Homeಕರ್ನಾಟಕಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿ ಟ್ವೀಟ್ ಮಾಡಿದ್ದು, ಟ್ವಿಟರ್ ವಾರ್‌ಗೆ ಕಾರಣವಾಗಿದೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದು ತಿರುಗೇಟು ನೀಡಿದ್ದರು. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್‌ ಏಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...