Homeಮುಖಪುಟಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಬಿಂದಿ ಧರಿಸದ ಪತ್ರಕರ್ತೆಯೊಬ್ಬರನ್ನು ‘ವಿಧವೆ’ ಎಂದು ಹೇಳಿ ಅವಮಾನಿಸಿದ್ದ ಭಿಡೆ ವಿರುದ್ಧ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ

- Advertisement -
- Advertisement -

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಬಲಪಂಥೀಯ ನಾಯಕ, ಶಿವ ಪ್ರತಿಷ್ಠಾನ ಸಂಸ್ಥಾಪಕ ಸಂಭಾಜಿ ರಾವ್ ಭಿಡೆ ಅವರನ್ನು ಇನ್ಫೋಸಿಸ್‌ ಸಹ-ಸಂಸ್ಥಾಪಕಿ ಸುಧಾ ಮೂರ್ತಿ ಅವರು ಭೇಟಿಯಾಗಿದ್ದು, ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸುಧಾ ಮೂರ್ತಿ ಅವರು ಬಲಪಂಥೀಯ ನಾಯಕನ ಭೇಟಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಿಯಾಗಿದ್ದು, ಹಲವಾರು ಜನರು ಇದನ್ನು ವಿರೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಪತ್ರಕರ್ತೆ ಮಾನ್ಸಿ ದೇಶಪಾಂಡೆ ಅವರು, “ಕೇವಲ ಹೆಚ್ಚುವರಿ ಮಾಹಿತಿ. ಕೆಲ ದಿನಗಳ ಹಿಂದೆ ಮಹಿಳಾ ವರದಿಗಾರ್ತಿಯೊಬ್ಬರು ಬಿಂದಿ ಧರಿಸಿಲ್ಲ ಎಂಬ ಕಾರಣಕ್ಕೆ ಅವರೊಂದಿಗೆ ಮಾತನಾಡಲು ನಿರಾಕರಿಸಿದ್ದು ಇದೇ ವ್ಯಕ್ತಿ… ಮತ್ತು ಈ ಚಿತ್ರವೊಂದರಲ್ಲಿ ಸುಧಾ ಮೂರ್ತಿ ಅವರ ಪಾದಗಳನ್ನು ಸ್ಪರ್ಶಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಭಿಡೆ ನವೆಂಬರ್ 2 ರಂದು ಬಿಂದಿ ಧರಿಸದ ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ್ದು, ಇದರ ವಿರುದ್ಧ ಅವರಿಗೆ ಮಹಾರಾಷ್ಟ್ರ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮಹಿಳೆ ಭಾರತ ಮಾತೆಯನ್ನು ಹೋಲುತ್ತಾಳೆ, ಅವಳು ಬಿಂದಿ ಹಾಕದೆ “ವಿಧವೆ” ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಮಹಿಳಾ ಪತ್ರಕರ್ತರಿಗೆ ಅವಮಾನಿಸಿದ್ದರು.

ಇದನ್ನೂ ಓದಿ: 2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

ಇಬ್ಬರ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್, “ಅವರು ಬಿಂದಿ ಧರಿಸಿದ್ದರು ಎಂದು ನಂಬಿ. ಸುಧಾ ಮೂರ್ತಿಯಂತಹವರು ಭಿಡೆಯಂತಹ ಧರ್ಮಾಂಧರನ್ನು ಭೇಟಿಯಾಗುವುದರ ಮೂಲಕ ಅವರು ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದ್ದಾರೆ” ಎಂದು ಹೇಳಿದ್ದಾರೆ.

ಸಂಭಾಜಿ ರಾವ್ ಭಿಡೆ ಅವರು ಆರೆಸ್ಸೆಸ್ಸಿನ ಮಾಜಿ ನಾಯಕ ಕೂಡಾ ಆಗಿದ್ದು, 2018 ರಲ್ಲಿ ಸಂಭವಿಸಿದ ಭೀಮಾ ಕೋರೆಗಾಂವ್ ಘರ್ಷಣೆಯಲ್ಲಿ, ಕಲ್ಲು ತೂರಾಟದ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ಕೂಡಾ ದಾಖಲಾಗಿತ್ತು.

2018 ರಲ್ಲಿ, ಭಿಡೆ ಅವರು ತಮ್ಮ ತೋಟದಿಂದ ಮಾವಿನ ಹಣ್ಣುಗಳನ್ನು ತಿಂದ ನಂತರ ದಂಪತಿಗಳಿಗೆ ಮಕ್ಕಳು ಹುಟ್ಟಿದೆ ಎಂದು ಹೇಳಿ ಟೀಕೆಗಳನ್ನು ಎದುರಿಸಿದ್ದರು. ಅಲ್ಲದೆ, 2008 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಐತಿಹಾಸಿಕ ಚಲನಚಿತ್ರ ಜೋಧಾ ಅಕ್ಬರ್ ವಿರುದ್ಧದ ನಡೆದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದರು. ಜೊತೆಗೆ ಚಿತ್ರಮಂದಿರಗಳನ್ನು ದೋಚಿದ್ದಕ್ಕಾಗಿ ಮತ್ತು ಚಲನಚಿತ್ರದ ಪ್ರದರ್ಶನವನ್ನು ನಿಲ್ಲಿಸಿದ್ದಕ್ಕಾಗಿ ಭಿಡೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ; ಭೀಮಾ ಕೊರೆಗಾಂವ್ ಫೈಲ್: ಅಂಬೇಡ್ಕರ್ ಮನೆತನದ ಸದಸ್ಯನನ್ನೇ ಜೈಲಿಗಟ್ಟಿದ ಬಿಜೆಪಿ ಸರ್ಕಾರ

ಮತ್ತೊಬ್ಬ ಟ್ವಿಟ್ಟರ್ ಬಳಕೆದಾರರು, “ಒಂದು ಕಾಲದಲ್ಲಿ, ಅವರು ಟೆಲ್ಕೊದ ‘ಓನ್ಲಿ ಮೆನ್’ ನೀತಿಯನ್ನು ಪ್ರಶ್ನಿಸಿ, ಪುರುಷ ಪ್ರಾಬಲ್ಯದ ವಿರುದ್ಧ ನಿಂತಿದ್ದರು. ಈಗ ಬಿಂದಿ ಧರಿಸಲಿಲ್ಲ ಎಂದು ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ವ್ಯಕ್ತಿಯಿಂದ ಆಶೀರ್ವಾದ ತೆಗೆದುಕೊಳ್ಳುತ್ತಿದ್ದಾರೆ. ಎಂತಹ ಕುಸಿತ ಶ್ರೀಮತಿ ಸುಧಾ ಮೂರ್ತಿ (ವಾಟ್ ಎ ಫಾಲ್ ಮಿಸೆಸ್ ಸುಧಾ ಮೂರ್ತಿ)” ಎಂದು ಹೇಳಿದ್ದಾರೆ.

ಭಿಡೆ ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ನಂತರ, ಅವರು ಆರೆಸ್ಸೆಸ್ ಪ್ರಚಾರಕರಾಗಿ ಸೇರಿಕೊಂಡು, ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಎಂಬ ಸಂಘಟನೆಯನ್ನು ಸ್ಥಾಪಿಸಿದರು. ಶಿವ ಪ್ರತಿಷ್ಠಾನ ಮರಾಠ ದೊರೆ ಶಿವಾಜಿ ಅವರ ಮಗ ಸಂಭಾಜಿಯ ಜೀವನದ ಬೋಧನೆಗಳು ಮತ್ತು ಮಾಹಿತಿಯನ್ನು ಹರಡಲು ಸ್ಥಾಪಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಲಾಪುರ ಮತ್ತು ಸತಾರಾದಲ್ಲಿ, ವಿಶೇಷವಾಗಿ ಯುವಜನರ ನಡುವೆ ಭಿಡೆ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಮಹಿಳಾ ಮುಖ್ಯ ನ್ಯಾಯಮೂರ್ತಿ: ತನ್ನ ಪೂರ್ವಾಗ್ರಹಗಳಿಂದ ಬಿಡುಗಡೆ ಹೊಂದುವುದೇ ಸುಪ್ರೀಂಕೋರ್ಟ್?

ಇದನ್ನೂ ಓದಿ: ವ್ಯವಸ್ಥೆಯ ವಿರೋಧ, ಪ್ರಜಾಪ್ರಭುತ್ವವಾದಿ ಸಮಾನತೆಗೆ ಸಂಕೇತದಂತಿದ್ದ ನನ್ನ ಗುರು ಚಂಪಾ

ಈ ನಡುವೆ ಸುಧಾ ಮೂರ್ತಿ ಮತ್ತು ಭಿಡೆ ಭೇಟಿಯ ಬಗ್ಗೆ ಬಲಪಂಥೀಯರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...