Homeದಲಿತ್ ಫೈಲ್ಸ್‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

- Advertisement -
- Advertisement -

ಅಮೆರಿಕದ ಪ್ರಮುಖ ದಿನಪತ್ರಿಕೆಯಾದ ‘ದಿ ನ್ಯೂಯಾರ್ಕ್ ಟೈಮ್ಸ್’ ಇಂದು ಲೇಖನವೊಂದನ್ನು ಪ್ರಕಟಿಸಿದ್ದು, ದಲಿತ ಸಮುದಾಯಕ್ಕೆ ಸೇರಿದ ಪತ್ರಕರ್ತೆ ಮೀನಾ ಕೊತ್ವಾಲ್ ಅವರು ತಮಗಾದ ಜಾತಿ ತಾರತಮ್ಯಗಳನ್ನು ಹಂಚಿಕೊಂಡಿದ್ದಾರೆ.

ಕಟ್ಟಕಡೆಯ ಹಾಗೂ ಅಳಿವಿನಂಚಿನಲ್ಲಿರುವ ಸಮುದಾಯಗಳ ಕುರಿತು ‘ಮೂಕನಾಯಕ’ ಸುದ್ದಿವಾಹಿನಿಯನ್ನು ಆರಂಭಿಸಿರುವ ಅವರು, ‘ಬಿಬಿಸಿ ಇಂಡಿಯಾ ಮಾಧ್ಯಮದಲ್ಲಿ ಅನುಭವಿಸಿರುವ ಜಾತಿ ತಾರತಮ್ಯ’ದ ಕುರಿತು ಹೇಳಿಕೊಂಡಿದ್ದಾರೆ.

ಬಿಬಿಸಿ ಇಂಡಿಯಾದಲ್ಲಿ ಕೆಲಸದಲ್ಲಿದ್ದ ಸಂದರ್ಭದಲ್ಲಿ ಹೇಗೆ ಸಾರ್ವಜನಿಕ ಅವಮಾನ ಮತ್ತು ತಾರತಮ್ಯ ಎದುರಿಸಬೇಕಾಯಿತು ಎಂಬುದನ್ನು ಬಿಚ್ಚಿಟ್ಟಿದ್ದಾರೆ. 2017ರ ಸಂದರ್ಭದಲ್ಲಿ ಮೀನಾ ಅವರು ಬಿಬಿಸಿಯ ಹಿಂದಿ ಅವತರಣಿಕೆಯಲ್ಲಿ ಕೆಲಸ ಮಾಡುತ್ತಿದ್ದರು.

“ಸಹಿಗಳಿಗೆಯು ಹೆಚ್ಚು ಕಾಲ ಉಳಿಯಲಿಲ್ಲ. ಬಿಬಿಸಿಯಲ್ಲಿದ್ದ ಪ್ರಬಲ-ಜಾತಿ ಸಹೋದ್ಯೋಗಿ ನನ್ನ ಜಾತಿಯನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸುತ್ತಿದ್ದರು. ನಂತರ ಸಹೋದ್ಯೋಗಿಗಳ ಗುಂಪಿನಿಂದ ಹೊರಹಾಕಲಾಯಿತು” ಎಂದು ಮೀನಾ ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ತಾವು ನೀಡಿದ ದೂರುಗಳನ್ನು ತನ್ನ ಮೇಲಧಿಕಾರಿಗಳು ಕಡೆಗಣಿಸಿದರು ಎಂದು ಮೀನಾ ಬಹಿರಂಗಪಡಿಸಿದ್ದಾರೆ. “ಎರಡು ವರ್ಷಗಳ ನಂತರ ಲಂಡನ್‌ನಲ್ಲಿನ ಬಿಬಿಸಿ ಅಧಿಕಾರಿಗಳಿಗೆ ಅಧಿಕೃತ ದೂರನ್ನು ಸಲ್ಲಿಸಲಾಯಿತು. ನಂತರದಲ್ಲಿ ನನ್ನೊಂದಿಗೆ ಒಪ್ಪಂದವನ್ನು ಮುಂದುವರಿಸಲಾಗಲಿಲ್ಲ. ದೂರನ್ನೂ ವಜಾಗೊಳಿಸಲಾಗಿತು” ಎಂದು ಮೀನಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಕುರಿತು ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನ್ಯೂಯಾರ್ಕ್ ಟೈಮ್ಸ್‌ ಮಾಧ್ಯಮವು ಬಿಬಿಸಿಯನ್ನು ಸಂಪರ್ಕಿಸಿದ್ದು, ಬಿಬಿಸಿ ಪ್ರಕರಣದ ವಿವರಗಳನ್ನು ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ.

“ಸಿಬ್ಬಂದಿಯ ವೈಯಕ್ತಿಕ ವಿಷಯಗಳನ್ನು ಚರ್ಚಿಸುವುದಿಲ್ಲ ಮತ್ತು ಭಾರತೀಯ ಕಾನೂನನ್ನು ಸಂಪೂರ್ಣವಾಗಿ ಅನುಸಲಾಗುತ್ತಿದೆ” ಎಂದೂ ಬಿಬಿಸಿ ಸ್ಪಷ್ಪಪಡಿಸಿದೆ. ಬಿಬಿಸಿಯ ಲಂಡನ್ ಮೂಲದ ವಕ್ತಾರರು ನ್ಯೂಯಾರ್ಕ್ ಟೈಮ್ಸ್‌ಗೆ ಹೇಳಿಕೆ ನೀಡಿದ್ದು, “ನಮ್ಮೊಂದಿಗೆ ಕೆಲಸ ಮಾಡುವ ಜನರು ವೈವಿಧ್ಯತೆಯಿಂದ ಕೂಡಿರಬೇಕೆಂಬ ದೃಷ್ಟಿಯಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದ್ದೇವೆ” ಎಂದಿದ್ದಾರೆ.

“ಭಾರತದಲ್ಲಿ ದಲಿತರು ಮತ್ತು ಕಟ್ಟಕಡೆಯ ಎಲ್ಲ ಸಮುದಾಯಗಳ ಪ್ರಾತಿನಿಧ್ಯವು ಒಂದು ಸಮಸ್ಯೆಯಾಗಿಯೇ ಎಲ್ಲ ವೃತ್ತಿಗಳಲ್ಲೂ ಕಂಡುಬರುತ್ತಿದೆ. ಮಾಧ್ಯಮ ಕ್ಷೇತ್ರದಲ್ಲಂತೂ ಇದು ಅಕ್ಷರಶಃ ಸತ್ಯ. ಒಂದೇ ಹಿನ್ನೆಲೆಯವರನ್ನು ನೇಮಿಸಿಕೊಳ್ಳುವಲ್ಲಿ ಸವಲತ್ತುಳ್ಳ ಸಮುದಾಯಗಳ ಪ್ರಾಬಲ್ಯ ಹೆಚ್ಚಿದೆ. ದೇಶದ ಶೇ. 90ರಷ್ಟು ಮಾಧ್ಯಮಗಳಲ್ಲಿ ಪ್ರಬಲ ಜಾತಿಯವರೇ ತುಂಬಿಕೊಂಡಿದ್ದಾರೆ ಎಂದು ಸಮೀಕ್ಷೆಗಳು ಬಹಿರಂಗಪಡಿಸಿವೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಭಾರತೀಯ ಮಾಧ್ಯಮಗಳಲ್ಲಿ ದಲಿತ ಪತ್ರಕರ್ತರು, ಬರಹಗಾರರ ಅನುಪಸ್ಥಿತಿ ಕಂಡು ಬಂದಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹರೀಶ್ ವಾಂಖೆಡೆ (ಮಾಧ್ಯಮದಲ್ಲಿನ ಜಾತಿ ವ್ಯವಸ್ಥೆಯ ಕುರಿತ ಅಧ್ಯಯನಕಾರ) ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಮೀನಾ ಅವರನ್ನು ಸೇರಿದಂತೆ ಕಟ್ಟಕಡೆಯ ಸಮುದಾಯಗಳಿಗೆ ಸೇರಿದ ಒಂದು ಡಜನ್‌ಗಿಂತಲೂ ಹೆಚ್ಚು ಪತ್ರಕರ್ತರನ್ನು ಸಂದರ್ಶಿಸಲಾಗಿದ್ದು, ಸಹೋದ್ಯೋಗಿಗಳಿಂದ ಅನುಭವಿಸಿರುವ ಕಿರುಕುಳವನ್ನು ಅವರೆಲ್ಲ ಬಿಚ್ಚಿಟ್ಟಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ಹೇಳಿಕೊಂಡಿದೆ.

‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ವರದಿ

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.

ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...