Homeದಲಿತ್ ಫೈಲ್ಸ್‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

- Advertisement -
- Advertisement -

ಅಮೆರಿಕದ ಪ್ರಮುಖ ದಿನಪತ್ರಿಕೆಯಾದ ‘ದಿ ನ್ಯೂಯಾರ್ಕ್ ಟೈಮ್ಸ್’ ಇಂದು ಲೇಖನವೊಂದನ್ನು ಪ್ರಕಟಿಸಿದ್ದು, ದಲಿತ ಸಮುದಾಯಕ್ಕೆ ಸೇರಿದ ಪತ್ರಕರ್ತೆ ಮೀನಾ ಕೊತ್ವಾಲ್ ಅವರು ತಮಗಾದ ಜಾತಿ ತಾರತಮ್ಯಗಳನ್ನು ಹಂಚಿಕೊಂಡಿದ್ದಾರೆ.

ಕಟ್ಟಕಡೆಯ ಹಾಗೂ ಅಳಿವಿನಂಚಿನಲ್ಲಿರುವ ಸಮುದಾಯಗಳ ಕುರಿತು ‘ಮೂಕನಾಯಕ’ ಸುದ್ದಿವಾಹಿನಿಯನ್ನು ಆರಂಭಿಸಿರುವ ಅವರು, ‘ಬಿಬಿಸಿ ಇಂಡಿಯಾ ಮಾಧ್ಯಮದಲ್ಲಿ ಅನುಭವಿಸಿರುವ ಜಾತಿ ತಾರತಮ್ಯ’ದ ಕುರಿತು ಹೇಳಿಕೊಂಡಿದ್ದಾರೆ.

ಬಿಬಿಸಿ ಇಂಡಿಯಾದಲ್ಲಿ ಕೆಲಸದಲ್ಲಿದ್ದ ಸಂದರ್ಭದಲ್ಲಿ ಹೇಗೆ ಸಾರ್ವಜನಿಕ ಅವಮಾನ ಮತ್ತು ತಾರತಮ್ಯ ಎದುರಿಸಬೇಕಾಯಿತು ಎಂಬುದನ್ನು ಬಿಚ್ಚಿಟ್ಟಿದ್ದಾರೆ. 2017ರ ಸಂದರ್ಭದಲ್ಲಿ ಮೀನಾ ಅವರು ಬಿಬಿಸಿಯ ಹಿಂದಿ ಅವತರಣಿಕೆಯಲ್ಲಿ ಕೆಲಸ ಮಾಡುತ್ತಿದ್ದರು.

“ಸಹಿಗಳಿಗೆಯು ಹೆಚ್ಚು ಕಾಲ ಉಳಿಯಲಿಲ್ಲ. ಬಿಬಿಸಿಯಲ್ಲಿದ್ದ ಪ್ರಬಲ-ಜಾತಿ ಸಹೋದ್ಯೋಗಿ ನನ್ನ ಜಾತಿಯನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸುತ್ತಿದ್ದರು. ನಂತರ ಸಹೋದ್ಯೋಗಿಗಳ ಗುಂಪಿನಿಂದ ಹೊರಹಾಕಲಾಯಿತು” ಎಂದು ಮೀನಾ ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ತಾವು ನೀಡಿದ ದೂರುಗಳನ್ನು ತನ್ನ ಮೇಲಧಿಕಾರಿಗಳು ಕಡೆಗಣಿಸಿದರು ಎಂದು ಮೀನಾ ಬಹಿರಂಗಪಡಿಸಿದ್ದಾರೆ. “ಎರಡು ವರ್ಷಗಳ ನಂತರ ಲಂಡನ್‌ನಲ್ಲಿನ ಬಿಬಿಸಿ ಅಧಿಕಾರಿಗಳಿಗೆ ಅಧಿಕೃತ ದೂರನ್ನು ಸಲ್ಲಿಸಲಾಯಿತು. ನಂತರದಲ್ಲಿ ನನ್ನೊಂದಿಗೆ ಒಪ್ಪಂದವನ್ನು ಮುಂದುವರಿಸಲಾಗಲಿಲ್ಲ. ದೂರನ್ನೂ ವಜಾಗೊಳಿಸಲಾಗಿತು” ಎಂದು ಮೀನಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಕುರಿತು ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನ್ಯೂಯಾರ್ಕ್ ಟೈಮ್ಸ್‌ ಮಾಧ್ಯಮವು ಬಿಬಿಸಿಯನ್ನು ಸಂಪರ್ಕಿಸಿದ್ದು, ಬಿಬಿಸಿ ಪ್ರಕರಣದ ವಿವರಗಳನ್ನು ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ.

“ಸಿಬ್ಬಂದಿಯ ವೈಯಕ್ತಿಕ ವಿಷಯಗಳನ್ನು ಚರ್ಚಿಸುವುದಿಲ್ಲ ಮತ್ತು ಭಾರತೀಯ ಕಾನೂನನ್ನು ಸಂಪೂರ್ಣವಾಗಿ ಅನುಸಲಾಗುತ್ತಿದೆ” ಎಂದೂ ಬಿಬಿಸಿ ಸ್ಪಷ್ಪಪಡಿಸಿದೆ. ಬಿಬಿಸಿಯ ಲಂಡನ್ ಮೂಲದ ವಕ್ತಾರರು ನ್ಯೂಯಾರ್ಕ್ ಟೈಮ್ಸ್‌ಗೆ ಹೇಳಿಕೆ ನೀಡಿದ್ದು, “ನಮ್ಮೊಂದಿಗೆ ಕೆಲಸ ಮಾಡುವ ಜನರು ವೈವಿಧ್ಯತೆಯಿಂದ ಕೂಡಿರಬೇಕೆಂಬ ದೃಷ್ಟಿಯಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದ್ದೇವೆ” ಎಂದಿದ್ದಾರೆ.

“ಭಾರತದಲ್ಲಿ ದಲಿತರು ಮತ್ತು ಕಟ್ಟಕಡೆಯ ಎಲ್ಲ ಸಮುದಾಯಗಳ ಪ್ರಾತಿನಿಧ್ಯವು ಒಂದು ಸಮಸ್ಯೆಯಾಗಿಯೇ ಎಲ್ಲ ವೃತ್ತಿಗಳಲ್ಲೂ ಕಂಡುಬರುತ್ತಿದೆ. ಮಾಧ್ಯಮ ಕ್ಷೇತ್ರದಲ್ಲಂತೂ ಇದು ಅಕ್ಷರಶಃ ಸತ್ಯ. ಒಂದೇ ಹಿನ್ನೆಲೆಯವರನ್ನು ನೇಮಿಸಿಕೊಳ್ಳುವಲ್ಲಿ ಸವಲತ್ತುಳ್ಳ ಸಮುದಾಯಗಳ ಪ್ರಾಬಲ್ಯ ಹೆಚ್ಚಿದೆ. ದೇಶದ ಶೇ. 90ರಷ್ಟು ಮಾಧ್ಯಮಗಳಲ್ಲಿ ಪ್ರಬಲ ಜಾತಿಯವರೇ ತುಂಬಿಕೊಂಡಿದ್ದಾರೆ ಎಂದು ಸಮೀಕ್ಷೆಗಳು ಬಹಿರಂಗಪಡಿಸಿವೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಭಾರತೀಯ ಮಾಧ್ಯಮಗಳಲ್ಲಿ ದಲಿತ ಪತ್ರಕರ್ತರು, ಬರಹಗಾರರ ಅನುಪಸ್ಥಿತಿ ಕಂಡು ಬಂದಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹರೀಶ್ ವಾಂಖೆಡೆ (ಮಾಧ್ಯಮದಲ್ಲಿನ ಜಾತಿ ವ್ಯವಸ್ಥೆಯ ಕುರಿತ ಅಧ್ಯಯನಕಾರ) ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಮೀನಾ ಅವರನ್ನು ಸೇರಿದಂತೆ ಕಟ್ಟಕಡೆಯ ಸಮುದಾಯಗಳಿಗೆ ಸೇರಿದ ಒಂದು ಡಜನ್‌ಗಿಂತಲೂ ಹೆಚ್ಚು ಪತ್ರಕರ್ತರನ್ನು ಸಂದರ್ಶಿಸಲಾಗಿದ್ದು, ಸಹೋದ್ಯೋಗಿಗಳಿಂದ ಅನುಭವಿಸಿರುವ ಕಿರುಕುಳವನ್ನು ಅವರೆಲ್ಲ ಬಿಚ್ಚಿಟ್ಟಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ಹೇಳಿಕೊಂಡಿದೆ.

‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ವರದಿ

“ನಮ್ಮ ಕಥೆಗಳನ್ನು ಯಾರು ಹೇಳುತ್ತಾರೆ ಎಂಬುದು ಮುಖ್ಯ: ಭಾರತೀಯ ಮಾಧ್ಯಮದಲ್ಲಿ ಅಂಚಿನಲ್ಲಿರುವ ಜಾತಿ ಗುಂಪುಗಳ ಪ್ರಾತಿನಿಧ್ಯ” ಎಂಬ ವಿಷಯದ ಕುರಿತು ಎರಡನೇ ಆವೃತ್ತಿಯ ವರದಿಯನ್ನು ‘ಆಕ್ಸ್‌ಫ್ಯಾಮ್ ಇಂಡಿಯಾ-ನ್ಯೂಸ್‌ಲಾಂಡ್ರಿ’ ಬಿಡುಗಡೆ ಮಾಡಿದ್ದು ಆತಂಕಕಾರಿ ಸಂಗತಿಗಳು ಹೊರಬಿದ್ದಿವೆ.

ಮುಖ್ಯವಾಹಿನಿ ಮುದ್ರಣ, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸುಮಾರು 90 ಪ್ರತಿಶತ ನಾಯಕತ್ವ ಸ್ಥಾನಗಳನ್ನು ಪರಿಶಿಷ್ಟ ಜಾತಿಯಿಲ್ಲದ ಸಾಮಾನ್ಯ ಜಾತಿ ಗುಂಪುಗಳು ಆಕ್ರಮಿಸಿಕೊಂಡಿವೆ ಎಂದು ವರದಿಯು ಬಹಿರಂಗಪಡಿಸಿದೆ.

ದಕ್ಷಿಣ ಏಷ್ಯಾದ ಅತಿದೊಡ್ಡ ಸುದ್ದಿ ಮಾಧ್ಯಮ ವೇದಿಕೆಯಾದ ‘ದಿ ಮೀಡಿಯಾ ರಂಬಲ್‌’ನಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ, “ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ 5 ಲೇಖನಗಳಲ್ಲಿ 3 ಲೇಖನಗಳನ್ನು ಸಾಮಾನ್ಯ ಜಾತಿ ಲೇಖಕರು ಬರೆದರೆ, ಕಟ್ಟಕಡೆಯ ಜಾತಿಗಳು (SC, ST ಅಥವಾ OBC) ಕೇವಲ 1 ಲೇಖನವನ್ನಷ್ಟೇ ಬರೆಯುತ್ತಿವೆ.”

ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು, ಸುದ್ದಿ ವೆಬ್‌ಸೈಟ್‌ಗಳು, ನಿಯತಕಾಲಿಕೆಗಳು ಸೇರಿದಂತೆ 121 ಸುದ್ದಿಮನೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. ಇವುಗಳ ನಾಯಕತ್ವ ಸ್ಥಾನಗಳಲ್ಲಿ (ಸಂಪಾದಕ-ಮುಖ್ಯ, ವ್ಯವಸ್ಥಾಪಕ ಸಂಪಾದಕ, ಕಾರ್ಯನಿರ್ವಾಹಕ ಸಂಪಾದಕ, ಬ್ಯೂರೋ ಮುಖ್ಯಸ್ಥ, ಇನ್‌ಪುಟ್/ಔಟ್‌ಪುಟ್ ಸಂಪಾದಕ) 106 ಸಂಸ್ಥೆಗಳು ಬಲಾಢ್ಯ ಜಾತಿಗಳಿಂದ ಆಕ್ರಮಿಸಿಕೊಂಡಿವೆ.

ಐದು ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳು, ಆರರಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಇವೆ. ನಾಲ್ಕು ಸಂಸ್ಥೆಗಳ ಸ್ಥಿತಿ ಗುರುತಿಸಲಾಗಿಲ್ಲ. ಡಿಬೇಟ್‌ ನಡೆಸುವವರ ಪೈಕಿ ಪ್ರತಿ ನಾಲ್ಕು ಆಂಕರ್‌ಗಳಲ್ಲಿ ಮೂವರು ಮೇಲ್ಜಾತಿಯವರು. ಹಿಂದಿ ಚಾನೆಲ್‌ಗಳ ಒಟ್ಟು 40 ಮತ್ತು ಇಂಗ್ಲಿಷ್ ಚಾನೆಲ್‌ಗಳ 47 ಆಂಕರ್‌ಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರೂ ದಲಿತ, ಆದಿವಾಸಿ ಅಥವಾ ಒಬಿಸಿ ಇಲ್ಲ.

“ಸುದ್ದಿ ವಾಹಿನಿಗಳು ತಮ್ಮ ಪ್ರೈಮ್‌ಟೈಮ್ ಚರ್ಚಾ ಕಾರ್ಯಕ್ರಮಗಳಲ್ಲಿ ಶೇಕಡಾ 70ರಷ್ಟು ಮೇಲ್ಜಾತಿಗಳ ಪ್ಯಾನೆಲಿಸ್ಟ್‌ಗಳನ್ನು ಹೊಂದಿರುತ್ತವೆ. ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗುವ ಒಟ್ಟು ಲೇಖನಗಳಲ್ಲಿ ದಲಿತರು ಮತ್ತು ಆದಿವಾಸಿಗಳು ಶೇಕಡಾ 5ಕ್ಕಿಂತ ಹೆಚ್ಚು ಬರೆಯುವುದಿಲ್ಲ. ಹಿಂದಿ ಪತ್ರಿಕೆಗಳು ಸ್ವಲ್ಪ ಉತ್ತಮವಾಗಿವೆ. ಸುಮಾರು 10 ಪ್ರತಿಶತದಷ್ಟು ದಲಿತ ಲೇಖಕರು ಬರೆಯುತ್ತಾರೆ” ಎಂಬುದನ್ನು ವರದಿ ಉಲ್ಲೇಖಿಸಿದೆ.

ಸುದ್ದಿ ವೆಬ್‌ಸೈಟ್‌ಗಳಲ್ಲಿ 72 ಪ್ರತಿಶತ ಲೇಖನಗಳನ್ನು ಮೇಲ್ಜಾತಿ ಜನರು ಬರೆದಿದ್ದಾರೆ. ಅಧ್ಯಯನಕ್ಕೆ ಒಳಪಡಿಸಲಾದ 12 ನಿಯತಕಾಲಿಕೆಗಳ ಕವರ್ ಪೇಜ್‌ನಲ್ಲಿ ಬಂದ 972 ಲೇಖನಗಳಲ್ಲಿ 10 ಮಾತ್ರ ಜಾತಿಗೆ ಸಂಬಂಧಿಸಿದ ವಿಷಯಗಳಾಗಿದ್ದವು.

ಆಕ್ಸ್‌ಫ್ಯಾಮ್ ಇಂಡಿಯಾದ ಸಿಇಒ ಅಮಿತಾಭ್ ಬೆಹರ್, “ಮೂರು ವರ್ಷಗಳಲ್ಲಿ ನಮ್ಮ ಎರಡನೇ ವರದಿಯನ್ನು ಬಿಡುಗಡೆ ಮಾಡಿದ್ದೇವೆ. ಭಾರತದಲ್ಲಿನ ಸುದ್ದಿಮನೆಗಳು ಕಟ್ಟಕಡೆಯ ಸಮುದಾಯಗಳನ್ನು ಒಳಗೊಳ್ಳುತ್ತಿಲ್ಲ ಎಂಬುದನ್ನು ವರದಿ ತೋರಿಸುತ್ತಲೇ ಇದೆ. ಈ ಎಲ್ಲಾ ವೇದಿಕೆಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಬಹುಜನರಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವಲ್ಲಿ ಮಾಧ್ಯಮ ಸಂಸ್ಥೆಗಳ ನಾಯಕರು ವಿಫಲರಾಗುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

ದೇಶದ ಮಾಧ್ಯಮಗಳು ಕೇವಲ ತನ್ನ ಸುದ್ದಿ ಪ್ರಸಾರವಷ್ಟೇ ಅಲ್ಲದೇ ನೇಮಕಾತಿ ಪದ್ಧತಿಯಲ್ಲೂ ಸಮಾನತೆಯ ಸಾಂವಿಧಾನಿಕ ತತ್ವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...