Homeಕರ್ನಾಟಕಬಿಜೆಪಿಯೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಕಾಂಗ್ರೆಸ್ ಮಾದಿಗ ನಾಯಕರಿಗೆ ಸುಧಾಮ್‌ ದಾಸ್‌ ಮನವಿ

ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಕಾಂಗ್ರೆಸ್ ಮಾದಿಗ ನಾಯಕರಿಗೆ ಸುಧಾಮ್‌ ದಾಸ್‌ ಮನವಿ

- Advertisement -
- Advertisement -

ಒಳ ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಎಡಗೈ (ಮಾದಿಗ) ನಾಯಕರಿಗೆ ವಿಧಾನ ಪರಿಷತ್ ಸದಸ್ಯ ಹೆಚ್‌.ಪಿ. ಸುಧಾಮ್‌ ದಾಸ್‌ ಮನವಿ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯೂಎಸ್‌) ಮೀಸಲಾತಿ ಸಂಬಂಧ ಸಂವಿಧಾನ ತಿದ್ದುಪಡಿಗಾಗಿ ಸರ್ಜಿಕಲ್‌ ಸ್ಟ್ರೈಕ್‌ ಮಾದರಿ ಕಾರ್ಯಾಚರಣೆ ನಡೆಸಿ, ಒಳಮೀಸಲಾತಿ ಕುರಿತ ತಿದ್ದುಪಡಿಯನ್ನು ಅಲಕ್ಷಿಸುವ ಮೂಲಕ ಪರಿಶಿಷ್ಟ ಸಮುದಾಯಕ್ಕೆ ದ್ರೋಹ ಬಗೆದಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ)  ಅಂತರ ಕಾಯ್ದುಕೊಳ್ಳಲು ಎಡಗೈ ಸಮುದಾಯದ ಪ್ರತಿನಿಧಿಗಳಿಗೆ ಮನವಿ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಪರಿಶಿಷ್ಟರ ಒಳಮೀಸಲಾತಿ ಕುರಿತ ಸರ್ಕಾರದ ದಿನಾ೦ಕ:25.08.2025ರ ಅಧಿಸೂಚನೆ ಮೂಲಕ ಎಡಗೈ ಸಮುದಾಯದ ಮೂರೂವರೆ ದಶಕದ ಹೋರಾಟಕ್ಕೆ ಜಯ ಒದಗಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಾಯಕತ್ವದ ಸರ್ಕಾರಕ್ಕೆ ಸಮುದಾಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಈ ಹೋರಾಟದ ಫಲವಾಗಿ ದೊರಕಿರುವ ಮೀಸಲಾತಿಯ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಮುದಾಯ ಸದಸ್ಯರೆಲ್ಲರಿಗೂ ಸೂಕ್ತ ಮಾರ್ಗದರ್ಶನ ಒದಗಿಸುವ ಮಹತ್ವದ ಜವಾಬ್ದಾರಿ ಈ ಹೋರಾಟದ ಪ್ರತಿಯೊಂದು ಹಂತದಲ್ಲಿಯೂ ಪ್ರಮುಖ ಪಾತ್ರ ವಹಿಸಿರುವ ಮುಖಂಡರುಗಳ ಹೆಗಲ ಮೇಲಿದೆ. ಈ ಜವಾಬ್ದಾರಿ ನಿರ್ವಹಿಸಲು ತತ್‌ಕ್ಷಣವೇ ಕಾರ್ಯಪ್ರವೃತ್ತರಾಗಬೇಕಾದ ಅವಶ್ಯಕತೆ ಇರುವ ಕಾರಣ ಸಮುದಾಯದ ಪ್ರಮುಖ ಮುಖಂಡರುಗಳು, ವಿಷಯ ತಜ್ಞರು ಹಾಗೂ ವಿಶ್ವವಿದ್ಯಾನಿಲಯಗಳ ಸಮುದಾಯ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗೆ ಈ ಜವಾಬ್ದಾರಿ ಹೊರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ವಿವರಿಸಿದ್ದಾರೆ.

“ಇದೇ ಸಂದರ್ಭದಲ್ಲಿ ಸಮುದಾಯದ ಎಲ್ಲ ಪ್ರತಿನಿಧಿಗಳು ಅದರಲ್ಲಿಯೂ ಪ್ರಮುಖವಾಗಿ ಕಾಂಗ್ರೆಸ್‌ ಪಕ್ಷದೊಂದಿಗೆ ಗುರುತಿಸಿಕೊಂಡಿರುವವರು ಕೇವಲ ಬಿಜೆಪಿ ಪಕ್ಷದ ಪ್ರತಿನಿದಿಗಳೊಂದಿಗೆ ಅಂತರ ಕಾಯ್ದುಕೊಳ್ಳುವುದಷ್ಟೇ ಅಲ್ಲದೇ, ರಾಜಕೀಯ ಲಾಭಕ್ಕಾಗಿ ರಾಜ್ಯದಲ್ಲಿ ಪರಿಶಿಷ್ಟ ಸಮುದಾಯವನ್ನು ಒಡೆದು ಎಡಗೈ ಸಮುದಾಯದ ಬೆಂಬಲ ಗಿಟ್ಟಿಸಿ ಆ ಸಮುದಾಯಕ್ಕೆ ಬಗೆದ ದ್ರೋಹ ಕುರಿತಂತೆ ಎಡಗೈ ಸಮುದಾಯವನ್ನು ಜಾಗೃತಗೊಳಿಸಬೇಕಾದ ಅವಶ್ಯಕತೆ ಇದೆ” ಎಂದು ಸುಧಾಮ ದಾಸ್ ಕಿವಿಮಾತು ಹೇಳಿದ್ದಾರೆ.

“ಜಸ್ಟಿಸ್‌ ಸಂತೋಷ್‌ ಹೆಗ್ಡೆ ನೇತೃತ್ವದ ಐವರು ನ್ಯಾಯಾಧೀಶರ ಪೀಠ ಇ.ಚೆನ್ನಯ್ಯ V/s ಆಂಧ್ರಪ್ರದೇಶ ಸರ್ಕಾರ ಪ್ರಕರಣದಲ್ಲಿ ಒಳಮೀಸಲಾತಿಗೆ ದೊಡ್ಡ ತಡೆಗೋಡೆ ಒಡ್ಡಿತ್ತು. ಇದರ ನಿವಾರಣೆಗಾಗಿ ಮಾರ್ಗೋಪಾಯ ಒದಗಿಸುವ ಸಲುವಾಗಿ ಸೃಷ್ಟಿಯಾಗಿದ್ದ ಜಸ್ಟಿಸ್‌ ಉಷಾ ಮೆಹ್ರಾ ಆಯೋಗವು ಓಳಮೀಸಲಾತಿ ಕುರಿತ ಕಾನೂನು ಅಡಚಣೆ ನಿವಾರಣೆಗೆ ಎರಡು ಮಾರ್ಗೋಪಾಯಗಳನ್ನು ತನ್ನ ವರದಿಯಲ್ಲಿ ಒದಗಿಸಿತ್ತು. ಮೊದಲ ಆಯ್ಕೆಯೆಂದರೆ ಒಳಮೀಸಲಾತಿ ಅಳವಡಿಕೆಗೆ ಸಂವಿಧಾನ ತಿದ್ದುಪಡಿ ಅಥವಾ ಎರಡನೇ ಆಯ್ಕೆ ಏಳು ಸದಸ್ಯರ ಸಂವಿಧಾನಿಕ ಪೀಠದ ಮೂಲಕ ಒಳಮೀಸಲಾತಿ ಪರವಾದ ತೀರ್ಪು ಪಡೆಯಲು ಪ್ರಯತ್ನಿಸುವುದು.  2008ನೇ ಇಸವಿಯ ಆಯೋಗವು, ಅಂದಿನ ಯುಪಿಎ ಸರ್ಕಾರದ ಸಮಾಜಿಕ ನ್ಯಾಯ ಖಾತೆಯ ಸಚಿವೆ ಮೀರಾಕುಮಾರ್‌ ರವರಿಗೆ ಈ ವರದಿ ಸಲ್ಲಿಸಿದ್ದರೂ ಅಂದಿನ ಸರ್ಕಾರಕ್ಕೆ ಸಾಂವಿಧಾನ ತಿದ್ದುಪಡಿಗೆ ಅವಶ್ಯವಿದ್ದ ಸದಸ್ಯರ ಬೆ೦ಬಲ ಉಭಯ ಸದನದಲ್ಲಿರದ ಕಾರಣ ಈ ಆಯ್ಕೆ ಕಾರ್ಯರೂಪಕ್ಕೆ ಬರಲಿಲ್ಲ” ಎಂದು ಹೇಳಿದ್ದಾರೆ.

“ಆದರೆ, 2014ರಲ್ಲಿ ಬೃಹತ್‌ ಬೆಂಬಲದೊಂದಿಗೆ ಅಧಿಕಾರಕ್ಕೆ ಬ೦ದ ಬಿಜೆಪಿ ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮೂಲಕ ಮೀಸಲಾತಿ ಒದಗಿಸಲು ಪ್ರಾಮುಖ್ಯತೆ ನೀಡಿದ್ದು ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಟಮಾಡುತ್ತಿದ್ದ ಪರಿಶಿಷ್ಟರಿಗಲ್ಲ. ಬದಲಾಗಿ ಮೀಸಲಾತಿಗಾಗಿ ಒಂದೇ ಒಂದು ಅರ್ಜಿ ಸಹಾ ಸಲ್ಲಿಸದ ಸಾಮಾಜಿಕವಾಗಿ ಮೇಲ್ಜರ್ಗಕ್ಕೆ ಸೇರಿದವರಿಗೆ ಇಡಬ್ಲ್ಯೂಎಸ್‌ ಕ್ಯಾಟಗರಿ ಎಂದು ಹೆಸರಿಸಿ ಜನವರಿ 08, 2019ರಂದು ಲೋಕಸಭಾ ಕಲಾಪ ಪಟ್ಟಿಯಲ್ಲೂ ಇರದ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿ, ಅದೇ ಮಾರ್ಗ, ಅದೇ ವೇಗದಲ್ಲಿ ಜನವರಿ 9ರಂದು ರಾಜ್ಯಸಭೆಯಲ್ಲಿಯೂ ಒಪ್ಪಿಗೆ ಪಡೆದು ಜನವರಿ 12ರ ಮಧ್ಯರಾತ್ರಿ ಅಂದಿನ ರಾಷ್ಟ್ರಪತಿ ಅಂಕಿತ ಪಡೆಯುವ ಮೂಲಕ ಸರ್ಜಿಕಲ್‌ ಸ್ಟ್ರೈಕ್‌ ಮಾದರಿ ಕಾರ್ಯಾಚರಣೆ ನಡೆಸಿ ತಿದ್ದುಪಡಿ ಜಾರಿಗೊಳಿಸಿತು. ಆದರೆ, ಅದೇ ಬಿಜೆಪಿ ಸರ್ಕಾರದ ಸಮಾಜಿಕ ನ್ಯಾಯ ಖಾತೆಯ ಸಚಿವಾರಾಗಿದ್ದ, ಇದೇ ರಾಜ್ಯದ ಎ. ನಾರಾಯಣಸ್ವಾಮಿಯವರು 2022ರಲ್ಲಿ ಸಂಸತ್‌ನಲ್ಲಿ ಪರಿಶಿಷ್ಟರ ಮೀಸಲಾತಿ ಕುರಿತು ಪ್ರಶ್ನೆಗೆ ನೀಡಿದ ಉತ್ತರದಲ್ಲಿ, ಸರ್ಕಾರದ ಮುಂದೆ ಒಳಮೀಸಲಾತಿ ಸ೦ಬ೦ಧ ತಿದ್ದುಪಡಿಗೆ ಯಾವುದೇ ಪ್ರಸ್ತಾವ ಇಲ್ಲ ಎ೦ಬ ಉತ್ತರ ನೀಡಿ, ಖುದ್ದು ಸಮಾಜಿಕ ನ್ಯಾಯ ಖಾತೆ ಸಚಿವರಾಗಿದ್ದರೂ ಒಳಮೀಸಲಾತಿ ಜಾರಿಗೆ ತಾವು ಯಾವುದೇ ಆಸಕ್ತಿ ವಹಿಸಿಲ್ಲ ಎ೦ಬುದನ್ನು ಅಧಿಕೃತವಾಗಿ ಜಾಹಿರುಪಡಿಸಿದ್ದರು” ಎಂದು ಅವರು ವಿವರಣೆ ನೀಡಿದ್ದಾರೆ.

“ಅಲ್ಲದೇ, ಬಿಜೆಪಿ ಪಕ್ಷದ ಸಂಸದ ಗೋವಿಂದ ಕಾರಜೋಳರೊಡನೆ ಸೇರಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬ೦ದ ದಿನದಿಂದ ಕಾಂಗ್ರೆಸ್‌ ಒಳಮೀಸಲಾತಿ ವಿರೋಧಿ ಎಂಬಂತೆ ತೀವ್ರತರದಲ್ಲಿ ರಾಜ್ಯವ್ಯಾಪಿ ಅಪಪ್ರಚಾರ ನಡೆಸಿದ್ದು ಇನ್ನೂ ಎಡಗೈ ಸಮುದಾಯದ ಮನದಲ್ಲಿ ಹಸಿರಾಗಿರುವಾಗಲೇ ಒಳಮೀಸಲಾತಿ ಜಾರಿಗೆ ನಮ್ಮ ಪಕ್ಷದ ಸರ್ಕಾರ ಅಧಿಸೂಚನೆ ಹೊರಡಿಸಿದ ನ೦ತರ ನಮ್ಮ ಸಚಿವರಾದ ಕೆ.ಹೆಚ್‌ ಮುನಿಯಪ್ಪ ಹಾಗೂ ಆರ್‌.ಬಿ. ತಿಮ್ಮಾಪುರ್‌ ರವರು ನಮ್ಮ ಸಮುದಾಯಕ್ಕೆ ದ್ರೋಹ ಬಗೆದ ಹಾಗೂ ಪರಿಶಿಷ್ಟರ ಒಳಮೀಸಲಾತಿ ಕುರಿತಂತೆ ನಮ್ಮ ಪಕ್ಷದ ವಿರುದ್ಧ ನಿರಂತರ ಅಪಪ್ರಚಾರ ಮಾಡಿರುವ ಎ.ನಾರಾಯಣಸ್ವಾಮಿ ಹಾಗೂ ಗೋವಿಂದ ಕಾರ ಜೋಳರೊಡನೆ ನಮ್ಮ ಸಮುದಾಯದ ಸದಸ್ಯರೊಂದಿಗೆ ಇದೇ ಆಗಸ್ಟ್‌ 31ರಂದು ಸಭೆ ಆಯೋಜಿಸಿರುವುದು ಸಾಮಾಜಿಕ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದ್ದು, ಸಮುದಾಯದ ಹಾಗೂ ಪಕ್ಷದ ಹಿತದೃಷ್ಟಿಯಿಂದ ಈ ಸಭೆಯಿಂದ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡಿರುವವರನ್ನು ದೂರವಿಡಲು ನಮ್ಮ ಪಕ್ಷದ ಸಚಿವರಿಗೆ ಈ ಮೂಲಕ ಆಗ್ರಹ ಪೂರ್ವಕ ಮನವಿ ಮಾಡುತ್ತಿದ್ದೇನೆ” ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....