Homeಕರ್ನಾಟಕಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿ ಟ್ವೀಟ್ ಮಾಡಿದ್ದು, ಟ್ವಿಟರ್ ವಾರ್‌ಗೆ ಕಾರಣವಾಗಿದೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದು ತಿರುಗೇಟು ನೀಡಿದ್ದರು. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್‌ ಏಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...