Homeದಲಿತ್ ಫೈಲ್ಸ್‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

- Advertisement -
- Advertisement -

ಅಮೆರಿಕದ ಪ್ರಮುಖ ದಿನಪತ್ರಿಕೆಯಾದ ‘ದಿ ನ್ಯೂಯಾರ್ಕ್ ಟೈಮ್ಸ್’ ಇಂದು ಲೇಖನವೊಂದನ್ನು ಪ್ರಕಟಿಸಿದ್ದು, ದಲಿತ ಸಮುದಾಯಕ್ಕೆ ಸೇರಿದ ಪತ್ರಕರ್ತೆ ಮೀನಾ ಕೊತ್ವಾಲ್ ಅವರು ತಮಗಾದ ಜಾತಿ ತಾರತಮ್ಯಗಳನ್ನು ಹಂಚಿಕೊಂಡಿದ್ದಾರೆ.

ಕಟ್ಟಕಡೆಯ ಹಾಗೂ ಅಳಿವಿನಂಚಿನಲ್ಲಿರುವ ಸಮುದಾಯಗಳ ಕುರಿತು ‘ಮೂಕನಾಯಕ’ ಸುದ್ದಿವಾಹಿನಿಯನ್ನು ಆರಂಭಿಸಿರುವ ಅವರು, ‘ಬಿಬಿಸಿ ಇಂಡಿಯಾ ಮಾಧ್ಯಮದಲ್ಲಿ ಅನುಭವಿಸಿರುವ ಜಾತಿ ತಾರತಮ್ಯ’ದ ಕುರಿತು ಹೇಳಿಕೊಂಡಿದ್ದಾರೆ.

ಬಿಬಿಸಿ ಇಂಡಿಯಾದಲ್ಲಿ ಕೆಲಸದಲ್ಲಿದ್ದ ಸಂದರ್ಭದಲ್ಲಿ ಹೇಗೆ ಸಾರ್ವಜನಿಕ ಅವಮಾನ ಮತ್ತು ತಾರತಮ್ಯ ಎದುರಿಸಬೇಕಾಯಿತು ಎಂಬುದನ್ನು ಬಿಚ್ಚಿಟ್ಟಿದ್ದಾರೆ. 2017ರ ಸಂದರ್ಭದಲ್ಲಿ ಮೀನಾ ಅವರು ಬಿಬಿಸಿಯ ಹಿಂದಿ ಅವತರಣಿಕೆಯಲ್ಲಿ ಕೆಲಸ ಮಾಡುತ್ತಿದ್ದರು.

“ಸಹಿಗಳಿಗೆಯು ಹೆಚ್ಚು ಕಾಲ ಉಳಿಯಲಿಲ್ಲ. ಬಿಬಿಸಿಯಲ್ಲಿದ್ದ ಪ್ರಬಲ-ಜಾತಿ ಸಹೋದ್ಯೋಗಿ ನನ್ನ ಜಾತಿಯನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸುತ್ತಿದ್ದರು. ನಂತರ ಸಹೋದ್ಯೋಗಿಗಳ ಗುಂಪಿನಿಂದ ಹೊರಹಾಕಲಾಯಿತು” ಎಂದು ಮೀನಾ ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ತಾವು ನೀಡಿದ ದೂರುಗಳನ್ನು ತನ್ನ ಮೇಲಧಿಕಾರಿಗಳು ಕಡೆಗಣಿಸಿದರು ಎಂದು ಮೀನಾ ಬಹಿರಂಗಪಡಿಸಿದ್ದಾರೆ. “ಎರಡು ವರ್ಷಗಳ ನಂತರ ಲಂಡನ್‌ನಲ್ಲಿನ ಬಿಬಿಸಿ ಅಧಿಕಾರಿಗಳಿಗೆ ಅಧಿಕೃತ ದೂರನ್ನು ಸಲ್ಲಿಸಲಾಯಿತು. ನಂತರದಲ್ಲಿ ನನ್ನೊಂದಿಗೆ ಒಪ್ಪಂದವನ್ನು ಮುಂದುವರಿಸಲಾಗಲಿಲ್ಲ. ದೂರನ್ನೂ ವಜಾಗೊಳಿಸಲಾಗಿತು” ಎಂದು ಮೀನಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಕುರಿತು ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನ್ಯೂಯಾರ್ಕ್ ಟೈಮ್ಸ್‌ ಮಾಧ್ಯಮವು ಬಿಬಿಸಿಯನ್ನು ಸಂಪರ್ಕಿಸಿದ್ದು, ಬಿಬಿಸಿ ಪ್ರಕರಣದ ವಿವರಗಳನ್ನು ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ.

“ಸಿಬ್ಬಂದಿಯ ವೈಯಕ್ತಿಕ ವಿಷಯಗಳನ್ನು ಚರ್ಚಿಸುವುದಿಲ್ಲ ಮತ್ತು ಭಾರತೀಯ ಕಾನೂನನ್ನು ಸಂಪೂರ್ಣವಾಗಿ ಅನುಸಲಾಗುತ್ತಿದೆ” ಎಂದೂ ಬಿಬಿಸಿ ಸ್ಪಷ್ಪಪಡಿಸಿದೆ. ಬಿಬಿಸಿಯ ಲಂಡನ್ ಮೂಲದ ವಕ್ತಾರರು ನ್ಯೂಯಾರ್ಕ್ ಟೈಮ್ಸ್‌ಗೆ ಹೇಳಿಕೆ ನೀಡಿದ್ದು, “ನಮ್ಮೊಂದಿಗೆ ಕೆಲಸ ಮಾಡುವ ಜನರು ವೈವಿಧ್ಯತೆಯಿಂದ ಕೂಡಿರಬೇಕೆಂಬ ದೃಷ್ಟಿಯಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದ್ದೇವೆ” ಎಂದಿದ್ದಾರೆ.

“ಭಾರತದಲ್ಲಿ ದಲಿತರು ಮತ್ತು ಕಟ್ಟಕಡೆಯ ಎಲ್ಲ ಸಮುದಾಯಗಳ ಪ್ರಾತಿನಿಧ್ಯವು ಒಂದು ಸಮಸ್ಯೆಯಾಗಿಯೇ ಎಲ್ಲ ವೃತ್ತಿಗಳಲ್ಲೂ ಕಂಡುಬರುತ್ತಿದೆ. ಮಾಧ್ಯಮ ಕ್ಷೇತ್ರದಲ್ಲಂತೂ ಇದು ಅಕ್ಷರಶಃ ಸತ್ಯ. ಒಂದೇ ಹಿನ್ನೆಲೆಯವರನ್ನು ನೇಮಿಸಿಕೊಳ್ಳುವಲ್ಲಿ ಸವಲತ್ತುಳ್ಳ ಸಮುದಾಯಗಳ ಪ್ರಾಬಲ್ಯ ಹೆಚ್ಚಿದೆ. ದೇಶದ ಶೇ. 90ರಷ್ಟು ಮಾಧ್ಯಮಗಳಲ್ಲಿ ಪ್ರಬಲ ಜಾತಿಯವರೇ ತುಂಬಿಕೊಂಡಿದ್ದಾರೆ ಎಂದು ಸಮೀಕ್ಷೆಗಳು ಬಹಿರಂಗಪಡಿಸಿವೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಭಾರತೀಯ ಮಾಧ್ಯಮಗಳಲ್ಲಿ ದಲಿತ ಪತ್ರಕರ್ತರು, ಬರಹಗಾರರ ಅನುಪಸ್ಥಿತಿ ಕಂಡು ಬಂದಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹರೀಶ್ ವಾಂಖೆಡೆ (ಮಾಧ್ಯಮದಲ್ಲಿನ ಜಾತಿ ವ್ಯವಸ್ಥೆಯ ಕುರಿತ ಅಧ್ಯಯನಕಾರ) ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಮೀನಾ ಅವರನ್ನು ಸೇರಿದಂತೆ ಕಟ್ಟಕಡೆಯ ಸಮುದಾಯಗಳಿಗೆ ಸೇರಿದ ಒಂದು ಡಜನ್‌ಗಿಂತಲೂ ಹೆಚ್ಚು ಪತ್ರಕರ್ತರನ್ನು ಸಂದರ್ಶಿಸಲಾಗಿದ್ದು, ಸಹೋದ್ಯೋಗಿಗಳಿಂದ ಅನುಭವಿಸಿರುವ ಕಿರುಕುಳವನ್ನು ಅವರೆಲ್ಲ ಬಿಚ್ಚಿಟ್ಟಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ಹೇಳಿಕೊಂಡಿದೆ.

‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ವರದಿ

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.

ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...