದ್ದರು. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ರಚಿಸಲಾಗಿದ್ದ “ಕೊರೋನಾ ಟಾಸ್ಕ್ ಫೋರ್ಸ್‌” ಜವಾಬ್ದಾರಿಯನ್ನು ಸುಧಾಕರ್‌ಗೆ ನೀಡಲಾಯಿತು. ಟಾಸ್ಕ್ ಫೋರ್ಸ್‌ ಬೆಂಗಳೂರು ಜವಾಬ್ದಾರಿಯನ್ನು ಸುಧಾಕರ್‌ಗೂ ಜಿಲ್ಲೆಗಳ ಜವಾಬ್ದಾರಿಯನ್ನು ಶ್ರೀರಾಮುಲುಗೂ ಹಂಚಿಕೆ ಮಾಡಲಾಗಿತ್ತು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಕೊರೋನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಲ್ಲಿ ಸರಿ ಸಮಾನವಾಗಿ ಅಧಿಕಾರ ಹಂಚಿದ್ದಕ್ಕೆ ರಾಮುಲು ಸಿಎಂ ಬಿಎಸ್‌ವೈ ಬಳಿ ಗರಂ ಆಗಿದ್ದರು. ಸುಧಾಕರ್‌ಗೆ ನನ್ನ ಇಲಾಖೆಯಲ್ಲಿ ಸರಿಸಮಾನ ಅಧಿಕಾರ ನೀಡಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಹೀಗಾಗಿ ಟಾಸ್ಕ್ ಫೋರ್ಸ್‌ ಕುರಿತ ಆದೇಶವನ್ನು ಮಾರ್ಪಾಡು ಮಾಡುವಂತೆ ಸಿಎಂಗೆ ಶ್ರೀರಾಮುಲು ಒತ್ತಡ ಹಾಕಿದ್ದರು.

ಮತ್ತೊಂದೆಡೆ ಈ ಕುರಿತು ಮಾಧ್ಯಮಗಳಿಗೆ ಬಹಿರಂಗವಾಗಿಯೇ ಪ್ರತಿಕ್ರಿಯೆ ನೀಡಿದ್ದ ಡಾ| ಸುಧಾಕರ್, “ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಟಾಸ್ಕ್ ಫೋರ್ಸ್‌ ರಚಿಸಲಾಗಿದೆ. ಬೆಂಗಳೂರಿನ ಜವಾಬ್ದಾರಿಯನ್ನು ನನಗೆ ಹಾಗೂ ಇತರೆ ಜಿಲ್ಲೆಗಳ ಜವಾಬ್ದಾರಿಯನ್ನು ಶ್ರೀರಾಮುಲು ಅವರಿಗೆ ವಹಿಸಿ ಸಿಎಂ ಆದೇಶಿಸಿದ್ದಾರೆ.
ಆದರೆ, ಟಾಸ್ಕ್ ಫೋರ್ಸ್ ನಿರ್ವಹಣೆ ಎಂಬುದು ಜವಾಬ್ದಾರಿಯುತ ಕೆಲಸವಾಗಿದ್ದು, ಇದನ್ನು ಒಬ್ಬರೇ ಮಾನಿಟರ್ ಮಾಡುವ ಹಾಗಿರಬೇಕು. ಯಾರಿಗಾದ್ರು ಒಬ್ಬರಿಗೆ ಜವಾಬ್ದಾರಿ ಇದ್ದರೆ ಅವರು ಉತ್ತರದಾಯಿತ್ವರಾಗಬೇಕು. ಜವಾಬ್ದಾರಿಗಳು ಹರಿದು ಹಂಚಿ ಹೋಗುವುದರಿಂದ ಗೊಂದಲಗಳೇ ಅಧಿಕ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಇಡೀ ಟಾಸ್ಕ್ ಫೋರ್ಸ್‌ ಅಧಿಕಾರವನ್ನು ತನಗೇ ನೀಡಬೇಕು ಎಂಬಂತೆ ವರ್ತಿಸತೊಡಗಿದರು.

ಇದೀಗ ಈ ಟಾಸ್ಕ್ ಫೋರ್ಸ್‌ ರಾಜ್ಯದಲ್ಲಿ ನಿರ್ವಹಿಸುತ್ತಿರುವ ಕೆಲಸ ಏನು? ಸೋಂಕು ಹರಡದಂತೆ ತಡೆಯುವಲ್ಲಿ ಈ ಫೋರ್ಸ್ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿದೆ ಎಂಬ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ. ಅಲ್ಲದೆ, ಕೆಲಸ ಮಾಡುವ ವಿಚಾರದಲ್ಲಿ ಈ ಇಬ್ಬರೂ ಸಚಿವರ ನಡುವೆ ಯಾವುದೇ ತಾಳ ಮೇಳ ಇದ್ದಂತೆಯೂ ಕಾಣಿಸುತ್ತಿಲ್ಲ. ಆದರೆ, ಪಕ್ಷದಲ್ಲಿ ಹಿರಿಯನಾದ ತನನ್ನು ವಲಸೆ ಸಚಿವ ಸುಧಾಕರ್ ಸೈಡ್‌ಲೈನ್ ಮಾಡಿರುವ ಸಿಟ್ಟು ರಾಮುಲು ಅವರ ವರ್ತನೆಯಲ್ಲಿ ಎದ್ದು ಕಾಣಿಸುತ್ತಿದೆ.

ಈ ನಡುವೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಳ್ಳುವ ಜವಾಬ್ದಾರಿಯನ್ನೂ ಸಹ ರಾಜ್ಯ ಸರ್ಕಾರ ಡಾ|ಕೆ. ಸುಧಾಕರ್ ಅವರಿಗೇ ನೀಡಿದೆ ಎನ್ನಲಾಗುತ್ತಿದೆ. ಒಟ್ಟಾರೆ ಈ ಎಲ್ಲಾ ಪ್ರಸಂಗಗಳನ್ನೂ ಬಿಜೆಪಿ ನಾಯಕರ ಒಣ ಪ್ರತಿಷ್ಠೆಯ ಕಿತ್ತಾಟವನ್ನು ಬಟಾಬಯಲು ಮಾಡಿದೆ.

ಒಂದೆಡೆ ಕೊರೋನಾ ಒಂದೊಂದೇ ದೇಶಗಳನ್ನು ಅಪೋಷನ ತೆಗೆದುಕೊಳ್ಳುತ್ತಿದೆ. ವಿಶ್ವದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಹೊಂದಿರುವ ಅಮೆರಿಕದಂತಹಾ ಅಮೆರಿಕಾ ಸಹ ಕೊರೋನಾ ಎದುರು ಮಂಡಿಯೂರಿ ಕುಳಿತಿದೆ. ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗ ನಮ್ಮದೇ ರಾಜ್ಯದಲ್ಲಿನ ಇಬ್ಬರು ಸಚಿವರುಗಳು ಅಧಿಕಾರಕ್ಕಾಗಿ ಹೀಗೆ ಕಿತ್ತಾಟ ನಡೆಸುತ್ತಿರುವುದು ವಿಪರ್ಯಾಸವೇ ಸರಿ. ಇಷ್ಟಕ್ಕೂ ಇದು ಅಧಿಕಾರ ಮುಖ್ಯವೇ? ಅಥವಾ ಜೀವ ಮುಖ್ಯವೇ? ಎಂದು ಯೋಚಿಸಬೇಕಾದ ಸಂದಿಗ್ಧ ಕಾಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...