Homeಮುಖಪುಟಸುಧಾಕರ್‌ v/s ಶ್ರೀರಾಮುಲು : ಕೊರೋನಾ ಎಮರ್ಜೆನ್ಸಿ ನಡುವೆ ಸ್ವಪ್ರತಿಷ್ಠೆಯೇ ಹೆಚ್ಚಾಯ್ತಾ ಸಚಿವರಿಗೆ?

ಸುಧಾಕರ್‌ v/s ಶ್ರೀರಾಮುಲು : ಕೊರೋನಾ ಎಮರ್ಜೆನ್ಸಿ ನಡುವೆ ಸ್ವಪ್ರತಿಷ್ಠೆಯೇ ಹೆಚ್ಚಾಯ್ತಾ ಸಚಿವರಿಗೆ?

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಸಾವಿರಾರು ಕೋಟಿ ರೂ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಳ್ಳುವ ಜವಾಬ್ದಾರಿಯನ್ನೂ ರಾಜ್ಯ ಸರ್ಕಾರ ಡಾ|ಕೆ. ಸುಧಾಕರ್ ಅವರಿಗೆ ನೀಡಿದೆ ಎನ್ನಲಾಗುತ್ತಿದೆ.

- Advertisement -
- Advertisement -

ಇಡೀ ವಿಶ್ವದ ಎದುರು ಕೊರೋನಾ ಎಂಬ ಮಾರಣಾಂತಿಕ ವೈರಸ್ ಸೃಷ್ಟಿಸಿರುವ ಮೃತ್ಯಕೂಪ ಊಹೆಗೂ ನಿಲುಕದಷ್ಟು ದೊಡ್ಡದಾಗಿ ಬೆಳೆದಿದೆ. ಚೀನಾ ದೇಶದ ವುಹಾನ್ ಎಂಬ ಪಟ್ಟಣದ ಮಾಂಸದ ಅಂಗಡಿಯೊಂದರ ಬಳಿ ಸೃಷ್ಟಿಯಾದ ಈ ವೈರಸ್ ಜಗತ್ತಿನಾದ್ಯಂತ ಸುಮಾರು 35,000 ಸಾವಿರ ಜೀವಗಳನ್ನು ಆಹುತಿ ತೆಗೆದುಕೊಂಡಿದೆ, 7 ಲಕ್ಷ ಜನರಿಗೆ ಈ ಸೋಂಕು ವ್ಯಾಪಿಸಿದೆ ಹಾಗೂ 186 ರಾಷ್ಟ್ರಗಳಿಗೆ ಸಾವಿನ ಬೆದರಿಕೆ ಒಡ್ಡಿದೆ ಎಂದರೆ ಈ ವೈರಸ್ ಹುಟ್ಟುಹಾಕಿರುವ ಭೀತಿಯನ್ನು ನೀವೆ ಊಹಿಸಬಹುದು.

ಈ ಹಿಂದೆಯೂ ಜಗತ್ತು ಇದ್ದಕಿಂತ ಮಾರಣಾಂತಿಕ ವೈರಸ್‌ ಅನ್ನು ಕಂಡಿದೆ. ಆದರೆ, ಜಗತ್ತನ್ನು ಈ ಪರಿ ಬಿಡದಂತೆ ಕಾಡಿದ ಮತ್ತೊಂದು ವೈರಸ್ ಇರಲಿಕ್ಕಿಲ್ಲ ಎನ್ನುತ್ತಿದೆ ವೈಜ್ಞಾನಿಕ ಜಗತ್ತು.

ಜನವರಿ ತಿಂಗಳಲ್ಲೇ ಚೀನಾದಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೋನಾ ವೈರಸ್ ಹಾವಳಿ ಭಾರತಕ್ಕೆ ಅಷ್ಟಾಗಿ ಬರಲು ಸಾಧ್ಯವಿಲ್ಲ ಎಂದೇ ಭಾವಿಸಲಾಗಿತ್ತು. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ವಹಿಸದೆ ಅಸಡ್ಡೆ ತೋರಿದ್ದವು. ಆದರೆ, ಊರ ಸುಟ್ಟ ಕಿಡಿ ಇಂದು ಮನೆಗೂ ವ್ಯಾಪಿಸಿದೆ.

ಅಧಿಕಾರಸ್ಥರ ಅಸಡ್ಡೆಗೆ ಭಾರತದಲ್ಲೂ ಕೊರೋನಾ ಸುಮಾರು 50 ಜನರನ್ನು ಬಲಿ ಪಡೆದಿದೆ. ಮೊದಲ ಕೊರೋನಾ ಸಾವು ಕರ್ನಾಟಕದಲ್ಲೇ ದಾಖಲಾಗಿತ್ತು ಎಂಬುದು ಉಲ್ಲೇಖಾರ್ಹ. ಇನ್ನೂ ಸುಮಾರು 2000ಕ್ಕೂ ಹೆಚ್ಚು ಜನರಿಗೆ ಈ ಸೋಂಕು ಹರಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಘೋಷಿಸಲಾದ ಲಾಕ್ಡೌನ್ ನಡುವೆಯೂ ದೇಶದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ ಎಂದರೆ ಪರಿಸ್ಥಿತಿಯನ್ನು ಊಹಿಸಬಹುದು.
ಇಂತಹ ಸಂದರ್ಭದಲ್ಲಿ ಆಡಳಿತರೂಢ ಪಕ್ಷದವರು ತುಸು ಹೆಚ್ಚೇ ಎಂಬಂತೆ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮ ರಾಜಕೀಯವನ್ನು ಬದಿಗಿಟ್ಟು ಜನರನ್ನು ಈ ಮಹಾಮಾರಿಯಿಂದ ಕಾಪಾಡಬೇಕಾದ ತುರ್ತು ಅಗತ್ಯವಿದೆ. ಆದರೆ, ಜನ ಜೀವ ಭಯದಲ್ಲಿ ದಿನದೂಡುತ್ತಿರುವ ಇಂತಹ ಪ್ರಕ್ಷುಬ್ಧ ಪರಿಸ್ಥಿತಿಯಲ್ಲೂ ರಾಜ್ಯದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಇಬ್ಬರು ಸಚಿವರುಗಳ ತಮ್ಮ ಸ್ವ ಪ್ರತಿಷ್ಠೆಗಾಗಿ ಬೀದಿಕಾಳಗಕ್ಕಿಳಿದಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಅಪಕ್ವತೆಯನ್ನು ಬಟಾಬಯಲು ಮಾಡಿದ್ದಾರೆ.

ಶ್ರೀರಾಮುಲು v/s ಸುಧಾಕರ್ ಅಧಿಕಾರದ ಕಿತ್ತಾಟ

ಮಾರ್ಚ್ ಮೊದಲ ವಾರದವರೆಗೆ ರಾಜ್ಯದಲ್ಲಿ ಎಲ್ಲವೂ ಸರಿಯಾಗೇ ಇತ್ತು. ಚೀನಾ, ಸ್ಪೈನ್ ಇಟಲಿಯಲ್ಲಿ ಸಾಲು ಸಾಲು ಜನರ ಹೆಣ ಬೀಳಿಸಿದ್ದ ಕೊರೋನಾ ಭಾರತದಲ್ಲಿ ಆಗಿನ್ನು ತನ್ನ ಖಾತೆಯನ್ನು ತೆರೆದಿರಲಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರ ತಣ್ಣಗೇ ಇತ್ತು. ಆರೋಗ್ಯ ಸಚಿವ ಶ್ರೀರಾಮುಲು ಸಹ ತನ್ನ ಮಗಳ ಮದುವೆಯಲ್ಲಿ ತಲ್ಲೀನರಾಗಿದ್ದರು.

ಆದರೆ, ಮಾರ್ಚ್ 12 ರಂದು ಕಲಬುರ್ಗಿಯಲ್ಲಿ 76 ವರ್ಷದ ವೃದ್ಧ ಕೊರೋನಾಗೆ ದೇಶದಲ್ಲೇ ಮೊದಲ ವ್ಯಕ್ತಿಯಾಗಿ ಸಾವಿಗೀಡಾಗುತ್ತಿದ್ದಂತೆ ರಾಜ್ಯ ಮಾತ್ರವಲ್ಲ ಇಡೀ ದೇಶ ಎಚ್ಚೆತ್ತಿತ್ತು. ಆಗಿನ್ನೂ ನಿದ್ದೆಯಿಂದ ಎದ್ದಿದ್ದ ಎರಡೂ ಸರ್ಕಾರಗಳು ಕೊರೋನಾ ಹರಡದಂತೆ ತಡೆಯಲು ನಾನಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದವು. ಆದರೆ, ಆಗಲೂ ಸಹ ಸಚಿವ ಶ್ರೀರಾಮುಲು ಮಾತ್ರ ಇನ್ನೂ ಎಚ್ಚೆತ್ತಿರಲಿಲ್ಲ.

ಮಗಳ ಮದುವೆ ಮೂಡ್‌ನಲ್ಲೇ ಇದ್ದ ಆರೋಗ್ಯ ಸಚಿವ ಶ್ರೀರಾಮುಲು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತಮ್ಮ ಮನೆಗೆ ಕರೆದು ಕೆಲ ಸಭೆ ನಡೆಸಿ ಸೂಚನೆ ನೀಡುವ ಗಿಮಿಕ್ ಮಾಡಿದರಾದರೂ ಸರಿಯಾದ ಅಂಕಿಅಂಶಗಳಿಲ್ಲದೆ ಸುದ್ದಿಗೋಷ್ಠಿಗಳಲ್ಲಿ ಪೇಚಿಗೆ ಸಿಲುಕಿ ಆಡಳಿತ ಸರ್ಕಾರವನ್ನೂ ಮುಜುಗರಕ್ಕೆ ಒಳಪಡಿಸಿದ್ದ ಘಟನೆಗಳು ನಡೆದಿದ್ದವು. ಅಲ್ಲದೆ, ಗಂಭೀರ ವಿಚಾರದ ಕುರಿತ ಶ್ರೀರಾಮುಲು ಅವರ ಈ ಮಟ್ಟದ ಅಸಡ್ಡೆ ಸ್ವತಃ ಸಿಎಂ ಯಡಿಯೂರಪ್ಪ ಅವರ ಕೆಂಗಣ್ಣಿಗೂ ಗುರಿಯಾಗಿತ್ತು.

ಆದರೆ, ಇಂತಹದ್ದೇ ಸಂದರ್ಭಕ್ಕೆ ಕಾದಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ|ಕೆ. ಸುಧಾಕರ್ ಸಚಿವ ಶ್ರೀರಾಮುಲು ಅವರ ಅನುಪಸ್ಥಿತಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರದಲ್ಲಿ ತನ್ನ ಮೂಗು ತೂರಿಸಿದ್ದರು. ಅಷ್ಟೇ ಅಲ್ಲ ರಾಜ್ಯದ ಉದ್ದಗಲಕ್ಕೂ ಓಡಾಡುವ ಮೂಲಕ ತಾನೇ ಆರೋಗ್ಯ ಸಚಿವ ಎಂಬಂತೆ ಮಾಧ್ಯಮಗಳ ಎದುರು ಸಾಕಷ್ಟು ಸ್ಕೋಪ್ ಸಹ ತೆಗೆದುಕೊಂಡಿದ್ದರು. ಈ ಘಟನೆ ಇದೀಗ ಇಬ್ಬರು ಸಚಿವರ ಪ್ರತಿಷ್ಠೆಗೆ ಕಾರಣವಾಗಿದೆ.

ಬಡ್ತಿ ಪಡೆದ ಕೆ. ಸುಧಾಕರ್

ಆಪರೇಷನ್ ಕಮಲದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಮೂಲಕ ಮೊದಲ ಬಾರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಪಡೆದಿದ್ದ ಡಾ|ಕೆ. ಸುಧಾಕರ್ ಅವರಿಗೆ ಕೊರೋನಾ ಕುರಿತ ಶ್ರೀರಾಮಲು ಅವರ ಅಸಡ್ಡೆ ಲಾಭವಾಯಿತು ಮತ್ತು ಜನರ-ಮಾಧ್ಯಮದ ಎದುರು ಒಳ್ಳೆಯ ಹೆಸರು ಗಳಿಸಲೂ ಅನುಕೂಲವಾಯಿತು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದಂತೆ ರಾಜ್ಯದ ಉದ್ದಗಲಕ್ಕೂ ಓಡಾಡಿದ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಎಲ್ಲಾ ಜಿಲ್ಲೆಗಳಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು ಅಲ್ಲದೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲು ಆರಂಭಿಸಿದರು. ಪ್ರತಿದಿನ ಸಂಜೆ ಪತ್ರಿಕಾಗೋಷ್ಠಿ ನಡೆಸಲು ಮುಂದಾದರು. ಒಂದರ್ಥದಲ್ಲಿ ತಾವೇ ಆರೋಗ್ಯ ಇಲಾಖೆ ಸಚಿವ ಎಂಬಂತೆ ಬಿಂಬಿತವಾಗಲಾರಂಭಿಸಿದರು.

ಸಚಿವ ಸುಧಾಕರ್ ಅವರ ಕೆಲಸ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೂ ಬಂದು ಮೆಚ್ಚುಗೆಗೂ ಪಾತ್ರವಾಗಿತ್ತು. ಮಾಧ್ಯಮಗಳೂ ಸಹ ಸುಧಾಕರ್ ಕೆಲಸಕ್ಕೆ ಮೆಚ್ಚುಗೆಯನ್ನು ತೋರಿದ್ದವು. ಇಷ್ಟು ಸಾಕಿತ್ತು ಶ್ರೀರಾಮುಲು ಕಣ್ಣು ಕೆಂಪಾಗಿಸಲು.

ಕೊರೋನಾ ಟಾಸ್ಕ್ ಫೋರ್ಸ್‌ ಬಯಲು ಮಾಡಿತು ಇವರ ಒಣ ಜಗಳ

ಕೊರೋನಾ ವಿಚಾರದಲ್ಲಿ ಸಚಿವ ಸುಧಾಕರ್ ಅವರ ಕೆಲಸಕ್ಕೆ ಮಣೆ ಹಾಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಇಲಾಖೆಯಲ್ಲಿ ಅವರಿಗೂ ಅಧಿಕಾರವನ್ನು ಹಂಚಿಕೆ ಮಾಡಿದ್ದರು. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ರಚಿಸಲಾಗಿದ್ದ “ಕೊರೋನಾ ಟಾಸ್ಕ್ ಫೋರ್ಸ್‌” ಜವಾಬ್ದಾರಿಯನ್ನು ಸುಧಾಕರ್‌ಗೆ ನೀಡಲಾಯಿತು. ಟಾಸ್ಕ್ ಫೋರ್ಸ್‌ ಬೆಂಗಳೂರು ಜವಾಬ್ದಾರಿಯನ್ನು ಸುಧಾಕರ್‌ಗೂ ಜಿಲ್ಲೆಗಳ ಜವಾಬ್ದಾರಿಯನ್ನು ಶ್ರೀರಾಮುಲುಗೂ ಹಂಚಿಕೆ ಮಾಡಲಾಗಿತ್ತು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಕೊರೋನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಲ್ಲಿ ಸರಿ ಸಮಾನವಾಗಿ ಅಧಿಕಾರ ಹಂಚಿದ್ದಕ್ಕೆ ರಾಮುಲು ಸಿಎಂ ಬಿಎಸ್‌ವೈ ಬಳಿ ಗರಂ ಆಗಿದ್ದರು. ಸುಧಾಕರ್‌ಗೆ ನನ್ನ ಇಲಾಖೆಯಲ್ಲಿ ಸರಿಸಮಾನ ಅಧಿಕಾರ ನೀಡಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಹೀಗಾಗಿ ಟಾಸ್ಕ್ ಫೋರ್ಸ್‌ ಕುರಿತ ಆದೇಶವನ್ನು ಮಾರ್ಪಾಡು ಮಾಡುವಂತೆ ಸಿಎಂಗೆ ಶ್ರೀರಾಮುಲು ಒತ್ತಡ ಹಾಕಿದ್ದರು.

ಮತ್ತೊಂದೆಡೆ ಈ ಕುರಿತು ಮಾಧ್ಯಮಗಳಿಗೆ ಬಹಿರಂಗವಾಗಿಯೇ ಪ್ರತಿಕ್ರಿಯೆ ನೀಡಿದ್ದ ಡಾ| ಸುಧಾಕರ್, “ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಟಾಸ್ಕ್ ಫೋರ್ಸ್‌ ರಚಿಸಲಾಗಿದೆ. ಬೆಂಗಳೂರಿನ ಜವಾಬ್ದಾರಿಯನ್ನು ನನಗೆ ಹಾಗೂ ಇತರೆ ಜಿಲ್ಲೆಗಳ ಜವಾಬ್ದಾರಿಯನ್ನು ಶ್ರೀರಾಮುಲು ಅವರಿಗೆ ವಹಿಸಿ ಸಿಎಂ ಆದೇಶಿಸಿದ್ದಾರೆ.
ಆದರೆ, ಟಾಸ್ಕ್ ಫೋರ್ಸ್ ನಿರ್ವಹಣೆ ಎಂಬುದು ಜವಾಬ್ದಾರಿಯುತ ಕೆಲಸವಾಗಿದ್ದು, ಇದನ್ನು ಒಬ್ಬರೇ ಮಾನಿಟರ್ ಮಾಡುವ ಹಾಗಿರಬೇಕು. ಯಾರಿಗಾದ್ರು ಒಬ್ಬರಿಗೆ ಜವಾಬ್ದಾರಿ ಇದ್ದರೆ ಅವರು ಉತ್ತರದಾಯಿತ್ವರಾಗಬೇಕು. ಜವಾಬ್ದಾರಿಗಳು ಹರಿದು ಹಂಚಿ ಹೋಗುವುದರಿಂದ ಗೊಂದಲಗಳೇ ಅಧಿಕ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಇಡೀ ಟಾಸ್ಕ್ ಫೋರ್ಸ್‌ ಅಧಿಕಾರವನ್ನು ತನಗೇ ನೀಡಬೇಕು ಎಂಬಂತೆ ವರ್ತಿಸತೊಡಗಿದರು.

ಇದೀಗ ಈ ಟಾಸ್ಕ್ ಫೋರ್ಸ್‌ ರಾಜ್ಯದಲ್ಲಿ ನಿರ್ವಹಿಸುತ್ತಿರುವ ಕೆಲಸ ಏನು? ಸೋಂಕು ಹರಡದಂತೆ ತಡೆಯುವಲ್ಲಿ ಈ ಫೋರ್ಸ್ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿದೆ ಎಂಬ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ. ಅಲ್ಲದೆ, ಕೆಲಸ ಮಾಡುವ ವಿಚಾರದಲ್ಲಿ ಈ ಇಬ್ಬರೂ ಸಚಿವರ ನಡುವೆ ಯಾವುದೇ ತಾಳ ಮೇಳ ಇದ್ದಂತೆಯೂ ಕಾಣಿಸುತ್ತಿಲ್ಲ. ಆದರೆ, ಪಕ್ಷದಲ್ಲಿ ಹಿರಿಯನಾದ ತನನ್ನು ವಲಸೆ ಸಚಿವ ಸುಧಾಕರ್ ಸೈಡ್‌ಲೈನ್ ಮಾಡಿರುವ ಸಿಟ್ಟು ರಾಮುಲು ಅವರ ವರ್ತನೆಯಲ್ಲಿ ಎದ್ದು ಕಾಣಿಸುತ್ತಿದೆ.

ಈ ನಡುವೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಳ್ಳುವ ಜವಾಬ್ದಾರಿಯನ್ನೂ ಸಹ ರಾಜ್ಯ ಸರ್ಕಾರ ಡಾ|ಕೆ. ಸುಧಾಕರ್ ಅವರಿಗೇ ನೀಡಿದೆ ಎನ್ನಲಾಗುತ್ತಿದೆ. ಒಟ್ಟಾರೆ ಈ ಎಲ್ಲಾ ಪ್ರಸಂಗಗಳನ್ನೂ ಬಿಜೆಪಿ ನಾಯಕರ ಒಣ ಪ್ರತಿಷ್ಠೆಯ ಕಿತ್ತಾಟವನ್ನು ಬಟಾಬಯಲು ಮಾಡಿದೆ.

ಒಂದೆಡೆ ಕೊರೋನಾ ಒಂದೊಂದೇ ದೇಶಗಳನ್ನು ಅಪೋಷನ ತೆಗೆದುಕೊಳ್ಳುತ್ತಿದೆ. ವಿಶ್ವದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಹೊಂದಿರುವ ಅಮೆರಿಕದಂತಹಾ ಅಮೆರಿಕಾ ಸಹ ಕೊರೋನಾ ಎದುರು ಮಂಡಿಯೂರಿ ಕುಳಿತಿದೆ. ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗ ನಮ್ಮದೇ ರಾಜ್ಯದಲ್ಲಿನ ಇಬ್ಬರು ಸಚಿವರುಗಳು ಅಧಿಕಾರಕ್ಕಾಗಿ ಹೀಗೆ ಕಿತ್ತಾಟ ನಡೆಸುತ್ತಿರುವುದು ವಿಪರ್ಯಾಸವೇ ಸರಿ. ಇಷ್ಟಕ್ಕೂ ಇದು ಅಧಿಕಾರ ಮುಖ್ಯವೇ? ಅಥವಾ ಜೀವ ಮುಖ್ಯವೇ? ಎಂದು ಯೋಚಿಸಬೇಕಾದ ಸಂದಿಗ್ಧ ಕಾಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...