Homeಮುಖಪುಟಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಬಿಂದಿ ಧರಿಸದ ಪತ್ರಕರ್ತೆಯೊಬ್ಬರನ್ನು ‘ವಿಧವೆ’ ಎಂದು ಹೇಳಿ ಅವಮಾನಿಸಿದ್ದ ಭಿಡೆ ವಿರುದ್ಧ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ

- Advertisement -
- Advertisement -

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಬಲಪಂಥೀಯ ನಾಯಕ, ಶಿವ ಪ್ರತಿಷ್ಠಾನ ಸಂಸ್ಥಾಪಕ ಸಂಭಾಜಿ ರಾವ್ ಭಿಡೆ ಅವರನ್ನು ಇನ್ಫೋಸಿಸ್‌ ಸಹ-ಸಂಸ್ಥಾಪಕಿ ಸುಧಾ ಮೂರ್ತಿ ಅವರು ಭೇಟಿಯಾಗಿದ್ದು, ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸುಧಾ ಮೂರ್ತಿ ಅವರು ಬಲಪಂಥೀಯ ನಾಯಕನ ಭೇಟಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಿಯಾಗಿದ್ದು, ಹಲವಾರು ಜನರು ಇದನ್ನು ವಿರೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಪತ್ರಕರ್ತೆ ಮಾನ್ಸಿ ದೇಶಪಾಂಡೆ ಅವರು, “ಕೇವಲ ಹೆಚ್ಚುವರಿ ಮಾಹಿತಿ. ಕೆಲ ದಿನಗಳ ಹಿಂದೆ ಮಹಿಳಾ ವರದಿಗಾರ್ತಿಯೊಬ್ಬರು ಬಿಂದಿ ಧರಿಸಿಲ್ಲ ಎಂಬ ಕಾರಣಕ್ಕೆ ಅವರೊಂದಿಗೆ ಮಾತನಾಡಲು ನಿರಾಕರಿಸಿದ್ದು ಇದೇ ವ್ಯಕ್ತಿ… ಮತ್ತು ಈ ಚಿತ್ರವೊಂದರಲ್ಲಿ ಸುಧಾ ಮೂರ್ತಿ ಅವರ ಪಾದಗಳನ್ನು ಸ್ಪರ್ಶಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಭಿಡೆ ನವೆಂಬರ್ 2 ರಂದು ಬಿಂದಿ ಧರಿಸದ ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ್ದು, ಇದರ ವಿರುದ್ಧ ಅವರಿಗೆ ಮಹಾರಾಷ್ಟ್ರ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮಹಿಳೆ ಭಾರತ ಮಾತೆಯನ್ನು ಹೋಲುತ್ತಾಳೆ, ಅವಳು ಬಿಂದಿ ಹಾಕದೆ “ವಿಧವೆ” ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಮಹಿಳಾ ಪತ್ರಕರ್ತರಿಗೆ ಅವಮಾನಿಸಿದ್ದರು.

ಇದನ್ನೂ ಓದಿ: 2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

ಇಬ್ಬರ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್, “ಅವರು ಬಿಂದಿ ಧರಿಸಿದ್ದರು ಎಂದು ನಂಬಿ. ಸುಧಾ ಮೂರ್ತಿಯಂತಹವರು ಭಿಡೆಯಂತಹ ಧರ್ಮಾಂಧರನ್ನು ಭೇಟಿಯಾಗುವುದರ ಮೂಲಕ ಅವರು ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದ್ದಾರೆ” ಎಂದು ಹೇಳಿದ್ದಾರೆ.

ಸಂಭಾಜಿ ರಾವ್ ಭಿಡೆ ಅವರು ಆರೆಸ್ಸೆಸ್ಸಿನ ಮಾಜಿ ನಾಯಕ ಕೂಡಾ ಆಗಿದ್ದು, 2018 ರಲ್ಲಿ ಸಂಭವಿಸಿದ ಭೀಮಾ ಕೋರೆಗಾಂವ್ ಘರ್ಷಣೆಯಲ್ಲಿ, ಕಲ್ಲು ತೂರಾಟದ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ಕೂಡಾ ದಾಖಲಾಗಿತ್ತು.

2018 ರಲ್ಲಿ, ಭಿಡೆ ಅವರು ತಮ್ಮ ತೋಟದಿಂದ ಮಾವಿನ ಹಣ್ಣುಗಳನ್ನು ತಿಂದ ನಂತರ ದಂಪತಿಗಳಿಗೆ ಮಕ್ಕಳು ಹುಟ್ಟಿದೆ ಎಂದು ಹೇಳಿ ಟೀಕೆಗಳನ್ನು ಎದುರಿಸಿದ್ದರು. ಅಲ್ಲದೆ, 2008 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಐತಿಹಾಸಿಕ ಚಲನಚಿತ್ರ ಜೋಧಾ ಅಕ್ಬರ್ ವಿರುದ್ಧದ ನಡೆದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದರು. ಜೊತೆಗೆ ಚಿತ್ರಮಂದಿರಗಳನ್ನು ದೋಚಿದ್ದಕ್ಕಾಗಿ ಮತ್ತು ಚಲನಚಿತ್ರದ ಪ್ರದರ್ಶನವನ್ನು ನಿಲ್ಲಿಸಿದ್ದಕ್ಕಾಗಿ ಭಿಡೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ; ಭೀಮಾ ಕೊರೆಗಾಂವ್ ಫೈಲ್: ಅಂಬೇಡ್ಕರ್ ಮನೆತನದ ಸದಸ್ಯನನ್ನೇ ಜೈಲಿಗಟ್ಟಿದ ಬಿಜೆಪಿ ಸರ್ಕಾರ

ಮತ್ತೊಬ್ಬ ಟ್ವಿಟ್ಟರ್ ಬಳಕೆದಾರರು, “ಒಂದು ಕಾಲದಲ್ಲಿ, ಅವರು ಟೆಲ್ಕೊದ ‘ಓನ್ಲಿ ಮೆನ್’ ನೀತಿಯನ್ನು ಪ್ರಶ್ನಿಸಿ, ಪುರುಷ ಪ್ರಾಬಲ್ಯದ ವಿರುದ್ಧ ನಿಂತಿದ್ದರು. ಈಗ ಬಿಂದಿ ಧರಿಸಲಿಲ್ಲ ಎಂದು ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ವ್ಯಕ್ತಿಯಿಂದ ಆಶೀರ್ವಾದ ತೆಗೆದುಕೊಳ್ಳುತ್ತಿದ್ದಾರೆ. ಎಂತಹ ಕುಸಿತ ಶ್ರೀಮತಿ ಸುಧಾ ಮೂರ್ತಿ (ವಾಟ್ ಎ ಫಾಲ್ ಮಿಸೆಸ್ ಸುಧಾ ಮೂರ್ತಿ)” ಎಂದು ಹೇಳಿದ್ದಾರೆ.

ಭಿಡೆ ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ನಂತರ, ಅವರು ಆರೆಸ್ಸೆಸ್ ಪ್ರಚಾರಕರಾಗಿ ಸೇರಿಕೊಂಡು, ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಎಂಬ ಸಂಘಟನೆಯನ್ನು ಸ್ಥಾಪಿಸಿದರು. ಶಿವ ಪ್ರತಿಷ್ಠಾನ ಮರಾಠ ದೊರೆ ಶಿವಾಜಿ ಅವರ ಮಗ ಸಂಭಾಜಿಯ ಜೀವನದ ಬೋಧನೆಗಳು ಮತ್ತು ಮಾಹಿತಿಯನ್ನು ಹರಡಲು ಸ್ಥಾಪಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಲಾಪುರ ಮತ್ತು ಸತಾರಾದಲ್ಲಿ, ವಿಶೇಷವಾಗಿ ಯುವಜನರ ನಡುವೆ ಭಿಡೆ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಮಹಿಳಾ ಮುಖ್ಯ ನ್ಯಾಯಮೂರ್ತಿ: ತನ್ನ ಪೂರ್ವಾಗ್ರಹಗಳಿಂದ ಬಿಡುಗಡೆ ಹೊಂದುವುದೇ ಸುಪ್ರೀಂಕೋರ್ಟ್?

ಇದನ್ನೂ ಓದಿ: ವ್ಯವಸ್ಥೆಯ ವಿರೋಧ, ಪ್ರಜಾಪ್ರಭುತ್ವವಾದಿ ಸಮಾನತೆಗೆ ಸಂಕೇತದಂತಿದ್ದ ನನ್ನ ಗುರು ಚಂಪಾ

ಈ ನಡುವೆ ಸುಧಾ ಮೂರ್ತಿ ಮತ್ತು ಭಿಡೆ ಭೇಟಿಯ ಬಗ್ಗೆ ಬಲಪಂಥೀಯರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

0
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ, ಶಾಸಕ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ನೋಟಿಸ್ ಜಾರಿ ಮಾಡಿದೆ...